Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೈಚಾಚುವ ಪರಿಸ್ಥಿತಿ ತಪ್ಪಿಸಲು...

ಕೈಚಾಚುವ ಪರಿಸ್ಥಿತಿ ತಪ್ಪಿಸಲು ಕೈಗಾಡಿಯಲ್ಲಿ ಆಹಾರ ಮಾರುತ್ತಿರುವ ಗೃಹಿಣಿ !

3 ಕೋಟಿಯ ಮನೆ, ವಿಲಾಸಿ ವಾಹನದ ಒಡತಿಯ ಬದುಕಿನ ಗಾಡಿ ನಿಂತಿದ್ದು ಇಲ್ಲಿ

ವಾರ್ತಾಭಾರತಿವಾರ್ತಾಭಾರತಿ4 Aug 2016 1:02 PM IST
share
ಕೈಚಾಚುವ ಪರಿಸ್ಥಿತಿ ತಪ್ಪಿಸಲು ಕೈಗಾಡಿಯಲ್ಲಿ ಆಹಾರ ಮಾರುತ್ತಿರುವ ಗೃಹಿಣಿ !

ಗುರ್‌ಗಾಂವ್, ಆ.4: ಮೂರು ಕೋಟಿ ರೂ. ಬೆಲೆಬಾಳುವ ಐಷಾರಾಮಿ ಬಂಗಲೆ ಹಾಗೂ ಎಸ್‌ಯುವಿಯ ಮಾಲಕಿಯಾಗಿರುವ ಮಹಿಳೆಯೊಬ್ಬರು ರಸ್ತೆ ಬದಿ ತಳ್ಳುಗಾಡಿಯಲ್ಲಿ ಆಹಾರ ಮಾರುತ್ತಾರೆಂದು ಹೇಳಿದರೆ ನಂಬಲು ಸಾಧ್ಯವೇ? ಆದರೆ ಇದನ್ನು ನಂಬಲೇ ಬೇಕು. ಮಾಜಿ ಶಿಕ್ಷಕಿಯಾಗಿರುವ 34 ವರ್ಷದ ಊರ್ವಶಿ ಯಾದವ್ ಸೆಕ್ಟರ್ 14 ಮಾರ್ಕೆಟ್ ಪ್ರದೇಶದಲ್ಲಿರುವ ಅರಳಿ ಮರದ ಕೆಳಗೆ ಕಳೆದ 45 ದಿನಗಳಿಂದ ರಸ್ತೆ ಬದಿಯಲ್ಲಿ ಕೈಗಾಡಿಯೊಂದರಲ್ಲಿ ಚೋಲೆ-ಚೋಲೆ ಹಾಗೂ ಪರೋಟ ಮಾರುತ್ತಿದ್ದಾರೆ.

ಆಕೆಯ ಪತಿ ಇತ್ತೀಚೆಗೆ ಅನಾರೋಗ್ಯಪೀಡಿತರಾಗಿದ್ದು, ವೈದ್ಯರು ಹಿಪ್ ರಿಪ್ಲೇಸ್ ಮೆಂಟ್ ಶಸ್ತ್ರಕ್ರಿಯೆ ನಡೆಸುವ ಅಗತ್ಯವಿದೆ ಎಂದಿದ್ದರು. ಜೊತೆಗೆ ಆತನಿಗೆ ಮುಂದೆ ನಡೆದಾಡಲು ಸಾಧ್ಯವೇ ಎಂಬ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. ಹೀಗಾಗಿ ಭವಿಷ್ಯದ ಖರ್ಚುವೆಚ್ಚಗಳ ಬಗ್ಗೆ ಚಿಂತಾಕ್ರಾಂತರಾದ ಊರ್ವಶಿ ತನ್ನ ನರ್ಸರಿ ಶಾಲಾ ಶಿಕ್ಷಕಿ ಹುದ್ದೆ ತೊರೆದು ಈ ತಳ್ಳು ಆಹಾರ ಗಾಡಿ ನಡೆಸಲು ತೀರ್ಮಾನಿಸಿದ್ದರು.

