Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ತೀರ್ಪು ಯಾಕೆ ನಮ್ಮ ವಿರುದ್ಧವಾಯಿತು..?

ತೀರ್ಪು ಯಾಕೆ ನಮ್ಮ ವಿರುದ್ಧವಾಯಿತು..?

ಡಾ. ಸಿ.ಎಸ್ ದ್ವಾರಕಾನಾಥ್ಡಾ. ಸಿ.ಎಸ್ ದ್ವಾರಕಾನಾಥ್30 July 2016 11:44 PM IST
share
ತೀರ್ಪು ಯಾಕೆ ನಮ್ಮ ವಿರುದ್ಧವಾಯಿತು..?

ಮಹಾದಾಯಿ ನ್ಯಾಯಾಧಿಕರಣದ ಮಧ್ಯಾಂತರ ತೀರ್ಪು ನಮ್ಮ ವಿರುದ್ಧವಾಗಿದೆ..!? ಕರ್ನಾಟಕ ನೆಲ, ಜಲ, ನದಿ, ವನಗಳ ಬಗ್ಗೆ ಕಾಳಜಿ ಇಟ್ಟುಕೊಂಡ ಒಬ್ಬ ವಕೀಲನಾಗಿ ನನಗನಿಸಿದ್ದನ್ನು ನಿಮ್ಮೆಡನೆ ಹಂಚಿಕೊಳ್ಳುತ್ತಿದ್ದೇನೆ.

ಕಾವೇರಿ ನ್ಯಾಯಾಧಿಕರಣವಾಗಲಿ, ಮಹಾದಾಯಿ ನ್ಯಾಯಾಧಿಕರಣವಾಗಲಿ ಅಥವಾ ಸುಪ್ರೀಂ ಕೋರ್ಟ್ ಅಥವಾ ಯಾವುದೇ ಹೈಕೋರ್ಟುಗಳಲ್ಲಿ ಸಹಜವಾಗಿ ಸದಾ ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾಗಿ ಯಾಕೆ ತೀರ್ಪು ಬರುತ್ತೆ? ಎನ್ನುವುದನ್ನು ಪರಾಮರ್ಶಿಸಿ ನೋಡಿ.. ನಿಮಗೆ ಸತ್ಯ ದರ್ಶನವಾಗುತ್ತದೆ..

ಕಾವೇರಿ ಇಷ್ಯೂ ತೆಗೆದುಕೊಳ್ಳಿ

ಎಂದಾದರೂ ನಮ್ಮ ವಕೀಲರು ಸಮರ್ಪಕವಾಗಿ ವಾದ ಮಂಡಿಸಿದ್ದಾರೆಯೇ..? ನ್ಯಾಯಾಲಯ ಕೇಳಿದ ದಾಖಲೆಗಳನ್ನು ನೀಡಿದ್ದಾರೆಯೇ? ಪ್ರತಿ ಸರಕಾರ ಬಂದಾಗಲೂ ವಕೀಲರು ಬದಲಾಗುತ್ತಿರುತ್ತಾರೆ.. ನಮ್ಮ ಪರ ವಾದ ಮಾಡುವವರು ಸದಾ ಕರ್ನಾಟಕದವರಲ್ಲದ ವಕೀಲರೇ..!?

ತಮಿಳುನಾಡಿನ ಪರ ಸದಾ ಪರಾಶರನ್ ಎಂಬ ಹಿರಿಯ ಮುತ್ಸದ್ದಿಯೇ ವಾದಿಸುತ್ತಾರೆ. ಯಾವುದೇ ಸರಕಾರವಿದ್ದರೂ ಕಾವೇರಿ ವಿಷಯ ಬಂದಾಗ ಇವರೇ ಶಾಶ್ವತ ವಕೀಲರು! ರಾಜ್ಯದ ಹಿತಾಸಕ್ತಿ ಬಂದಾಗ ಪರಾಶರನ್ ತಮ್ಮ ರಾಜ್ಯಕ್ಕಾಗಿ ಕಾಳಜಿಯಿಂದ ವಾದಿಸಿದರೆ ನಮ್ಮ ಹೊರರಾಜ್ಯ ವಕೀಲರು ಕೇವಲ ಫೀಜ್ ಗಾಗಿ ವಾದಿಸುತ್ತಾರೆ!!

ತಮಿಳುನಾಡಿನ ಅಧಿಕಾರಿಗಳು ಎಲ್ಲಾ ದಾಖಲಾತಿಗಳನ್ನು ವ್ಯವಸ್ಥಿತವಾಗಿ ತಮ್ಮ ವಕೀಲರಿಗೆ ಒದಗಿಸಿದರೆ ನಮ್ಮವರು ಕಾಟಾಚಾರಕ್ಕೆ ಬಂದವರಂತಿರುತ್ತಾರೆ!

