Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2015ರಲ್ಲಿ ಭ್ರಷ್ಟಾಚಾರಕ್ಕಾಗಿ 900...

2015ರಲ್ಲಿ ಭ್ರಷ್ಟಾಚಾರಕ್ಕಾಗಿ 900 ಸರಕಾರಿ ನೌಕರರ ವಜಾ

ವಾರ್ತಾಭಾರತಿವಾರ್ತಾಭಾರತಿ3 Aug 2016 8:22 PM IST
share
2015ರಲ್ಲಿ ಭ್ರಷ್ಟಾಚಾರಕ್ಕಾಗಿ 900 ಸರಕಾರಿ ನೌಕರರ ವಜಾ

ಹೊಸದಿಲ್ಲಿ,ಆ.3: 2015ರಲ್ಲಿ ಭ್ರಷ್ಟಾಚಾರ ಮತ್ತು ದುರ್ವರ್ತನೆಯ ಆರೋಪದಲ್ಲಿ 900 ಸರಕಾರಿ ಮತ್ತು ಸಾರ್ವಜನಿಕ ಕ್ಷೇತ್ರದ ಉದ್ಯಮಗಳ 900 ನೌಕರರು ತಮ್ಮ ಉದ್ಯೋಗಗಳನ್ನು ಕಳೆದುಕೊಂಡಿದ್ದಾರೆ. 19,000 ನೌಕರರು ವೇತನ ಕಡಿತ, ಎಚ್ಚರಿಕೆಯಂತಹ ದಂಡನಾ ಕ್ರಮಗಳಿಗೆ ಗುರಿಯಾಗಿದ್ದಾರೆ. ವಜಾಗೊಂಡವರಲ್ಲಿ ಓರ್ವ ಐಪಿಎಸ್ ಅಧಿಕಾರಿಯೂ ಸೇರಿದ್ದಾರೆ ಎಂದು ಸಂಸತ್ತಿನಲ್ಲಿ ಇತ್ತೀಚಿಗೆ ಮಂಡಿಸಲಾದ ಕೇಂದ್ರ ಜಾಗೃತ ಆಯೋಗ(ಸಿವಿಸಿ)ದ ವಾರ್ಷಿಕ ವರದಿಯು ಹೇಳಿದೆ.
 ಆದಾಯ ತೆರಿಗೆ ಆಯುಕ್ತರೋರ್ವರು ತಾತ್ಕಾಲಿಕ ವೇತನ ಕಡಿತ ಶಿಕ್ಷೆಗೆ ಗುರಿಯಾಗಿದ್ದರೆ, ದಿಲ್ಲಿ ಮಹಾನಗರ ಪಾಲಿಕೆಯ ಮಾಜಿ ನಗರ ಯೋಜನಾಧಿಕಾರಿಯ ಪಿಂಚಣಿಯಲ್ಲಿ ಕಡಿತವಾಗಿದೆ. ನಿಗದಿತ ಸಮಯದೊಳಗೆ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಆಯೋಗದ ಪ್ರಯತ್ನಗಳ ಫಲವಾಗಿ ದಂಡನೆಗಳಲ್ಲಿ ಏರಿಕೆಯಾಗಿದೆ ಎಂದು ಸರಕಾರಿ ಅಧಿಕಾರಿಯೋರ್ವರು ತಿಳಿಸಿದರು.
ಈ 20,000 ಪ್ರಕರಣಗಳಲ್ಲಿ ಅಪ್ರಾಮಾಣಿಕತೆಗಾಗಿ ಆಯೋಗದ ಶಿಫಾರಸಿನಂತೆ ದಂಡನೆಗೊಳಗಾಗಿರುವ 3,600 ಹಿರಿಯ ಅಧಿಕಾರಿಗಳೂ ಸೇರಿದ್ದಾರೆ.