ಸದ್ಯದ ಮಟ್ಟಿಗೆ ಖರ್ಚುವೆಚ್ಚದ ಸಮಸ್ಯೆಯಿಲ್ಲದಿದ್ದರೂ ಭವಿಷ್ಯದ ಬಗ್ಗೆ ಆಕೆಗೆ ಚಿಂತೆಯಿದೆ, ಆ ಚಿಂತೆಯೇ ಆಕೆಗೆ ಈ ಉದ್ಯೋಗ ಆರಿಸುವಂತೆ ಮಾಡಿದೆ. ಆಕೆಯ ಪತಿ ಖ್ಯಾತ ಕಟ್ಟಡ ನಿರ್ಮಾಣ ಸಂಸ್ಥೆಯೊಂದರಲ್ಲಿ ಅಧಿಕಾರಿಯಾಗಿದ್ದರೆ, ಮಾವ ವಾಯುಪಡೆಯ ನಿವೃತ್ತ ಕಮಾಂಡರ್ ಆಗಿದ್ದರು.
ಆಕೆಯ 12 ವರ್ಷದ ಪುತ್ರಿ ನಂದಿನಿ ಬ್ಲೂ ಬೆಲ್ಸ್ ಪಬ್ಲಿಕ್ ಸ್ಕೂಲ್‌ನಲ್ಲಿ ಕಲಿಯುತ್ತಿದ್ದಾಳೆ ಹಾಗೂ 7 ವರ್ಷದ ಪುತ್ರ ಯತೀಶ್ ಅಮೆರಿಕನ್ ಮಾಂಟೆಸ್ಸರಿ ಪಬ್ಲಿಕ್ ಸ್ಕೂಲ್‌ನಲ್ಲಿ ಕಲಿಯುತ್ತಿದ್ದಾನೆ. ಈ ಹಿಂದೆ 2010ರಲ್ಲಿ ಯೂನಿಟೆಕ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದ ಆಕೆಯ ಪತಿ ಅಮಿತ್ ಕ್ರಿಕೆಟ್ ಆಡುವಾಗ ಬಲಗಾಲಿನ ಮೂಳೆ ಮುರಿತಕ್ಕೊಳಗಾಗಿ ಶಸ್ತ್ರಕ್ರಿಯೆಗೊಳಗಾಗಿದ್ದರು.

ಊವರ್ಶಿಯವರ ಗಾಡಿ ಆಹಾರ ಗುರ್‌ಗಾಂವ್ ವಾಸಿಗಳಲ್ಲಿ ಜನಪ್ರಿಯವಾಗಿದ್ದು, ಫೇಸ್‌ಬುಕ್ ಪುಟ ‘ಸೋಲ್ ಸ್ಟರ್ರಿಂಗ್ಸ್ ಬಯ ಸುನಾಲಿ’ಯಲ್ಲಿಯೂ ಅವರ ಬಗ್ಗೆ ಬರೆಯಲಾಗಿದ್ದು ಈ ಪೇಜಿಗೆ 27,000 ಲೈಕ್‌ಗಳು ಸಿಕ್ಕಿದ್ದರೆ 9,000 ಮಂದಿ ಅದನ್ನು ಶೇರ್ ಮಾಡಿದ್ದಾರೆ.

ಪದವೀಧರೆಯಾಗಿರುವ ಊರ್ವಶಿ ತಾನು ತನ್ನ ಈ ಮೊಬೈಲ್ ಫುಡ್‌ಸ್ಟಾಲ್‌ನಿಂದ ದಿನವೊಂದಕ್ಕೆ 2,500 ರೂ.ಗಳಿಂದ 3,000 ರೂ. ತನಕ ಪಡೆಯುತ್ತೇನೆ ಎಂದು ಹೇಳುತ್ತಾರಲ್ಲದೆ ಮುಂದೆ ಟ್ರಕ್ ಖರೀದಿಸುವ ಅಥವ ರೆಸ್ಟೋರೆಂಟ್ ತೆರೆಯುವ ಯೋಚನೆಯೂ ಅವರಿಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X