Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೊಸ ಮದ್ಯದಂಗಡಿ ಪ್ರಸ್ತಾವ ಸರಕಾರದ...

ಹೊಸ ಮದ್ಯದಂಗಡಿ ಪ್ರಸ್ತಾವ ಸರಕಾರದ ಮುಂದಿಲ್ಲ: ಸಚಿವ ಎಚ್.ವೆ.ಮೇಟಿ

ವಾರ್ತಾಭಾರತಿವಾರ್ತಾಭಾರತಿ2 Aug 2016 11:09 PM IST
share
ಹೊಸ ಮದ್ಯದಂಗಡಿ ಪ್ರಸ್ತಾವ ಸರಕಾರದ ಮುಂದಿಲ್ಲ: ಸಚಿವ ಎಚ್.ವೆ.ಮೇಟಿ

ಬೆಂಗಳೂರು, ಆ. 2: ರಾಜ್ಯದಲ್ಲಿ ಹೊಸ ಮದ್ಯದಂಗಡಿಗಳಿಗೆ ಬೇಡಿಕೆಯಿದ್ದರೂ ಹೊಸ ಮದ್ಯದ ಅಂಗಡಿಗಳಿಗೆ ಪರವಾನಿಗೆ ನೀಡುವ ಯಾವುದೇ ಪ್ರಸ್ತಾವ ರಾಜ್ಯ ಸರಕಾರದ ಮುಂದಿಲ್ಲ ಎಂದು ಅಬಕಾರಿ ಸಚಿವ ಎಚ್.ವೈ.ಮೇಟಿ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.
 ಮಂಗಳವಾರ ವಿಧಾನಸೌಧದಲ್ಲಿನ ತಮ್ಮ ಕೊಠಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕುಡಿತ ಆರೋಗ್ಯಕ್ಕೆ ಒಳ್ಳೆಯದಲ್ಲ. ಯಾರೂ ಕುಡಿಯಬಾರದೆಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಕುಡಿತದಿಂದ ಸಂಸಾರಗಳು ಹಾಳಾಗುತ್ತಿವೆ. ಹೀಗಾಗಿ ಹೊಸ ಮದ್ಯದಂಗಡಿಗೆ ಪರವಾನಿಗೆ ನೀಡುವ ಪ್ರಸ್ತಾವವಿಲ್ಲ ಎಂದು ಪುನರುಚ್ಚರಿಸಿದರು.
ಗುರಿ ನೀಡಿಲ್ಲ: ಆದಾಯ ಸಂಗ್ರಹಿಸಲು ಅಬಕಾರಿ ಇಲಾಖೆಗೆ ಯಾವುದೇ ಗುರಿ ನೀಡಿಲ್ಲ. ಇಂತಿಷ್ಟು ಮಾರಾಟ ಮಾಡಲೇಬೇಕೆಂಬುದಕ್ಕೆ ಕಡ್ಡಾಯವನ್ನು ಮಾಡಿಲ್ಲ ಎಂದ ಅವರು, ಪ್ರಸ್ತುತ ಸಾಲಿನಲ್ಲಿ ಅಬಕಾರಿ ಇಲಾಖೆಯಿಂದ 16,500 ಕೋಟಿ ರೂ.ಸಂಗ್ರಹಿಸಬಹುದು ಎಂದು ಅಂದಾಜಿಸಲಾಗಿದೆ ಎಂದು ಅವರು ಹೇಳಿದರು.
ಅಗತ್ಯತೆ ಆಧಾರದ ಮೇಲೆ ರಾಜ್ಯಾದ್ಯಂತ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್(ಎಂಎಸ್‌ಐಎಲ್) ಮಳಿಗೆಗಳನ್ನು ಹೆಚ್ಚಿಸಲು ನಿರ್ಧರಿಸಿದ್ದು, ಈ ಸಂಬಂಧ ಚರ್ಚಿಸಿ ಹೊಸ ಮಳಿಗೆಗಳಿಗೆ ಪರವಾನಿಗೆ ನೀಡಲಾಗುವುದು ಎಂದು ಮೇಟಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿನ ಕಳ್ಳಭಟ್ಟಿ ದಂಧೆ ನಿಯಂತ್ರಿಸಲು ಅಧಿಕಾರಿಗಳಿಗೆ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಕಳ್ಳಭಟ್ಟಿ ದಂಧೆಗೆ ಅವಕಾಶ ನೀಡುವುದಿಲ್ಲ ಎಂದು ಎಚ್.ವೈ.ಮೇಟಿ ಇದೇ ವೇಳೆ ಸ್ಪಷ್ಟಣೆ ನೀಡಿದರು.
ಕಡಿವಾಣ: ಗ್ರಾಮೀಣ ಪ್ರದೇಶದಲ್ಲಿ ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟ ಸಂಬಂಧ ವ್ಯಾಪಕ ದೂರು ಗಳಿವೆ. ಆ ಹಿನ್ನೆಲೆಯಲ್ಲಿ ಶೀಘ್ರದಲ್ಲೆ ಇಲಾಖೆ ಅಧಿಕಾರಿಗಳ ಸಭೆ ಕರೆದು ಕಡಿವಾಣಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು ಎಂದು ಮೇಟಿ ವಿವರ ನೀಡಿದರು. ರಾಜ್ಯದಲ್ಲಿ ಪ್ರಸಕ್ತ ಸಂದರ್ಭದಲ್ಲಿ ಮದ್ಯಪಾನ ನಿಷೇಧ ಅಸಾಧ್ಯ. ಕೆಲ ರಾಜ್ಯಗಳಲ್ಲಿ ಪಾನ ನಿಷೇಧ ಮಾಡಿದ್ದರೂ, ಕರ್ನಾಟಕ ರಾಜ್ಯದಲ್ಲಿ ಅದು ಸಾಧ್ಯವಿಲ್ಲ ಎಂದ ಅವರು, ಚಿಲ್ಲರೆ ಮದ್ಯದಂಗಡಿ(ಸಿಎಲ್-2)ಗಳಲ್ಲಿ ನಿಗದಿತ ಬೆಲೆಗಿಂತ ಹೆಚ್ಚಿನ ದರದಲ್ಲಿ ಮದ್ಯ ಮಾರಾಟ ತಡೆಗಟ್ಟಲು ಪ್ರತೀ ಅಂಗಡಿಗಳ ಮುಂದೆ ದರಪಟ್ಟಿ ಪ್ರದರ್ಶನಕ್ಕೆ ಸುತ್ತೋಲೆ ಹೊರಡಿಸಲಾಗುವುದು ಎಂದರು.

