Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಘನಾಶಿನಿಯ ಒಡಲಲ್ಲಿ ಅಕ್ರಮ ಮರಳು ದಂಧೆ

ಅಘನಾಶಿನಿಯ ಒಡಲಲ್ಲಿ ಅಕ್ರಮ ಮರಳು ದಂಧೆ

ವಾರ್ತಾಭಾರತಿವಾರ್ತಾಭಾರತಿ2 Aug 2016 10:21 PM IST
share
ಅಘನಾಶಿನಿಯ ಒಡಲಲ್ಲಿ  ಅಕ್ರಮ ಮರಳು ದಂಧೆ

ಕಾರವಾರ, ಆ.2: ಉತ್ತರ ಕನ್ನಡ ಜಿಲ್ಲೆಯ ಅಘನಾಶಿನಿ ನದಿಯಲ್ಲಿ ಮರಳು ಮಾಫಿಯಾಗಳ ಹಾವಳಿ ಹೆಚ್ಚಿದೆ. ಈ ಬಗ್ಗೆ ಸಾಕಷ್ಟು ಭಾರಿ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಮರಳು ಗಾರಿಕೆಗೆ ಅವಕಾಶ ನೀಡಬಾರದು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಮೀನುಗಾರರು ಆಗ್ರಹಿಸಿದ್ದಾರೆ. ಅಘನಾಶಿನಿಯ ನದಿಯಲ್ಲಿ ಸತತ ಮರಳುಗಾರಿಕೆ ನಡೆಯುತ್ತಿರುವುದರಿಂದ ಮೀನುಗಾರರ ಬದುಕು ನಾಶದ ಅಂಚಿಗೆ ತಲುಪಿದೆ. ನದಿಯಲ್ಲಿ ದೊರೆಯುವ ಕಲಗ, ಬೆಳಚು(ಚಿಪ್ಪಿಕಲ್ಲು), ಏಡಿ, ಸಿಗಡಿ, ಹಾಗೂ ವಿವಿಧ ಜಾತಿಯ ಮೀನುಗಳು ಮರಳುಗಾರಿಕೆಯ ಆರ್ಭಟಕ್ಕೆ ಸಿಲುಕಿ ನಾಶವಾಗಿವೆ. ಇದರಿಂದ ಮೀನು ಗಾರರ ಬದುಕು ದುಸ್ತರವಾಗುತ್ತಿದೆ ಎಂದು ಸ್ಥಳೀಯರು ಆತಂಕ ವ್ಯಕ್ತ ಪಡಿಸಿದ್ದಾರೆ.

 ಕಳೆದ ನಾಲ್ಕು ವರ್ಷಗಳಿಂದ ಅಘನಾಶಿನಿ ನದಿಯ ಅಂಚಿನಲ್ಲಿರುವ ಮಿರ್ಜಾನ್, ಹೆಗಡೆ, ಕೋಡ್ಕಣಿ, ಸಶಿಹಿತ್ಲ, ಲುಕ್ಕೇರಿ ದಿವಗಿ ಹಾಗೂ ಮಣಕೋಣ ಮುಂತಾದ ಪ್ರದೇಶದಲ್ಲಿ ಇಂದು ಮರಳುಗಾರಿಕೆಯ ಹಾವಳಿ ಹೆಚ್ಚಿದೆ. ಮರಳುಗಾರಿಕೆ ಹೆಚ್ಚಿದ ಪರಿಣಾಮ ಮೀನುಗಳ ಸಂತತಿಗಳು ಕಾಣಸಿಗುತ್ತಿಲ್ಲ. ಇದೇ ಸ್ಥಿತಿ ಮುಂದುವರಿದರೆ ಮುಂದಿನ ದಿನದಲ್ಲಿ ಮೀನುಗಾರರು ಉದ್ಯೋಗವಿಲ್ಲದೆ ಊರು ತೊರೆಯಬೇಕಾದ ಸ್ಥಿತಿ ನಿರ್ಮಾಣವಾಗುವುದನ್ನು ಜಿಲ್ಲಾಡಳಿತ ತಪ್ಪಿಸ ಬೇಕಾಗಿದೆ ಎಂದು ಕೋರಿದ್ದಾರೆ. ಸ್ಥಳೀಯ ಮೀನುಗಾರ ಮುಖಂಡರು ಹಾಗೂ ಜನಪ್ರತಿನಿಧಿಗಳು ಹೊರ ರಾಜ್ಯಗಳ ಮರಳು ವ್ಯಾಪಾರಿಗಳೊಂದಿಗೆ ಕೈ ಜೋಡಿಸಿದ್ದು, ಸ್ಥಳೀಯ ಮೀನುಗಾರರಿಗೆ ಯಾರ ಬೆಂಬಲು ಲಭಿಸುತ್ತಿಲ್ಲ. ಅಲ್ಲದೆ, ಮಿರ್ಜಾನ್ ತಾರೀಬಾಗಿಲಿನ ನಿವಾಸಿಗಳಿಗೆ ರಾತ್ರಿ ಹಗಲು ಎನ್ನದೆ ಓಡಾಡುವ ಮರಳು ತುಂಬಿದ ಲಾರಿ ಕಿರಿಕಿರಿ ಉಂಟುಮಾಡುತ್ತಿದೆ. ಹೊರ ರಾಜ್ಯಗಳ ಅನೇಕ ಕಾರ್ಮಿಕರು ಮರಳು ತೆಗೆಯುವ ಕೆಲಸದಲ್ಲಿ ತೊಡಗಿಕೊಂಡು ಈ ಪ್ರದೇಶದಲ್ಲಿ ವಾಸವಾಗಿದ್ದುಕೊಂಡು ಗಾಂಜಾ ಸೇವನೆ ಸೇರಿದಂತೆ ಊರಿನ ಹೆಣ್ಣು ಮಕ್ಕಳಿಗೆ ಕಿರುಕುಳು ನೀಡುತ್ತಿದ್ದಾರೆ ಎಂದು ದೂರಿದ್ದಾರೆ.

ಅಘನಾಶಿನಿಯಲ್ಲಿ ಅಕ್ರಮವಾಗಿ ಮರಳು ತೆಗೆಯುವುದಕ್ಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸಂಪೂರ್ಣವಾಗಿ ಸಹಕರಿಸುತ್ತಿದ್ದಾರೆ. ಇದರಿಂದಾಗಿ ಮರಳುಗಣಿಗಾರಿಕೆ ನಡೆಸುವವರು ಯಾವುದೇ ಭಯವಿಲ್ಲದೆ ಅಕ್ರಮ ದಂಧೆ ನಡೆಸುತ್ತಿದ್ದಾರೆ. ಈ ಹಿಂದಿನ ಜಿಲ್ಲಾಧಿಕಾರಿಯವರಿಗೆ ಈ ಬಗ್ಗೆ ಅನೇಕ ಬಾರಿ ದೂರು ಸಲ್ಲಿಸಿದ ಬಳಿಕ ಕೆಲವು ತಿಂಗಳುಗಳ ಕಾಲ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲಾಗಿತ್ತು. ಈಗ ಮತ್ತೆ ಮರಳು ಗಣಿಗಾರಿಕೆ ಪ್ರಾರಂಭಗೊಂಡಿದ್ದು, ಈ ಬಗ್ಗೆ ಜಿಲ್ಲಾಡಳಿತ ಶೀಘ್ರ ಕ್ರಮಕೈಗೊಳ್ಳಬೇಕು ಎಂದು ಮೀನುಗಾರರು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X