Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶೀಘ್ರವೇ ಆರೋಪಿಗಳ ಬಂಧನ: ಕಮಿಷನರ್...

ಶೀಘ್ರವೇ ಆರೋಪಿಗಳ ಬಂಧನ: ಕಮಿಷನರ್ ಎಂ.ಚಂದ್ರಶೇಖರ್

ರಾಜಸ್ಥಾನದಲ್ಲಿ ಮಂಗಳೂರಿನ ಯುವಕನ ಅಪಹರಣ

ವಾರ್ತಾಭಾರತಿವಾರ್ತಾಭಾರತಿ3 Aug 2016 3:35 PM IST
share
ಶೀಘ್ರವೇ ಆರೋಪಿಗಳ ಬಂಧನ: ಕಮಿಷನರ್ ಎಂ.ಚಂದ್ರಶೇಖರ್

ಮಂಗಳೂರು,ಆ.3:ರಾಜಾಸ್ಥಾನದಲ್ಲಿ ಅಪಹರಣಕ್ಕೊಳಗಾದ ರಿಚರ್ಡ್ ಮೇರಿಯನ್ ಲಾಝರತ್ ಅವರನ್ನು ಅಪಹರಿಸಿದ ತಂಡದ ಬಗ್ಗೆ ಮಾಹಿತಿ ಸಿಕ್ಕಿದ್ದು ಅವರನ್ನು ಶೀಘ್ರದಲ್ಲಿಯೆ ಬಂಧಿಸಲಾಗುವುದು ಎಂದು ಮಂಗಳೂರು ಪೊಲೀಸ್ ಕಮೀಷನರ್ ಎಂ. ಚಂದ್ರಶೇಖರ್ ತಿಳಿಸಿದ್ದಾರೆ.

ಮಂಗಳೂರು ಪೊಲೀಸ್ ಕಮೀಷನರ್ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಸ್ಥಾನದ ಭರತ್‌ಪುರದಲ್ಲಿ ಕಡಿಮೆ ಹಣಕ್ಕೆ 4 ಜನರೇಟರ್ ಇದೆ ಎಂದು ಅರುಣ್ ಡಿಸೋಜ ರಿಗೆ ಅಪರಿಚಿತ ವ್ಯಕ್ತಿಯೊಬ್ಬರಿಂದ ಕರೆ ಬಂದಿತ್ತು. ಇದನ್ನು ನಂಬಿದ ಅರುಣ್ ಜುಲೈ 28ರಂದು ರಿಚರ್ಡ್ ಮೇರಿಯನ್ ಲಾಝರತ್‌ರನ್ನು ಹಣ ನೀಡದೆ ಜನರೇಟರ್‌ನ್ನು ನೋಡಿಬರುವಂತೆ ರಾಜಸ್ಥಾನಕ್ಕೆ ಕಳುಹಿಸಿದ್ದರು. ಜುಲೈ 30ರಂದು ರಾಜಸ್ಥಾನ ಭರತ್‌ಪುರ ತಲುಪಿದ ರಿಚರ್ಡ್‌ರನ್ನು ವ್ಯಕ್ತಿಯೊಬ್ಬ ಜನರೇಟರ್ ಕೊಡು ವುದಾಗಿ ಹೇಳಿ ಭರತ್‌ಪುರದಿಂದ ವಾಹನದಲ್ಲಿ ಕರೆದು ಕೊಂಡು ಹೋಗಿ ಅರುಣ್‌ಗೆ ಫೋನ್ ಮಾಡಿ ಅಪರಿಚಿತ ವ್ಯಕ್ತಿ ಮತ್ತು ಆತನ ತಂಡ ರಿಚರ್ಡ್‌ನ್ನು ಜೀವಂತ ಬಿಡಬೇಕಾದರೆ 10ಲಕ್ಷ ರೂ. ಕೊಡುವಂತೆ ಬೇಡಿಕೆ ಇಟ್ಟಿತ್ತು.

