Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ತಲೆಗೂದಲು ಉದುರುವುದಕ್ಕೆ ಮದ್ದು ನಿಮ್ಮ...

ತಲೆಗೂದಲು ಉದುರುವುದಕ್ಕೆ ಮದ್ದು ನಿಮ್ಮ ಅಡುಗೆ ಮನೆಯಲ್ಲೇ ಇದೆ

ವಾರ್ತಾಭಾರತಿವಾರ್ತಾಭಾರತಿ3 Aug 2016 5:09 PM IST
share
ತಲೆಗೂದಲು ಉದುರುವುದಕ್ಕೆ ಮದ್ದು ನಿಮ್ಮ ಅಡುಗೆ ಮನೆಯಲ್ಲೇ ಇದೆ

ತಾಜಾ ಹಣ್ಣು ಮತ್ತು ತರಕಾರಿಗಳು ಕೇವಲ ಪೌಷ್ಟಿಕ ಆಹಾರವಷ್ಟೇ ಅಲ್ಲ; ನಿಮ್ಮ ಚರ್ಮ ಮತ್ತು ಕೂದಲಿನ ಸಂರಕ್ಷಣೆಗೂ ಇದು ಪ್ರಯೋಜನಕಾರಿ. ಕೂದಲು ಸಮಸ್ಯೆ ಅಧಿಕವಾಗುವ ಮುಂಗಾರಿನಲ್ಲಿ ಇವುಗಳ ಪರಿಹಾರಕ್ಕೆ ಆರು ಸುಲಭ ಸೂತ್ರಗಳು ಇಲ್ಲಿವೆ ನೋಡಿ. ನಿಮ್ಮ ಕೂದಲು ಸಮಸ್ಯೆಗಳಿಗೆ ನಿಮ್ಮ ಅಡುಗೆ ಮನೆಯಲ್ಲೇ ಪರಿಹಾರ ಇದೆ ಎನ್ನುತ್ತಾರೆ ದೆಹಲಿಯ ವೀನಸ್ ಕ್ಲಿನಿಕ್‌ನ ಕೂದಲುಶಾಸ್ತ್ರ ತಜ್ಞರಾದ ಸಿ.ಎಂ.ಗುರಿ. ಕೂದಲು ಉದುರುವುದನ್ನು ತಡೆಯಲು ಅಡುಗೆ ಮನೆಯ ತಿನಸುಗಳೇ ಮದ್ದು ಎನ್ನುವುದು ಆಕೆಯ ಸ್ಪಷ್ಟ ಅಭಿಪ್ರಾಯ.

ಆವೊಕಡೊ: ಇದು ಕೂದಲುಗಳನ್ನು ಬಲಗೊಳಿಸುವುದಲ್ಲದೇ ಹಾನಿಯಾದ ಕೂದಲುಗಳನ್ನು ಸರಿಪಡಿಸುತ್ತದೆ. ಇದು ಬಿ ಮತ್ತು ಇ ವಿಟಮಿನ್‌ನಿಂದ ಸಮೃದ್ಧವಾಗಿರುತ್ತದೆ. ಇವು ಕೇವಲ ಕೂದಲು ಬಲಗೊಳಿಸುವುದಷ್ಟೇ ಅಲ್ಲದೇ, ಕೂದಲಿನ ತೇವಾಂಶ ಹೆಚ್ಚಿಸುತ್ತದೆ. ಅದನ್ನು ಚೆನ್ನಾಗಿ ಅರೆದು ಮೊಟ್ಟೆಯ ದ್ರವ ಮಿಶ್ರ ಮಾಡಿ ತಲೆಗೆ ಹಚ್ಚಿ 20 ನಿಮಿಷ ಬಳಿಕ ತೊಳೆಯಬಹುದು.

ಕ್ಯಾರೆಟ್: ಕೂದಲು ಬೇರಿಗೆ ಕ್ಯಾರೆಟ್ ಉತ್ತಮ ಔಷಧ. ಇದು ಕೂದಲಿಗೆ ಅಗತ್ಯ ಬಲವನ್ನು ನೀಡುತ್ತದೆ. ಕ್ಯಾರೆಟ್ ರಸ ತೆಗೆದು, ಅರ್ಧ ಗಂಟೆ ಫ್ರಿಡ್ಜ್‌ನಲ್ಲಿಡಿ. ಕೂದಲು ಉದುರುವುದು ತಡೆಯಲು ನಿಮ್ಮ ತಲೆಗೆ ಹಚ್ಚಿಕೊಳ್ಳಿ.

