Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೌದಿ ಅರೆಬಿಯಾದಲ್ಲಿ ಉದ್ಯೋಗ ವಂಚಿತ...

ಸೌದಿ ಅರೆಬಿಯಾದಲ್ಲಿ ಉದ್ಯೋಗ ವಂಚಿತ ಭಾರತೀಯರ ಶೀಘ್ರ ವಾಪಾಸಾತಿಗೆ ಸರಕಾರ ಮುಂದಾಗಲಿ: ಪಿ.ಕೆ. ಕುಂಞಾಲಿಕುಟ್ಟಿ

ವಾರ್ತಾಭಾರತಿವಾರ್ತಾಭಾರತಿ1 Aug 2016 7:10 PM IST
share
ಸೌದಿ ಅರೆಬಿಯಾದಲ್ಲಿ ಉದ್ಯೋಗ ವಂಚಿತ ಭಾರತೀಯರ ಶೀಘ್ರ ವಾಪಾಸಾತಿಗೆ ಸರಕಾರ ಮುಂದಾಗಲಿ: ಪಿ.ಕೆ. ಕುಂಞಾಲಿಕುಟ್ಟಿ

ಮಂಗಳೂರು,ಆ.1 : ಸೌದಿ ಅರೆಬಿಯಾದಲ್ಲಿ ನೌಕರಿ ಕಳೆದುಕೊಂಡಿರುವ ಭಾರತೀಯ ಕಾರ್ಮಿಕರನ್ನು ಅತೀ ಶೀಘ್ರವಾಗಿ ವಾಪಸ್ ಕರೆಸಿಕೊಳ್ಳುವ ಕಾರ್ಯ ತುರ್ತಾಗಿ ನಡೆಯಬೇಕು ಮತ್ತು ರಾಜ್ಯ ಸರ್ಕಾರಗಳು ಕೆಲಸ ಕಳೆದುಕೊಂಡವರಿಗೆ ಪರ್ಯಾಯ ಉದ್ಯೋಗ ಕಲ್ಪಿಸಬೇಕು ಎಂದು ಕೇರಳದ ಶಾಸಕ ಪಿ.ಕೆ. ಕುಂಞಾಲಿಕುಟ್ಟಿ ಆಗ್ರಹಿಸಿದ್ದಾರೆ.

ನಗರದಲ್ಲಿ ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಸೌದಿ ಅರೇಬಿಯಾದಲ್ಲಿ ನಿರ್ಮಾಣ ಕಂಪೆನಿಯೊಂದರ 10 ಸಾವಿರ ಭಾರತೀಯ ಉದ್ಯೋಗಿಗಳನ್ನು ಕೆಲಸದಿಂದ ಕಿತ್ತೆಸೆದಿದ್ದು, ಅವರಲ್ಲಿ ಕರ್ನಾಟಕ ಮತ್ತು ಕೇರಳದ ಸುಮಾರು ಎರಡು ಸಾವಿರದಷ್ಟು ಇದ್ದಾರೆ ಎಂದು ಅಂದಾಜಿಸಲಾಗಿದೆ. ಅವರ ಪರಿಸ್ಥಿತಿ ಗಂಭೀರವಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿದರು.

ಅಂದಾಜು 200 ರಷ್ಟು ವಿದೇಶಿ ಕಂಪೆನಿಗಳು ಮುಚ್ಚುವ ಭೀತಿಯಲ್ಲಿದ್ದು, ಹುದ್ದೆಕಳೆದುಕೊಳ್ಳುವವರ ಸಂಖ್ಯೆ ಏರಿಕೆಯಾಗಲಿದೆ. ಹೀಗಾಗಿ ಆಯಾಯ ರಾಜ್ಯ ಸರ್ಕಾರಗಳು ಹೆಲ್ಪ್‌ಡೆಸ್ಕ್‌ನ್ನು ಆರಂಭಿಸಬೇಕು. ಅಲ್ಲಿ ಸಿಲುಕಿರುವ ತಮ್ಮ ರಾಜ್ಯ ಸಂತ್ರಸ್ಥರ ಪುನರ್ವಸತಿ ಕಾರ್ಯಕ್ಕೆ ರಾಜ್ಯ ಸರ್ಕಾರಗಳು ಕೈಜೋಡಿಸಬೇಕು. ಕೇರಳ ಸರ್ಕಾರ ಈಗಾಗಲೇ ಸಂತ್ರಸ್ಥ ಕಾರ್ಮಿಕರೊಂದಿಗೆ ಸಂಪರ್ಕದಲ್ಲಿದೆ. ಮಲಯಾಳಿ ಸಂಘಗಳು ಅವರ ನೆರವಿಗೆ ಸ್ಪಂದಿಸುತ್ತಿವೆ .ಕೆಲಸ ಕಳೆದುಕೊಂಡವರಲ್ಲಿ ಹೆಚ್ಚಿನವರು ಉತ್ತರ ಭಾರತದ ನಾಗರಿಕರು. ಸುಮಾರು ಒಂದು ಸಾವಿರದಷ್ಟು ಕೇರಳ ರಾಜ್ಯದ ನಾಗರಿಕರಿದ್ದು, ಅಷ್ಟೇ ಸಂಖ್ಯೆಯ ಕನ್ನಡಿಗರೂ ಇರುವ ಸಾಧ್ಯತೆಯನ್ನು ಅಂದಾಜಿಸಲಾಗಿದೆ. ಕೇರಳ ಸರ್ಕಾರ ಈಗಾಗಲೇ ಸಂತ್ರಸ್ತರನ್ನು ಭಾರತಕ್ಕೆ ವಾಪಸ್ ಕರೆತರುವ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ. ಈ ಕುರಿತು ಕೇರಳ ಮುಖ್ಯಮಂತ್ರಿಯ ಜತೆ ಮಾತುಕತೆ ನಡೆದಿದ್ದು, ಅಲ್ಲಿನ ಮುಸ್ಲಿಂ ಸಂಘಟನೆಗಳ ಸಹಕಾರ ಪಡೆಯಲಾಗುತ್ತಿದೆ ಎಂದು ಹೇಳಿದರು.