ಈ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಉಳ್ಳಾಲ ಠಾಣೆಯ ಎಎಸ್‌ಐ ವಿಜಯರಾಜು, ಹೆಡ್‌ಕಾನ್ಸ್‌ಟೇಬಲ್ ಮೋಹನ್ ಅವರನ್ನು ಭರತ್‌ಪುರಕ್ಕೆ ಕಳುಹಿಸಲಾಯಿತು. ಭರತ್‌ಪುರ ಐಜಿ ಅಲೋಕ್ ವಶಿಷ್ಟ, ಭರತ್ ಪುರ ಎಸ್‌ಪಿ ಕೈಲಾಸ್ ವಿಷ್ಣೋಯಿ, ಮಥುರಾ ಐಜಿ ದುರ್ಗಾಚರಣ್ ಮಿಶ್ರ ಮತ್ತು ಮಥುರ ಎಸ್‌ಎಸ್‌ಪಿ ಬಬ್ಲೂಕುಮಾರ್ ಅವರ ಮಾರ್ಗದರ್ಶನದಲ್ಲಿ ಕಾರ್ಯಚರಣೆ ನಡೆಸಲಾಗಿದ್ದು ಅಪಹರಣಕ್ಕೋಳಗಾದ ರಿಚರ್ಡ್ ಮೇರಿಯನ್ ಲಾಝರತ್‌ರನ್ನು ರಕ್ಷಿಸಲಾಯಿತು ಎಂದು ತಿಳಿಸಿದರು. ಅಪಹರಣಕಾರರು 7 ಕಡೆ ಸ್ಥಳವನ್ನು ಬದಲಾಯಿಸಿದ್ದು ಪೊಲೀಸರು ಮುಬಾರಕ್ ಗ್ಯಾಂಗ್‌ನ್ನು ಹಿಡಿದಾಗ ಅಪಹರಣ ಮಾಡಿರುವ ಆರೋಪಿಗಳಿಗೆ ಮಾಹಿತಿ ತಿಳಿದು ರಿಚರ್ಡ್ ಮೇರಿಯನ್ ಲಾಝರತ್ ರನ್ನು ಬಿಟ್ಟು ಪರಾರಿಯಾಗಿದೆ ಎಂದು ತಿಳಿಸಿದರು.

ರಕ್ಷಣೆಗೊಳಗಾದ ರಿಚರ್ಡ್ ಮೇರಿಯನ್ ಲಾಝರತ್ ಮತ್ತು ಮಂಗಳೂರು ಪೊಲೀಸರು ಭರತ್‌ಪುರದಲ್ಲಿ ಮೊಕ್ಕಾಂ ಹೂಡಿದ್ದಾರೆ. ಆರೋಪಿಗಳ ಬಗ್ಗೆ ಮಾಹಿತಿ ಲಭಿಸಿದ್ದು ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ತಿಳಿಸಿದರು.

ಹಿಂದೆ ಬಂಗಾರ ಸಿಕ್ಕಿದೆ ಎಂದು ಜನರನ್ನು ಮೋಸದ ಬಲೆಗೆ ಕೆಡವುತ್ತಿದ್ದ ತಂಡ ಇದೀಗ ಈ ರೀತಿಯ ಮೋಸದ ಬಲೆ ಬೀಸುತ್ತಿದೆ. 30 ಲಕ್ಷ ರೂ. ವೌಲ್ಯದ ಜನರೇಟರನ್ನು 5 ಲಕ್ಷಕ್ಕೆ ನೀಡುವ ಸುಳ್ಳು ಭರವಸೆ ನೀಡಿ ಈ ಅಪಹರಣ ಮಾಡಲಾಗಿದೆ. ಸಾರ್ವಜನಿಕರು ಭರತ್‌ಪುರದ ಸುತ್ತಮುತ್ತಲ ಪ್ರದೇಶದ ಜನರೊಂದಿಗೆ ವ್ಯವಹಾರ ಮಾಡುವಾಗ ಎಚ್ಚರಿಕೆಯಿಂದಿದ್ದು , ಖಚಿತಪಡಿಸಿದ ನಂತರ ವ್ಯವಹಾರಕ್ಕೆ ಇಳಿಯುವುದು ಉತ್ತಮ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಡಿಸಿಪಿಗಳಾದ ಕೆ.ಎಂ.ಶಾಂತರಾಜು, ಡಾ.ಸಂಜೀವ ಎಂ. ಪಾಟೀಲ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X