Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಉದ್ದೀಪನಾ ಟೆಸ್ಟ್‌ನಲ್ಲಿ ಓಟಗಾರ...

ಉದ್ದೀಪನಾ ಟೆಸ್ಟ್‌ನಲ್ಲಿ ಓಟಗಾರ ಧರ್ಮಬೀರ್ ಸಿಂಗ್ ಫೇಲ್

ರಿಯೋ ವಿಮಾನ ತಪ್ಪಿಸಿಕೊಂಡ ಹರ್ಯಾಣದ ಅಥ್ಲೀಟ್

ವಾರ್ತಾಭಾರತಿವಾರ್ತಾಭಾರತಿ3 Aug 2016 11:35 PM IST
share
ಉದ್ದೀಪನಾ ಟೆಸ್ಟ್‌ನಲ್ಲಿ ಓಟಗಾರ ಧರ್ಮಬೀರ್ ಸಿಂಗ್ ಫೇಲ್

    ಹೊಸದಿಲ್ಲಿ, ಆ.3: ಕಳೆದ ತಿಂಗಳು ನಡೆದ ಡೋಪಿಂಗ್ ಪರೀಕ್ಷೆಯಲ್ಲಿ ಓಟಗಾರ ಧರ್ಮಭೀರ್ ಸಿಂಗ್ ಫೇಲಾಗಿದ್ದು, ರಿಯೋ ಒಲಿಂಪಿಕ್ಸ್‌ಗೆ ಬೆರಳೆಣಿಕೆ ದಿನ ಬಾಕಿಯಿರುವಾಗಲೇ ಭಾರತದ ಅಥ್ಲೀಟ್‌ಗಳು ಡೋಪಿಂಗ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದು ಮುಂದುವರಿದಿದೆ.

ಸುಮಾರು 36 ವರ್ಷಗಳ ಬಳಿಕ 200 ಮೀ. ಓಟದಲ್ಲಿ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದ ಭಾರತದ ಮೊದಲ ಅಥ್ಲೀಟ್ ಎನಿಸಿಕೊಂಡಿದ್ದ ಧರ್ಮಬೀರ್ ಜುಲೈ 11 ರಂದು ಬೆಂಗಳೂರಿನಲ್ಲಿ ನಡೆದ ಇಂಡಿಯನ್ ಗ್ರಾನ್‌ಪ್ರಿ ಅಥ್ಲೆಟಿಕ್ಸ್ ಕೂಟದಲ್ಲಿ ರಾಷ್ಟ್ರೀಯ ಉದ್ದೀಪನಾ ಮದ್ದು ತಡೆ ಘಟಕ(ನಾಡಾ) ನಡೆಸಿರುವ ಡೋಪಿಂಗ್ ಪರೀಕ್ಷೆಯಲ್ಲಿ ಫೇಲಾಗಿದ್ದಾರೆ.

ಧರ್ಮಬೀರ್ ‘ಎ’ ಮಾದರಿ ಪಾಸಿಟಿವ್ ಆಗಿದೆ. ಆದಾಗ್ಯೂ, ಅಥ್ಲೀಟ್ ಧರ್ಮಬೀರ್ ಡೋಪಿಂಗ್‌ನಲ್ಲಿ ಫೇಲಾಗಿರುವ ಬಗ್ಗೆ ನಾಡಾ ಭಾರತದ ಅಥ್ಲೆಟಿಕ್ಸ್ ಫೆಡರೇಶನ್‌ಗೆ ಇನ್ನೂ ಮಾಹಿತಿ ನೀಡಿಲ್ಲ ಎನ್ನಲಾಗಿದೆ.

