Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೃದಯದಲ್ಲಿ ಹೆಚ್ಚುವರಿ ಕೋಣೆ:...

ಹೃದಯದಲ್ಲಿ ಹೆಚ್ಚುವರಿ ಕೋಣೆ: ಎ.ಜೆ.ಆಸ್ಪತ್ರೆಯಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ

ವಾರ್ತಾಭಾರತಿವಾರ್ತಾಭಾರತಿ1 Aug 2016 7:30 PM IST
share
ಹೃದಯದಲ್ಲಿ ಹೆಚ್ಚುವರಿ ಕೋಣೆ: ಎ.ಜೆ.ಆಸ್ಪತ್ರೆಯಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ

ಮಂಗಳೂರು,ಜು.31:ಹೃದಯದಲ್ಲಿ ಹೆಚ್ಚುವರಿ ಕೋಣೆ ಮತ್ತು ಎರಡು ರಂಧ್ರಗಳ ನ್ಯೂನತೆಯನ್ನೊಳಗೊಂಡಿದ್ದ ಎರಡು ವರ್ಷದ ಮಗುವಿನ ಯಶಸ್ವಿ ಶಸ್ತ್ರಚಿಕಿತ್ಸೆಯು ನಗರದ ಎ.ಜೆ.ಆಸ್ಪತ್ರೆಯಲ್ಲಿ ನಡೆದಿದೆ.

  ಅಂಕೋಲದ 2 ವರ್ಷದ ಮಗುವು ಆಟವಾಡುವಾಗ ಉಸಿರಾಟದ ತೊಂದರೆಯನ್ನು ಅನುಭಸುತಿತ್ತು. ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಮಗುವನ್ನು ಪರೀಕ್ಷಿಸಿದ ಮಕ್ಕಳ ಹೃದ್ರೋಗ ತಜ್ಞರಾದ ಡಾ. ಪ್ರೇಮ್ ಆಳ್ವರವರು ಹೃದಯದ ಸ್ಕ್ಯಾನ್ (ಎಕೋ)ನ ಮೂಲಕ ಈ ಮಗುವಿಗೆ ತೀರಾ ಅಪರೂಪದ ತೊಂದರೆಯಾಗಿರುವ ಕೊರ್ಟ್ರಿಯೇಟ್ರಿಟಮ್‌ನ್ನು ಪತ್ತೆಹಚ್ಚಿದ್ದರು.

ಇದೊಂದು ಹೃದಯದಲ್ಲಿ ಹೆಚ್ಚುವರಿ ಕೋಣೆ ಮತ್ತು ಎರಡು ರಂದ್ರಗಳನ್ನೊಳಗೊಂಡ ನ್ಯೂನತೆಯಾಗಿದೆ. ಹೃದಯದಲ್ಲಿ ನಾಲ್ಕು ಕೋಣೆಗಳಿದ್ದು 2 ಮೇಲ್ಕೋಣೆ ಮತ್ತು 2 ಕೆಳಕೋಣೆಗಳೆಂದು ಗುರುತಿಸಲಾಗುತ್ತದೆ. ಆದರೆ ಈ ಮಗುವಿಗೆ ಹೃದಯದಲ್ಲಿ 3 ಮೇಲ್ಕೋಣೆಗಳಿದ್ದು ಎರಡು ರಂದ್ರಗಳಿದ್ದವು. ಈ ಮಗುವಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ಅಗತ್ಯವಿದ್ದು ಶಸ್ತ್ರಚಿಕಿತ್ಸೆಗಾಗಿ ಮಕ್ಕಳ ಹ್ರದ್ರೋಗ ಶಸ್ತ್ರಚಿಕಿತ್ಸಾ ತಜ್ಞರಾದ ಡಾ. ಗೌರವ್ ಶೆಟ್ಟಿಯವರು ಶಸ್ತ್ರಚಿಕಿತ್ಸೆಯನ್ನು ಕೈಗೆತ್ತಿಕೊಂಡರು. ಮಗುಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು ಒಂದು ವಾರದೊಳಗೆ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಯಿತು. ಮುಖ್ಯ ಅರಿವಳಿಕೆ ತಜ್ಞರಾದ ಡಾ. ಗುರುರಾಜ್ ತಂತ್ರಿಯವರು ಅರಿವಳಿಕೆ ಮತ್ತು ತೀವ್ರ ನಿಗಾ ಘಟಕದ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದರು. ಮಗುವು ಈಗ ಸಂಪೂರ್ಣ ಆರೋಗ್ಯದಿಂದಿದ್ದು ತನ್ನ ಮಿತ್ರರೊಂದಿಗೆ ಮನೆಯಲ್ಲಿ ಆರಾಮವಾಗಿ ಆಟವಾಡುತ್ತಿದೆ. ಈ ಯಶಸ್ವಿ ಶಸ್ತ್ರಚಿಕಿತ್ಸೆಯನ್ನು ಸರಕಾರಿ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಮಾಡಲಾಯಿತು.

     ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮಕ್ಕಳ ಹೃದ್ರೋಗ ವಿಭಾಗವು ನವಜಾತ ಶಿಶುಗಳು, ಶಿಶುಗಳು ಮತ್ತು ಮಕ್ಕಳ ಅನೇಕ ಜನ್ಮತಃ ಹೃದ್ರೋಗ ದೋಷಗಳಿಗೆ ಸರಳ ಮತ್ತು ಸಂಕೀರ್ಣ ರೀತಿಯ ಚಿಕಿತ್ಸೆಯನ್ನು ನೀಡಲು ವಿಶ್ವದರ್ಜೆಗೆ ಸಮನಾದ ಸೌಲಭ್ಯಗಳನ್ನು ಹೊಂದಿದೆ. ಈ ವಿಭಾಗವು ಮಕ್ಕಳ ಹೃದ್ರೋಗ ಚಿಕಿತ್ಸೆ, ಮಕ್ಕಳ ಹೃದ್ರೋಗ ಶಸ್ತ್ರಚಿಕಿತ್ಸೆ, ಮಕ್ಕಳ ಹೃದಯ ಅರಿವಳಿಕೆ, ಮಕ್ಕಳ ಹೃದಯ ತೀವ್ರ ನಿಗಾ ಘಟಕವನ್ನು ಒಳಗೊಂಡಿದ್ದು ವಿಶೇಷ ಪರಿಣತಿ ಹೊಂದಿರುವ ವೈದ್ಯರು, ದಾದಿಯರು, ಉಸಿರಾಟದ ಚಿಕಿತ್ಸಕರನ್ನು ಒಳಗೊಂಡಿದೆ ಎಂದು ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವೈದ್ಯಕೀಯ ನಿರ್ದೇಶಕರಾದ ಡಾ. ಪ್ರಶಾಂತ್ ಮಾರ್ಲ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X