ನಮ್ಮ ವಕೀಲರು ಆಗಾಗ ಬದಲಾಗುವುದರಿಂದ ಸಮಸ್ಯೆಯ ಆಳ ಅವರ ಅರಿವಿಗೆ ಪರಿಚಯವಾಗಿರುವುದೇ ಇಲ್ಲ. ಈ ಎಲ್ಲದರಿಂದಾಗಿ ನಮ್ಮ ವಾದವನ್ನು ಸಮರ್ಥವಾಗಿ ಮಂಡಿಸಲಾರದೆ, ದಾಖಲಾತಿಗಳನ್ನು ಒದಗಿಸಲಾರದೆ ಹಿಮ್ಮೆಟ್ಟುತಿದ್ದೇವೆ. ಈ ಸತ್ಯ ಅರಿಯದ ನಾವು ನ್ಯಾಯಾದಿಕರಣಗಳನ್ನು ದೂರುತ್ತೇವೆ.

ಈಗಿನ ಮಹಾದಾಯಿ ಮಧ್ಯಾಂತರ ತೀರ್ಪನ್ನೇ ನೋಡಿ.. ನ್ಯಾಯಾಧಿಕರಣಗಳು ಪಟ್ಟಿ ಮಾಡಿರುವ ನಮ್ಮ ದೌರ್ಬಲ್ಯಗಳನ್ನು ಗಮನಿಸಿ..

1. ಯೋಜನೆಗೆ ಸಂಬಂಧಿಸಿದ ತಾಂತ್ರಿಕ ಯೋಜನಾ ವರದಿ ಹಾಗೂ ತಾಂತ್ರಿಕ ಸಾಧ್ಯಾಸಾಧ್ಯತಾ ವರದಿಯನ್ನು ನ್ಯಾಯಾಧಿಕರಣಕ್ಕೆ ಸಲ್ಲಿಸಿಲ್ಲ.

2. ಪರಿಸರ ಇಲಾಖೆಯ ಅನುಮೋದನೆಯನ್ನೇ ಪಡೆಯದೆ ಸರಕಾರ ಯೋಜನೆಯ ಅನುಷ್ಠಾನಕ್ಕೆ ಮುಂದಾಗಿರುವುದು ಆಕ್ಷೇಪಾರ್ಹ.

3. ನೀರು ಪಡೆಯುವ ಸಂದರ್ಭದಲ್ಲಿ ಬರಗಾಲ ಇದೆ ಎನ್ನುವುದನ್ನು ಕರ್ನಾಟಕ ಹೇಗೆ ಸಾಬೀತುಪಡಿಸುತ್ತದೆ? ಮಳೆಯನ್ನು ಆಧರಿಸಿಯೋ ಅಥವಾ ಡ್ಯಾಂನಲ್ಲಿ ನೀರಿನ ಪ್ರಮಾಣವನ್ನು ಗಮನಿಸಿಯೋ ಎನ್ನುವುದು ಸ್ಪಷ್ಟವಾಗಿಲ್ಲ.

4. ಹೆಚ್ಚುವರಿ ನೀರಿನ ಲಭ್ಯತೆ ಇದೆ ಎನ್ನುವುದನ್ನು ಸಾಬೀತುಪಡಿಸಲು ಅಗತ್ಯ ಸಾಕ್ಷಾಧಾರಗಳನ್ನು ಒದಗಿಸಿಲ್ಲ.

5. ತಿರುವು ಯೋಜನೆಯ ಸಾಧಕ-ಬಾಧಕಗಳ ಕುರಿತು ವೈಜ್ಞಾನಿಕ ಅಧ್ಯಯನ ನಡೆಸಿಲ್ಲ. (ಆಧಾರ: ಕನ್ನಡ ಪ್ರಭ)

ಈಗ ಹೇಳಿ ನ್ಯಾಯಾಧಿಕರಣದ ತೀರ್ಪು ಯಾವ ಕಾರಣದಿಂದಾಗಿ ನಮ್ಮ ವಿರುದ್ದವಾಯಿತು..? ಇದಕ್ಕೆ ನೇರ ಹೊಣೆ ಸರಕಾರ ಮತ್ತು ನಮ್ಮ ಕಾನೂನು ಪಂಡಿತರಲ್ಲವೆ..?

ರಾಜ್ಯವೊಂದಕ್ಕೆ ತನ್ನ ನೆಲ, ಜಲ, ನದಿ, ಕಾನನಗಳನ್ನು ಕಾಪಾಡಿಕೊಳ್ಳುವ ಬಗ್ಗೆ ಕನಿಷ್ಠ ಕಾಳಜಿ, ಅವನ್ನು ನಾಡಿಗಾಗಿ ಉಳಿಸಬೇಕಾದ ಇಚ್ಛಾಶಕ್ತಿಗಳಿಲ್ಲದಿದ್ದರೆ ಜನನಾಡಿಗೆ ಇಂತಹ ಕಷ್ಟ ತಪ್ಪಿದ್ದಲ್ಲ. ಅದು ಯಾವುದೇ ಪಕ್ಷದ ಸರಕಾರವಾಗಿರಲಿ.. ಎಲ್ಲರಿಗೂ ಅನ್ವಯಿಸುತ್ತೆ.. ಇದು ನಮ್ಮ ನಾಚಿಕೆಗೇಡು.

share
ಡಾ. ಸಿ.ಎಸ್ ದ್ವಾರಕಾನಾಥ್
ಡಾ. ಸಿ.ಎಸ್ ದ್ವಾರಕಾನಾಥ್
Next Story
X