ಧರ್ಮಬೀರ್ ಮಂಗಳವಾರ ಬೆಳಗ್ಗೆ ಒಲಿಂಪಿಕ್ಸ್ ಕೂಟದಲ್ಲಿ ಭಾಗವಹಿಸಲು ಭಾರತದಿಂದ ತೆರಳಬೇಕಾಗಿತ್ತು. ಆದರೆ, ಅವರಿಗೆ ಬ್ರೆಝಿಲ್‌ಗೆ ತೆರಳದಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಧರ್ಮಭೀರ್ ಬಿ ಮಾದರಿಯ ಪರೀಕ್ಷೆಯ ವರದಿ ಪಡೆಯಲು ಇಚ್ಛಿಸಿದರೆ ಇನ್ನು ಏಳು ದಿನಗಳಲ್ಲಿ ವರದಿ ನೀಡಲಾಗುತ್ತದೆ ಎಂದು ನಾಡಾ ಮೂಲಗಳು ತಿಳಿಸಿವೆ. ಧರ್ಮಬೀರ್ ಬಿ ಸ್ಯಾಂಪಲ್ ಪರೀಕ್ಷೆಯಲ್ಲೂ ಫೇಲಾಗಿದ್ದರೆ ಒಲಿಂಪಿಕ್ಸ್‌ನಿಂದ ಹೊರಗುಳಿಯುವುದು ಖಚಿತವಾಗಲಿದೆ. ಧರ್ಮವೀರ್ ಎರಡನೆ ಬಾರಿ ಡೋಪಿಂಗ್ ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿರುವ ಕಾರಣ 8 ವರ್ಷಗಳ ಕಾಲ ನಿಷೇಧ ಅಥವಾ ಆಜೀವ ನಿಷೇಧ ಎದುರಿಸಬೇಕಾಗುತ್ತದೆ. ಧರ್ಮಬೀರ್ ಬೆಂಗಳೂರಿನಲ್ಲಿ ಜು.11 ರಂದು ನಡೆದ ಇಂಡಿಯನ್ ಜಿಪಿ ಕೂಟದಲ್ಲಿ 20.50 ನಿಮಿಷದಲ್ಲಿ ಗುರಿ ತಲುಪುವುದರೊಂದಿಗೆ 200 ಮೀ. ಓಟದಲ್ಲಿ ಒಲಿಂಪಿಕ್ಸ್ ಟಿಕೆಟ್ ಪಡೆದಿದ್ದರು. ರಿಯೋ ಗೇಮ್ಸ್‌ಗೆ ಮತ್ತಷ್ಟು ಅಥ್ಲೀಟ್‌ಗಳು ಅರ್ಹತೆ ಪಡೆಯಲಿ ಎಂಬ ಉದ್ದೇಶದಿಂದ ಭಾರತದ ಅಥ್ಲೆಟಿಕ್ಸ್ ಫೆಡರೇಶನ್ ಈ ಅಥ್ಲೆಟಿಕ್ಸ್ ಕೂಟ ಏರ್ಪಡಿಸಿತ್ತು.

 ಧರ್ಮಬೀರ್ ಇತ್ತೀಚೆಗಿನ ದಿನಗಳಲ್ಲಿ ನಾಡಾ ನಡೆಸಿರುವ ಡೋಪಿಂಗ್ ಪರೀಕ್ಷೆಯಲ್ಲಿ ಫೇಲಾಗಿರುವ ಭಾರತದ ಮೂರನೆ ಅಥ್ಲೀಟ್. ಕುಸ್ತಿಪಟು ನರಸಿಂಗ್ ಯಾದವ್ ಜು.5 ರಂದು ನಡೆಸಿದ್ದ ಡೋಪಿಂಗ್ ಪರೀಕ್ಷೆಯಲ್ಲಿ ವಿಫಲರಾಗಿ ನಾಡಾದಿಂದ ತಾತ್ಕಾಲಿಕವಾಗಿ ಅಮಾನತುಗೊಂಡಿದ್ದರು. ನಾಡಾದ ಸುದೀರ್ಘ ವಿಚಾರಣೆಯ ಬಳಿಕ ಆರೋಪದಿಂದ ಮುಕ್ತರಾಗಿ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಅವಕಾಶ ಪಡೆದಿದ್ದಾರೆ.

ಶಾಟ್‌ಪುಟ್ ಪಟು ಇಂದ್ರಜೀತ್ ಸಿಂಗ್ ಕೂಡ ಡೋಪಿಂಗ್ ಟೆಸ್ಟ್‌ನಲ್ಲಿ ಫೇಲಾಗಿದ್ದರು. ಸಿಂಗ್ ಮಂಗಳವಾರ ‘ಬಿ’ ಸ್ಯಾಂಪಲ್‌ನಲ್ಲೂ ಫೇಲಾಗಿರುವ ಕಾರಣ ಮುಂಬರುವ ರಿಯೋ ಗೇಮ್ಸ್‌ನಲ್ಲಿ ಭಾಗವಹಿಸುವ ಅವಕಾಶದಿಂದ ವಂಚಿತರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X