2015 ರಲ್ಲಿ ದಂಡನೆಗೊಳಗಾಗಿರುವ ಹಿರಿಯ ಅಧಿಕಾರಿಗಳ ಸಂಖ್ಯೆ ಕಳೆದೊಂದು ದಶಕದಲ್ಲಿಯೇ ಗರಿಷ್ಠವಾಗಿದೆ. 2014ರಲ್ಲಿ ಕೇವಲ 2,144 ಅಧಿಕಾರಿಗಳು ತೊಂದರೆಗೊಳಗಾಗಿದ್ದರು.
ಹಿರಿಯ ಅಧಿಕಾರಿಗಳ ವಿರುದ್ಧದ ದೂರುಗಳನ್ನು ಸಿವಿಸಿಯೇ ನಿರ್ವಹಿಸಿದರೆ, ಇತರ ಸಿಬ್ಬಂದಿಗಳ ವಿರುದ್ಧದ ದೂರುಗಳನ್ನು ವಿವಿಧ ಇಲಾಖೆಗಳಲ್ಲಿ ನಿಯೋಜಿತ ಮುಖ್ಯ ಜಾಗೃತ ಅಧಿಕಾರಿ(ಸಿವಿಒ)ಗಳು ನಿಭಾಯಿಸುತ್ತಾರೆ.
ಸಿವಿಒಗಳ ಪರಿಶೀಲನೆಯಲ್ಲಿ 17,000ಕ್ಕೂ ಅಧಿಕ ಸಿಬ್ಬಂದಿಗಳು ತಪ್ಪಿತಸ್ಥರೆಂದು ಸಾಬೀತಾಗಿದೆ. ಇವರಲ್ಲಿ ಸರಕಾರಿ ಸ್ವಾಮ್ಯದ ಸಂಸ್ಥೆಗಳು ಮತ್ತು ಬ್ಯಾಂಕುಗಳ ಮ್ಯಾನೇಜರ್‌ಗಳು, ವಿಜ್ಞಾನಿಗಳು ಮತ್ತು ಕನಿಷ್ಠ ಓರ್ವ ಕೇಂದ್ರಿಯ ವಿದ್ಯಾಲಯದ ಪ್ರಾಂಶುಪಾಲರು ಸೇರಿದ್ದಾರೆ ಎಂದು ವರದಿಯು ತಿಳಿಸಿದೆ.
ವರದಿಯಲ್ಲಿ ಕೆಲವು ಅಚ್ಚರಿಗಳೂ ಇವೆ. ಭ್ರಷ್ಟಾಚಾರವೆಂದರೆ ಸಾಮಾನ್ಯವಾಗಿ ಎಲ್ಲರ ಕಣ್ಣುಗಳು ಪೊಲೀಸರು ಮತ್ತು ತೆರಿಗೆ ಅಧಿಕಾರಿಗಳ ಮೇಲೆಯೇ ನೆಟ್ಟಿರುತ್ತದೆ. ಆದರೆ ಇಲ್ಲಿ ಬ್ಯಾಂಕ್ ಅಧಿಕಾರಿಗಳು ಇವೆರಡೂ ವರ್ಗಗಳನ್ನು ಮೀರಿಸಿದ್ದಾರೆ.
ಕಳೆದ ವರ್ಷ ವಜಾಗೊಂಡ 928 ಅಧಿಕಾರಿಗಳ ಪೈಕಿ ಸುಮಾರು ಶೇ.60ರಷ್ಟು ಬ್ಯಾಂಕ್ ಮ್ಯಾನೇಜರ್‌ಗಳೇ ಆಗಿದ್ದಾರೆ. ದಂಡನ ಕ್ರಮಕ್ಕೆ ಗುರಿಯಾಗಿರುವ ಪ್ರತಿ ಇಬ್ಬರು ಸರಕಾರಿ ನೌಕರರಲ್ಲಿ ಓರ್ವರು ಬ್ಯಾಂಕ್ ಸಿಬ್ಬಂದಿಯಾಗಿದ್ದಾರೆ!

share
ವಾರ್ತಾಭಾರತಿ
ವಾರ್ತಾಭಾರತಿ
Next Story
X