Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೀಘ್ರವೇ ಸೌದಿ ಅರೇಬಿಯದಲ್ಲಿ ಸಿಲುಕಿರುವ...

ಶೀಘ್ರವೇ ಸೌದಿ ಅರೇಬಿಯದಲ್ಲಿ ಸಿಲುಕಿರುವ ಭಾರತೀಯರ ತೆರವು: ಸುಷ್ಮಾ

ವಾರ್ತಾಭಾರತಿವಾರ್ತಾಭಾರತಿ1 Aug 2016 11:45 PM IST
share

ಹೊಸದಿಲ್ಲಿ, ಆ.1: ಸೌದಿ ಅರೇಬಿಯದಲ್ಲಿ ಸಿಲುಕಿ ಕೊಂಡಿರುವ ಸುಮಾರು 10 ಸಾವಿರ ಭಾರತೀಯರನ್ನು ತೆರವುಗೊಳಿಸಲಾಗುವುದು. ಅವರಿಗೆಲ್ಲ ಆಹಾರ ಪದಾರ್ಥಗಳನ್ನು ಹಂಚಿಕೆ ಮಾಡಿರುವುದರಿಂದ ಯಾರೊಬ್ಬರೂ ಹಸಿದಿರುವಂತಿಲ್ಲವೆಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸಂಸತ್ತಿಗಿಂದು ತಿಳಿಸಿದ್ದಾರೆ.

 ತೆರವು ಕಾರ್ಯಾಚರಣೆಯ ಮೇಲ್ವಿಚಾರಣೆಗಾಗಿ ವಿದೇಶಾಂಗ ಸಹಾಯಕ ಸಚಿವ ವಿ.ಕೆ. ಸಿಂಗ್ ಸೌದಿ ಅರೇಬಿಯಕ್ಕೆ ಹೋಗಲಿದ್ದಾರೆಂದು ಸಂಸತ್ತಿನ ಉಭಯ ಸದನಗಳಲ್ಲಿ ನೀಡಿದ ಹೇಳಿಕೆಯೊಂದರಲ್ಲಿ ಅವರು ಮಾಹಿತಿ ನೀಡಿದರು.
ಈ ಭಾರತೀಯರ ಭವಿಷ್ಯದ ಕುರಿತು ಲೋಕಸಭೆ ಹಾಗೂ ರಾಜ್ಯಸಭೆ ಗಳಲ್ಲಿ ಸದಸ್ಯರು ಕಳವಳ ವ್ಯಕ್ತಪಡಿಸಿದರು. ಅವರಿಗೆ ಆಹಾರ ಒದಗಿಸಲು ಭಾರತೀಯ ದೂತಾವಾಸವು 5 ಶಿಬಿರಗಳನ್ನು ತೆರೆದಿದೆ. ಇಂದು ಮುಂಜಾನೆಯವರೆಗೆ ಅಲ್ಲಿನ ವಿದ್ಯಮಾನದ ಬಗ್ಗೆ ತನಗೆ ಪ್ರತಿ ತಾಸಿಗೊಮ್ಮೆ ಮಾಹಿತಿ ಬಂದಿದೆಯೆಂದು ಸುಷ್ಮಾ ಸದಸ್ಯರನ್ನು ಸಮಾಧಾನಿಸಿದರು.
ನಮ್ಮ ಯಾವನೇ ಕಾರ್ಮಿಕ ಹಸಿದಿರುವಂತಿಲ್ಲ. ಇದು ಸಂಸತ್ತಿನ ಮೂಲಕ ನಾನು ದೇಶಕ್ಕೆ ಕೊಡುವ ಭರವಸೆಯಾಗಿದೆ. ನಾವು ಅವರೆಲ್ಲರನ್ನೂ ಭಾರತಕ್ಕೆ ಕರೆ ತರಲಿದ್ದೇವೆಂದು ಅವರು ತಿಳಿಸಿದರು.
ಸಿಲುಕಿಕೊಂಡಿರುವ ಕಾರ್ಮಿಕರ ಶೀಘ್ರ ತೆರವನ್ನು ಖಚಿತಪಡಿಸಲು ಸರಕಾರವು ಸೌದಿ ಅರೇಬಿಯದ ವಿದೇಶಾಂಗ ಹಾಗೂ ಕಾರ್ಮಿಕ ಕಚೇರಿಗಳ ಸಂಪರ್ಕದಲ್ಲಿದೆಯೆಂದು ಸುಷ್ಮಾ ಹೇಳಿದರು.
 ಉದ್ಯೋಗದಾತರ ನಿರಾಕ್ಷೇಪಣೆ ಪತ್ರದ ಹೊರತು, ಉದ್ಯೋಗಿಗಳಿಗೆ ನಿರ್ಗಮನ ವೀಸಾ ನೀಡಲು ಅಲ್ಲಿನ ಕಾನೂನಿನಲ್ಲಿ ಅನುಮತಿಯಿಲ್ಲ. ಆದರೆ, ಮಾಲಕರೆಲ್ಲ ತಮ್ಮ ಕಾರ್ಖಾನೆಗಳನ್ನು ಮುಚ್ಚಿ ದೇಶ ಬಿಟ್ಟದ್ದು, ನೌಕರರು ಅನಾಥ ಸ್ಥಿತಿಯಲ್ಲಿರುವಂತೆ ಮಾಡಿದ್ದಾರೆಂದು ಅವರು ತಿಳಿಸಿದರು.
ಅದರಿಂದಾಗಿ ಅವರ ನಿರಾಕ್ಷೇಪ ಪತ್ರವಿಲ್ಲದೆಯೇ ನೌಕರರಿಗೆ ನಿರ್ಗಮನ ವೀಸಾ ನೀಡುವಂತೆ ಸೌದಿ ಸರಕಾರಕ್ಕೆ ಭಾರತ ಸರಕಾರ ಮನವಿ ಮಾಡಿದೆ. ಸಂಬಂಧಿತ ಕಂಪೆನಿಗಳೊಂದಿಗಿನ ಲೆಕ್ಕಾಚಾರ ಮುಗಿಸುವ ಮೊದಲು ಅನೇಕ ತಿಂಗಳುಗಳಿಂದ ಸಂಬಳ ದೊರೆಯದ ಉದ್ಯೋಗಿಗಳ ಬಾಕಿ ತೀರಿಸುವಂತೆಯೂ ಒತ್ತಾಯಿಸಲಾಗಿದೆಯೆಂದು ಸುಷ್ಮಾ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X