ಸೌದಿ ಅರೇಬಿಯಾದಲ್ಲಿ ಕೆಲಸ ಕಳೆದುಕೊಂಡವರಿಗೆ ನೀರು, ಆಹಾರದ ತೀವ್ರ ಅಭಾವ ಉಂಟಾಗಿದ್ದು, ಅವರು ವಾಸಿಸುತ್ತಿರುವ ವಾತಾವರಣವೂ ಮಲಿನವಾಗಿದೆ. ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಅವರಿಗೆ ಕಂಪೆನಿಯಿಂದ ಸರಿಯಾದ ವೇತನ ಸಿಕ್ಕಿಲ್ಲ. ಕೂಡಲೆ ಅವರನ್ನು ಕರೆತರದೆ ಇದ್ದರೆ ಸಮಸ್ಯೆ ಇನ್ನಷ್ಟು ಹದಗೆಡಲಿದೆ. ಈ ನಿಟ್ಟಿನಲ್ಲಿ ಎಲ್ಲ ರಾಜ್ಯಗಳಲ್ಲಿ ಸಹಾಯವಾಣಿಯನ್ನು ಆರಂಭಿಸಿ, ಎಲ್ಲ ರಾಜ್ಯ ಸರ್ಕಾರಗಳ ಸಂಯೋಜನೆಯಿಂದ ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸಬೇಕು ಎಂದು ಕುಂಞಕುಟ್ಟಿ ಸಲಹೆ ನೀಡಿದರು.

ಈಗ ಎದುರಾಗಿರುವುದು ಅತ್ಯಂತ ತುರ್ತು ಪರಿಸ್ಥಿತಿ. ಒಂದು ದಿನ ವಿಳಂಬ ಮಾಡದಂತೆ ಕೆಲಸ ಮಾಡಬೇಕು. ಕೇಂದ್ರ ಸಚಿವರು ಈಗಾಗಲೇ ಸೌದಿ ಅರೇಬಿಯಾದಲ್ಲಿದ್ದಾರೆ. ಆದರೆ ಚುರುಕಿನ ಕಾರ್ಯಾಚರಣೆ ಕಂಡುಬಂದಿಲ್ಲ. ಯುಪಿಎ ಸರ್ಕಾರವಿದ್ದಾಗ ಇಂತಹ ಸಮಸ್ಯೆಗಳನ್ನು ಕ್ಷಿಪ್ರಗತಿಯಲ್ಲಿ ಇತ್ಯರ್ಥಪಡಿಸುತ್ತಿತ್ತು. ಅಂತಹ ಯುದ್ಧೋಪಾದಿಯ ಕೆಲಸ ಈಗ ಎನ್‌ಡಿಎ ಸರ್ಕಾರದಿಂದ ನಡೆಯಬೇಕಾಗಿದೆ ಎಂದರು.

  ಎಲ್ಲ ಸಂತ್ರಸ್ತರನ್ನು ಭಾರತಕೆ ಮರಳಿ ಕರೆತರುವುದಷ್ಟೇ ಅಲ್ಲ, ಅವರಿಗೆ ಇಲ್ಲಿ ಸರಿಯಾದ ಪುನರ್ವಸತಿ ಸೌಕರ್ಯಗಳನ್ನು ಕಲ್ಪಿಸಬೇಕು. ಸೌದಿ ಅರೇಬಿಯಾದ ಕಂಪೆನಿಯಿಂದ ಅವರಿಗೆ ಸಿಗಬೇಕಾದ ಸಂಪೂರ್ಣ ವೇತನ ದೊರಕಿಸಿಕೊಡಬೇಕು ಎಂದು ಅವರು ಒತ್ತಾಯಿಸಿದರು.

ಮಂಜೇಶ್ವರ ಶಾಸಕ ಅಬ್ದುಲ್‌ ರಜಾಕ್, ಮಂಗಳೂರಿನ ಮಾಜಿ ಮೇಯರ್ ಅಶ್ರಫ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X