Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಟೀಲು ಸೊಳ್ಳೆ ಉತ್ಪಾದನಾ...

ಕಟೀಲು ಸೊಳ್ಳೆ ಉತ್ಪಾದನಾ ಕೇಂದ್ರವಾಗುತ್ತಿದೆ: ಗ್ರಾಮಸ್ಥರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ3 Aug 2016 6:33 PM IST
share
ಕಟೀಲು ಸೊಳ್ಳೆ ಉತ್ಪಾದನಾ ಕೇಂದ್ರವಾಗುತ್ತಿದೆ: ಗ್ರಾಮಸ್ಥರ ಆಕ್ರೋಶ

ಮುಲ್ಕಿ, ಆ.3: ಕಟೀಲು ದೇವಸ್ಥಾನದ ತ್ಯಾಜ್ಯವನ್ನು ನಂದಿನಿ ನದಿಯಲ್ಲಿ ಹಾಕುತ್ತಿದ್ದು ಪರಿಸರವಿಡೀ ದುರ್ವಾಸನೆಯಿಂದ ಕೂಡಿದೆ. ಕಟೀಲು ಬಸ್ಸು ನಿಲ್ದಾಣದ ಹಿಂಭಾಗದಲ್ಲಿ ದೇವಸ್ಥಾನದ ಅನಧಿಕೃತ ಅಂಗಡಿಗಳ ತ್ಯಾಜ್ಯ ಸುರಿಯಲಾಗುತ್ತಿದ್ದು, ಕಟೀಲು ಸೊಳ್ಳೆಗಳ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ಕಟೀಲು ಗ್ರಾಮಸಭೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತೀ ಗ್ರಾಮಸಭೆಯಲ್ಲಿ ಕಟೀಲು ತ್ಯಾಜ್ಯದ ಬಗ್ಗೆ ಹೇಳಿ ಸಾಕಾಗಿದೆ. ಯಾರೂ ಕ್ರಮಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥ ಈಶ್ವರ ಕಟೀಲು ಆಕ್ರೋಶ ವ್ಯಕ್ತಪಡಿಸಿದರು. ಕಟೀಲು ಪಂಚಾಯತ್ ವ್ಯಾಪ್ತಿಯಲ್ಲಿ ಪರವಾನಿಗೆ ರಹಿತ ಅಂಗಡಿಗಳ ಸರ್ವೇ ನಡೆಸಿ ಎಂದು ಗ್ರಾಮಸ್ಥರು ಆಗ್ರಹಿಸಿದರು.
ಕಟೀಲು ಪಂ. ವ್ಯಾಪ್ತಿಯ ಅಜಾರು ಎಂಬಲ್ಲಿ ಶೌಚಾಲಯದ ಅಗತ್ಯವೇ ಇಲ್ಲ. ಆದರೂ ಅಲ್ಲಿ ಸುಸಜ್ಜಿತ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಮಾಡಲಾಗಿರುವ ಶೌಚಾಲಯಕ್ಕೆ ಪಂಚಾಯತ್ ಬೀಗ ಹಾಕಿ ಇಟ್ಟಿದೆ. ಹಾಗಿದ್ದರೆ ಯಾವ ಪುರುಷಾರ್ಥಕ್ಕಾಗಿ ಶೌಚಾಲಯ ನಿರ್ಮಾಣ ಮಾಡಲಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದರು.

ಪಂಚಾಯತ್ ವ್ಯಾಪ್ತಿಯ ಕೊಂಡೆಮೂಲದಲ್ಲಿ ಖಾಸಗಿ ರಸ್ತೆ ದುರಸ್ತಿಗೆ ಗ್ರಾಮ ಪಂಚಾಯತ್ ಕ್ರಮವಹಿಸದಿರುವ ಬಗ್ಗೆ ಆಕ್ಷೇಪ ಎತ್ತಿದ ಗ್ರಾಮಸ್ಥ ಸಂಜೀವ ಮಡಿವಾಳ, ಆ ರಸ್ತೆಯನ್ನು ಪಂಚಾಯತ್ ತನ್ನ ಅಧೀನಕ್ಕೆ ಪಡೆದುಕೊಂಡು ಶೀಘ್ರ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. 

ಮುಲ್ಕಿಯಲ್ಲಿ ರೈತ ಸಂಪರ್ಕ ಕೇಂದ್ರ ಇದ್ದು, ಅದನ್ನು ಕಿನ್ನಿಗೋಳಿಗೆ ಸ್ಥಳಾಂತರಿಸಬೇಕೆಂದು ಆಗ್ರಹಿಸಲಾಗುತ್ತಿದೆ. ಈ ವರೆಗೂ ಗ್ರಾಮಸ್ಥರ ಕೂಗು ಪಂಚಾಯತ್ ಅಧಿಕಾರಿಗಳಿಗೆ ಕೇಳಿಸಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ ಗ್ರಾಮಸ್ಥರು, ಕಿನ್ನಿಗೋಳಿಯಲ್ಲಿ ರೈತ ಸಂಪರ್ಕ ಕೇಂದ್ರದ ಉಪ ಕಚೇರಿಯನ್ನಾದರೂ ತೆರೆದು ಗ್ರಾಮದ ರೈತರಿಗೆ ನೆರವಾಗಬೇಕು ಎಂದು ಸಭೆಯಲ್ಲಿ ಆಗ್ರಹಿಸಿದರು. ಕೃಷಿ ಉಪಕರಣಕ್ಕೆ ಅರ್ಜಿ ನೀಡಿ ವರ್ಷ ಕಳೆದರೂ ಈವರೆಗೆ ಸಲಕರಣೆಗಳು ಬಂದಿಲ್ಲ ಎಂದು ಗ್ರಾಮಸ್ಥ ಜಗನ್ನಾಥ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮ ಸಭೆಯು 11 ಗಂಟೆಗೆ ನಿಗದಿಯಾಗಿದ್ದರೂ ಗ್ರಾಮಸ್ಥರು ಕೇವಲ 20 ಮಂದಿ ಇದ್ದ ಕಾರಣ ಸಭೆಯನ್ನು ರದ್ದುಗೊಳಿಸಲು ಕೆಲ ಗ್ರಾಮಸ್ಥರು ಆಗ್ರಹಿಸಿದರು. ಗ್ರಾಮಸಭೆಯ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಿಲ್ಲ, ಗ್ರಾಮಸ್ಥರಿಗಿಂದ ಜಾಸ್ತಿ ಮಂದಿ ವೇದಿಕೆಯಲ್ಲಿದ್ದಾರೆ ಎಂಬ ಆರೋಪಗಳು ಸಭೆಯಲ್ಲಿ ಕೇಳಿ ಬಂದವು. ಕೊನೆಗೆ ನೋಡಲ್ ಅಧಿಕಾರಿ ಮಧ್ಯಪ್ರವೇಶಿಸಿ ಭೆ ನಡೆಸಲು ಅನುವು ಮಾಡಿಕೊಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X