ಬೆಂಗಳೂರು ನಗರದಲ್ಲಿ ರಾತ್ರಿ 1ಗಂಟೆಯ ವರೆಗೂ ಮದ್ಯ ಮಾರಾಟ ಹಾಗೂ ಪೂರೈಕೆಗೆ ಅವಕಾಶ ಕಲ್ಪಿಸಿದ್ದು, ಇದನ್ನು ಮೈಸೂರು, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯ ಉಳಿದ ನಗರಗಳಿಗೆ ವಿಸ್ತರಿಸುವ ಪ್ರಸ್ತಾಪ ರಾಜ್ಯ ಸರಕಾರದ ಮುಂದಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಸಚಿವರು ಸ್ಪಷ್ಟಣೆ ನೀಡಿದರು.

‘ಕೆಲಸದ ಒತ್ತಡದಲ್ಲಿರುವ ಬೆಂಗಳೂರು ನಗರದ ಜನತೆ ಅನುಕೂಲಕ್ಕಾಗಿ ಮದ್ಯ ಮಾರಾಟ ಅವಧಿ ವಿಸ್ತರಿಸಲಾಗಿದೆ. ಇಲ್ಲಿನ ಮದ್ಯಪಾನಿಗಳು ಬಹಳ ಸುಸಂಸ್ಕೃತರು. ಅವರೆಂದೂ ಮದ್ಯ ಸೇವಿಸಿ ಬೇಕಾಬಿಟ್ಟಿಯಾಗಿ ರಸ್ತೆ, ಚರಂಡಿಗಳಲ್ಲಿ ಬೀಳುವುದಿಲ್ಲ. ಆದರೆ, ಗ್ರಾಮೀಣ ಪ್ರದೇಶದ ರಸ್ತೆ, ಗಟಾರಗಳಲ್ಲಿ ಮದ್ಯಪಾನಿ ಗಳು ಹೆಚ್ಚಾಗಿರುತ್ತಾರೆ’

-ಎಚ್.ವೈ.ಮೇಟಿ, ಅಬಕಾರಿ ಸಚಿವ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X