Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿದ್ದೆಯಲ್ಲಿಯೂ ಬೆಚಿ್ಚ ಬೀಳಿಸುತ್ತಿರುವ...

ನಿದ್ದೆಯಲ್ಲಿಯೂ ಬೆಚಿ್ಚ ಬೀಳಿಸುತ್ತಿರುವ ಪೊಲೀಸರ ಲಾಠಿಗಳು

ವಾರ್ತಾಭಾರತಿವಾರ್ತಾಭಾರತಿ1 Aug 2016 11:57 PM IST
share

‘ಪೊಲೀಸರ ದೌರ್ಜನ್ಯ ನೆನೆದು ನಿದ್ದೆ ಮಾಡಲಾಗುತ್ತಿಲ್ಲ'

- ಮಂಜುನಾಥ ಕೆ.
ಬೆಂಗಳೂರು, ಆ.1: ಪೊಲೀಸರು ಎರಡು ವರ್ಷದ ಮಗುವಿನ ಕಪಾಳಕ್ಕೆ ಹೊಡೆಯುವಷ್ಟು ರಾಕ್ಷಸ ಪ್ರವೃತ್ತಿಯನ್ನು ತೋರುತ್ತಾರೆಂದು ಕನಸು ಮನಸಿನಲ್ಲಿಯೂ ಅಂದುಕೊಂಡಿರಲಿಲ್ಲ. ಪೊಲೀಸರ ದೌರ್ಜನ್ಯ ಕಾಡುತ್ತಿದ್ದು, ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ದೌರ್ಜನ್ಯಕ್ಕೆ ಈಡಾಗಿರುವ ಯಮನೂರು ಗ್ರಾಮದ ಎಚ್.ಕೆ.ಲಕ್ಕಣ್ಣ ಕಣ್ಣೀರಿಡುತ್ತಾರೆ.

ಶುಕ್ರವಾರ ಬೆಳಗ್ಗೆ ಯಮನೂರಿನಲ್ಲಿ ಪೊಲೀಸರು ನಡೆಸಿದ ದೌರ್ಜನ್ಯವನ್ನು ಪತ್ರಿಕೆಯೊಂದಿಗೆ ಹಂಚಿಕೊಂಡ ಅವರು, ಬೆಳ್ಳಂಬೆಳಗ್ಗೆಯೇ ಗ್ರಾಮಕ್ಕೆ ನೂರಾರು ಪೊಲೀಸರು ಆಗಮಿಸಿದರು. ದಿಢೀರನೆ ಮನೆಗಳಿಗೆ ನುಗ್ಗಿದ ಅವರು ಏನೊಂದು? ವಿಚಾರಣೆ ಮಾಡದೆ ಮುದುಕರು, ಮಕ್ಕಳೆನ್ನದೆ ಮನಬಂದಂತೆ ಥಳಿಸಿದರು ಎಂದು ಆರೋಪಿಸಿದರು.

ಅವಾಚ್ಯ ಶಬ್ದಗಳಿಂದ ನಿಂದನೆ: ಪೊಲೀಸರು ನಮ್ಮ ಹೆಣ್ಣು ಮಕ್ಕಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಆ ಪದಗಳನ್ನು ಹೇಳಲು ಸಾಧ್ಯವಾಗುತ್ತಿಲ್ಲ, ಅಷ್ಟು ಕೆಟ್ಟ ದಾಗಿವೆ. ನಮ್ಮ ಅಕ್ಕ, ತಂಗಿ, ತಾಯಂದಿರನ್ನು ನಿಂದಿ ಸಲು ಪೊಲೀಸರಿಗೇನಿದೆ ಅಧಿಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತುಂಬುಗರ್ಭಿಣಿಯ ಮೇಲೆ ಪೊಲೀಸರು ಹಲ್ಲೆ ಮಾಡಿರುವುದು ಎಷ್ಟು ಸರಿ? ಈ ಗರ್ಭಿಣಿ ಯಾವ ಅಂಗಡಿಯ ಮೇಲೆ ಕಲ್ಲು ತೂರಲು ಸಾಧ್ಯ? ಸುಮಾರು 70 ವರ್ಷದ ವೃದ್ಧೆಗೆ ಕೈ ಮುರಿದು ಹೋಗುವ ರೀತಿಯಲ್ಲಿ ಥಳಿಸಿದ್ದಾರೆ. ಈ ಮುದುಕಿ ಯಾವ ಆಫೀಸಿಗೆ ಬೆಂಕಿ ಇಡಲು ಸಾಧ್ಯ? ನಾವೇನು ತಪ್ಪು ಮಾಡಿದ್ದೇವೆಂದು ನಮ್ಮನ್ನು ಸಾಯುವಂತೆ ಥಳಿಸಿದ್ದಾರೆ ಎಂದು ಊರಿನ ಜನತೆ ಪ್ರಶ್ನಿಸುತ್ತಾರೆ. ಅವರಿಗೆ ಉತ್ತರಿಸಲು ನಮ್ಮಿಂದ ಸಾಧ್ಯವಾಗುತ್ತಿಲ್ಲ ಎಂದು ಎಚ್.ಕೆ.ಲಕ್ಕಣ್ಣ ರೋದಿಸಿದರು.
ಬಂಧಿತರನ್ನು ಬಿಡುಗಡೆ ಮಾಡಿ: 
ಉತ್ತರ ಕರ್ನಾ ಟಕ ಭಾಗದ ಜನತೆಯ ಬಾಯಾರಿಕೆಗಾಗಿ, ನೀರಿಗಾಗಿ ನಾವು ಹೋರಾಟ ಮಾಡಿದೆವು. ಆದರೆ, ನಮಗೆ ಸಿಕ್ಕ ಪ್ರತಿಫಲ ಲಾಠಿ ಏಟು ಹಾಗೂ ಬಂಧನ. ಹೋರಾಟ ದಲ್ಲಿ ಭಾಗಿಯಾಗಿಲ್ಲದ, ಅನಾರೋಗ್ಯ ಪೀಡಿತರನ್ನು ಪೊಲೀಸರು ಬಂಧಿಸಿದ್ದಾರೆ. ಕೂಡಲೇ ಹೋರಾಟ ಗಾರರನ್ನು ಹಾಗೂ ಅಮಾಯಕ ಬಂಧಿತರನ್ನು ಬಿಡುಗಡೆಗೊಳಿಸಿ, ಗ್ರಾಮದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

ಯಮನೂರಿನಲ್ಲಿ ಗರ್ಭಿಣಿಯರು ವೃದ್ಧರು ಹಾಗೂ ಮಕ್ಕಳ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ ಪೊಲೀಸರ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು. ಗಾಯಗೊಂಡ ರೈತರಿಗೆ, ಮಹಿಳೆಯರಿಗೆ ಸರಕಾರವೇ ಉಚಿತ ಚಿಕಿತ್ಸೆಯನ್ನು ನೀಡಬೇಕು. ಜ್ಯೋತಿ, ಸದಸ್ಯೆ, ರಾಜ್ಯ ಮಹಿಳಾ ಒಕ್ಕೂಟ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X