Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗ್ರಾಹಕರಿಂದ ಹೆಚ್ಚುವರಿ ವಿದ್ಯುತ್...

ಗ್ರಾಹಕರಿಂದ ಹೆಚ್ಚುವರಿ ವಿದ್ಯುತ್ ಡೆಪಾಸಿಟ್ ವಸೂಲಿ: ಮೆಸ್ಕಾಂ ಕಚೇರಿಗೆ ಮುತ್ತಿಗೆ

ವಾರ್ತಾಭಾರತಿವಾರ್ತಾಭಾರತಿ1 Aug 2016 6:18 PM IST
share
  • ಗ್ರಾಹಕರಿಂದ ಹೆಚ್ಚುವರಿ ವಿದ್ಯುತ್ ಡೆಪಾಸಿಟ್ ವಸೂಲಿ: ಮೆಸ್ಕಾಂ ಕಚೇರಿಗೆ ಮುತ್ತಿಗೆ
  • ಗ್ರಾಹಕರಿಂದ ಹೆಚ್ಚುವರಿ ವಿದ್ಯುತ್ ಡೆಪಾಸಿಟ್ ವಸೂಲಿ: ಮೆಸ್ಕಾಂ ಕಚೇರಿಗೆ ಮುತ್ತಿಗೆ

ಉಳ್ಳಾಲ,ಆ.1: ಸಿಪಿಐಎಂ ಉಳ್ಳಾಲ ವಲಯ ಸಮಿತಿಯು ಗ್ರಾಹಕರಿಂದ ಹೆಚ್ಚುವರಿ ವಿದ್ಯುತ್ ಡೆಪಾಸಿಟ್ ವಸೂಲಿ ಮತ್ತು ವಿದ್ಯುತ್ ದರ ಹೆಚ್ಚಳವನ್ನು ವಿರೋಧಿಸಿ ಸೋಮವಾರದಂದು ತೊಕ್ಕೊಟ್ಟಿನ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು.
  ಸಿಪಿಐಎಂ ಜಿಲ್ಲಾ ಮುಖಂಡ ಸುನಿಲ್ ಕುಮಾರ್ ಬಜಾಲ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ವಿದ್ಯುತ್ ಸಂಪರ್ಕ ಪಡೆಯುವ ಸಂಧರ್ಭದಲ್ಲೇ ಗ್ರಾಹಕರು ಬೇಕಾದಷ್ಟು ಪ್ರಮಾಣದ ಮೊತ್ತವನ್ನು ಮೆಸ್ಕಾಂಗೆ ಡೆಪಾಸಿಟ್ ಆಗಿ ಪಾವತಿಸಿದ್ದರೂ ಕೂಡಾ ಮತ್ತೆ ಮತ್ತೆ ಮೆಸ್ಕಾಂನವರು ಡೆಪಾಸಿಟ್ ಹಣವನ್ನು ಸುಳಿಗೆ ಮಾಡುತ್ತಿದ್ದು, ಒಂದು ವೇಳೆ ಹಣ ಪಾವತಿಸದಿದ್ದಲ್ಲಿ ವಿದ್ಯುತ್ ಕಂಬದಿಂದಲೇ ಸಂಪರ್ಕ ಕಡಿತಗೊಳಿಸಿ ಅಮಾನವೀಯತೆ ಪ್ರದರ್ಶಿಸುತ್ತಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 70 ವರುಷ ಸಲ್ಲುತ್ತಿದ್ದರೂ ಸಹ ಈಗಲೂ ಹೆದ್ದಾರಿಗಳು, ಬೀದಿಗಳು ವಿದ್ಯುತನ್ನೇ ಕಾಣದಂತಾಗಿದೆ. ಮುಂದಿನ ದಿವಸಗಳಲ್ಲಿ ಈ ವ್ಯವಸ್ಥೆಯನ್ನು ಸರಿಪಡಿಸದಿದ್ದಲ್ಲಿ 2008 ರ ರೀತಿಯಲ್ಲಿ ಮೆಸ್ಕಾಂ ವಿರುದ್ಧ ಉಗ್ರವಾಗಿ ಪ್ರತಿಭಟಿಸುವುದಾಗಿ ಎಚ್ಚರಿಸಿದರು.
       ಸಿಪಿಐಎಂ ಉಳ್ಳಾಲ ಮುಖಂಡರಾದ ಕೃಷ್ಣಪ್ಪ ಸಾಲಿಯಾನ್ ಮಾತನಾಡಿ ಸಿಪಿಐಎಂ ಇದುವರೆಗೂ ಪ್ರಚಾರಕ್ಕೆ ಬಯಸದೆ, ನಿಜವಾದ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸುತ್ತಾ ಬಂದಿದೆ. ಈ ಹಿಂದೆಯೂ ಇದೇ ರೀತಿಯ ಡೆಪಾಸಿಟ್ ವಸೂಲಿಯ ಸಮಸ್ಯೆ ಬಂದಾಗ ಕೆಂಪು ಬಾವುಟದ ನೇತೃತ್ವದಲ್ಲಿ ಉಗ್ರ ಪ್ರತಿಭಟನೆ ನಡೆದಿದ್ದು, ಆ ಸಂಧರ್ಭ ಮೆಸ್ಕಾಂ ಅಧಿಕಾರಿಗಳೇ ಪ್ರತಿಭಟನಾಕಾರರಲ್ಲಿ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿದ್ದರು. ಈವಾಗಲೂ ಸಮಯ ಮೀರಿಲ್ಲ ಮೆಸ್ಕಾಂ ಅಧಿಕಾರಿಗಳು ಎಚ್ಚೆತ್ತು ಡೆಪಾಸಿಟ್ ವಸೂಲಿಯನ್ನು ನಿಲ್ಲಿಸದಿದ್ದಲ್ಲಿ ಕೆಂಪು ಬಾವುಟಗಳು ಮತ್ತೊಮ್ಮೆ ಉಗ್ರರಾಗುವ ಎಚ್ಚರಿಕೆ ನೀಡಿದರು.
     ಪ್ರತಿಭಟನಾಕಾರರು ಮೆಸ್ಕಾಂನ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ದಯಾನಂದ್ ಅವರಿಗೆ ಮೂರು ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು.
    ಸಿಪಿಐಎಂ ಮುಖಂಡರಾದ ಜಯಂತ್ ನಾಯ್ಕ,ಪದ್ಮಾವತಿ ಶೆಟ್ಟಿ,ನಾರಾಯಣ ತಲಪಾಡಿ,ಬಾಬು ಪಿಲಾರು,ಅರುಣ್ ಕುಮಾರ್ ತೊಕ್ಕೊಟ್ಟು,ಜಯಂತ್ ಅಂಬ್ಲಮೊಗರು,ವಿಲಾಸಿನಿ ಬಬ್ಬುಕಟ್ಟೆ ಮೊದಲಾದವರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X