ಮನೆಗೆ ನುಗ್ಗಿ ಮಹಿಳೆಯರ ಮೇಲೆ ಹಲ್ಲೆ ನಡೆಸುತ್ತಿದ್ದ ವ್ಯಕ್ತಿಯ ಸೆರೆ
![ಮನೆಗೆ ನುಗ್ಗಿ ಮಹಿಳೆಯರ ಮೇಲೆ ಹಲ್ಲೆ ನಡೆಸುತ್ತಿದ್ದ ವ್ಯಕ್ತಿಯ ಸೆರೆ ಮನೆಗೆ ನುಗ್ಗಿ ಮಹಿಳೆಯರ ಮೇಲೆ ಹಲ್ಲೆ ನಡೆಸುತ್ತಿದ್ದ ವ್ಯಕ್ತಿಯ ಸೆರೆ](https://www.varthabharati.in/sites/default/files/images/articles/2016/08/1/halle.gif)
ಮಂಗಳೂರು, ಆ.1; ನಗರದ ಕದ್ರಿ ದೇವಸ್ಥಾನದ ಬಳಿ ಇಂದು ಬೆಳಗ್ಗೆ ಮನೆಯೊಂದಕ್ಕೆ ನುಗ್ಗಿ ಮಹಿಳೆಯರ ಮೇಲೆ ಹಲ್ಲೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕದ್ರಿ ದೇವಸ್ಥಾನದ ಬಳಿಯಿರುವ ಮನೆಯಲ್ಲಿ ದೇವಸ್ಥಾನದ ಮಹಿಳಾ ಸಿಬ್ಬಂದಿ ಗಳು ವಾಸ್ತವ್ಯವಿದ್ದಾರೆ. ಈ ಮನೆಗೆ ಇಂದು ಬೆಳಗ್ಗೆ ಮರದ ತುಂಡಿನಿಂದ ಪ್ರವೇಶಿಸಿದ ಅಪರಿಚಿತನೋರ್ವ ವಿನಾಕಾರಣ ಅಲ್ಲಿರುವ ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾನೆ. ಮಹಿಳೆಯರ ಕೂಗಾಟಕ್ಕೆ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಲ್ಲೆಗೈಯುತ್ತಿದ್ದ ವ್ಯಕ್ತಿಯನ್ನು ಹಿಡಿದು ಕದ್ರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಹಲ್ಲೆ ಮಾಡಿರುವ ವ್ಯಕ್ತಿ ಮಾನಸಿಕ ಅಸ್ವಸ್ಥ ಇರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
Next Story