ಈರುಳ್ಳಿ: ಈರುಳ್ಳಿ ಕೂದಲು ಉದುರುವುದನ್ನು ತಡೆಯುತ್ತದೆ. ಫಂಗಸ್ ಅಥವಾ ಬ್ಯಾಕ್ಟೀರಿಯಾ ಸೋಂಕಿನಿಂದ ಕೂದಲು ತೆಳ್ಳಗಾಗುವುದನ್ನೂ ಇದು ತಡೆಯುತ್ತದೆ. ನೀವು ಮಾಡಬೇಕಾದುದು ಇಷ್ಟೇ. ಈರುಳ್ಳಿ ರಸ ತೆಗೆದು, ಕೂದಲ ಬುಡಕ್ಕೆ ಹಚ್ಚಿ. 20 ನಿಮಿಷ ಬಳಿಕ ತೊಳೆದುಕೊಳ್ಳಿ.

ಬಾಳೆಹಣ್ಣು: ಪೊಟ್ಯಾಶಿಯಂ ಹಾಗೂ ವಿಟಮಿನ್ ಎ ಬಾಳೆಹಣ್ಣಿನಲ್ಲಿ ಅಧಿಕವಾಗಿರುತ್ತದೆ. ಇದು ಕೂದಲು ಬಲಗೊಳಿಸಲು ಮತ್ತು ನಯವಾಗಿಸಲು ಸಹಕಾರಿ. ಬಾಳೆಹಣ್ಣು ಮತ್ತು ಜೇನು ಮಿಶ್ರಣ ಹಾಳಾದ ಕೂದಲುಗಳ ದುರಸ್ತಿ ಮಾಡಿ, ದುರ್ಬಲ ಕೂದಲುಗಳನ್ನು ಬಲಗೊಳಿಸುತ್ತದೆ. ಒಂದು ಬಾಳೆಹಣ್ಣನ್ನು ಕಿವುಚಿ, ಒಂದು ಚಮಚ ಜೇನು ಹಾಕಿ ಕೂದಲ ಬೇರಿಗೆ ಹಚ್ಚಿ. 15-20 ನಿಮಿಷ ಬಿಟ್ಟು ಶಾಂಪೂ ಹಾಕಿ ತೊಳೆದುಕೊಳ್ಳಿ.

ತೆಂಗಿನಹಾಲು: ತೆಂಗಿನೆಣ್ಣೆ ಮಾತ್ರವಲ್ಲದೇ ತೆಂಗಿನ ಹಾಲು ಕೂಡಾ ಕೂದಲ ಬೇರು ಬಲಗೊಳಿಸುತ್ತದೆ. ನಿಮ್ಮ ಕೂದಲು ಬಲಕಳೆದುಕೊಂಡಿದ್ದರೆ ತೆಂಗಿನಹಾಲು ಮತ್ತು ಜೇನು ಮಿಶ್ರ ಮಾಡಿ ಹಚ್ಚಿಕೊಳ್ಳಬೇಕು. ಒಂದು ಗಂಟೆ ಹಾಗೆಯೇ ಬಿಟ್ಟು ಬಳಿಕ ಶಾಂಪೂ ಹಾಕಿ ತೊಳೆದುಕೊಳ್ಳಿ.

ಓಟ್ ಹಿಟ್ಟು: ತಲೆ ಹೊಟ್ಟು ಸಮಸ್ಯೆಗೆ ಇದು ಉತ್ತಮ ಪರಿಹಾರ. ಇದು ಕೂದಲ ಜಿಡ್ಡನ್ನು ಕಡಿಮೆ ಮಾಡಿ, ಬಲಗೊಳಿಸುತ್ತದೆ. ಒಂದು ಚಮಚ ಒಟಮೀಲ್‌ಗೆ ಇಂದು ಲೋಟ ಹಾಲು ಹಾಗೂ ಬಾದಾಮಿ ಎಣ್ಣೆ ಬೆರಸಿ ಪೇಸ್ಟ್ ತಯಾರಿಸಿಕೊಳ್ಳಿ. ಈ ಮಿಶ್ರಣವನ್ನು ತಲೆಗೆ ಹಚ್ಚಿಕೊಂಡು 15-20 ನಿಮಿಷಗಳ ಬಳಿಕ ತೊಳೆದುಕೊಂಡರೆ ಉತ್ತಮ ಫಲಿತಾಂಶ ಸಿಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X