Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಡಬ: ಅಧಿಕಾರಿಗಳ ಬೆವರಿಳಿಸಿದ ‘ಎಸಿ’

ಕಡಬ: ಅಧಿಕಾರಿಗಳ ಬೆವರಿಳಿಸಿದ ‘ಎಸಿ’

ಪುತ್ತೂರು ಎಸಿಯಿಂದ ಅಹವಾಲು ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ4 Aug 2016 6:39 PM IST
share
ಕಡಬ: ಅಧಿಕಾರಿಗಳ ಬೆವರಿಳಿಸಿದ ‘ಎಸಿ’

ಕಡಬ, ಆ.4: 2016 ಮೇ.31ರೊಳಗೆ ಸಲ್ಲಿಕೆಯಾಗಿರುವ 94ಸಿ ಅರ್ಜಿಗಳನ್ನು ಆ.31ರೊಳಗೆ ವಿಲೇವಾರಿ ಮಾಡುವಂತೆ ಪುತ್ತೂರು ಸಹಾಯಕ ಆಯುಕ್ತ ಡಾ.ರಾಜೇಂದ್ರ ಕೆ.ವಿ. ಕಡಬ ತಹಸೀಲ್ದಾರ್, ಕಂದಾಯ ನಿರೀಕ್ಷಕರು ಹಾಗೂ ಗ್ರಾಮಕರಣಿಕರಿಗೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಅಲ್ಲದೆ, ಕಾನೂನು ರೀತಿಯಲ್ಲಿ ಮಂಜೂರಾತಿ ಮಾಡಲು ಸಾಧ್ಯವಿಲ್ಲದಿದ್ದರೆ ಅಂತಹ ಕಡತಗಳನ್ನು ತಿರಸ್ಕರಿಸಬೇಕು. ಈ ಬಗ್ಗೆ ಸಂಪೂರ್ಣ ವಿವರಣೆಯನ್ನು ಆ.31ರೊಳಗೆ ನೀಡುವಂತೆ ತಾಕೀತು ಮಾಡಿದ್ದು, ಇಲ್ಲದಿದ್ದರೆ ಸೂಕ್ತ ಕಾನೂನು ಕ್ರಮ ಎದುರಿಸಬೇಕಾದಿತು ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ.

ಕಡಬ ತಹಸೀಲ್ದಾರ್ ಕಚೇರಿಯಲ್ಲಿ ಪ್ರತಿ ಗ್ರಾಮಗಳ ಗ್ರಾಮ ಕರಣಿಕರನ್ನು ಪ್ರತ್ಯೇಕವಾಗಿ ಕರೆದು 94ಸಿ ಅರ್ಜಿ ವಿಲೇವಾರಿ, ಅಕ್ರಮ ಸಕ್ರಮ ಕಡತ ವಿಲೇವಾರಿ ಅಲ್ಲದೆ 5 ಎಕರೆಗಿಂತ ಹೆಚ್ಚು ಸರಕಾರಿ ಜಮೀನು ಹೊಂದಿರುವವರ ಪಟ್ಟಿ ಮುಂತಾದವುಗಳ ಬಗ್ಗೆ ವಿಚಾರಣೆ ನಡೆಸಿದರು.

ಈ ಸಂದರ್ಭದಲ್ಲಿ ಗ್ರಾಮಕರಣಿಕರು ಹಾಗೂ ಕಂದಾಯ, ಸರ್ವೇ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಸರಕಾರ ಬಡವರಿಗಾಗಿ ನಿವೇಶನ ಸ್ಥಳವನ್ನು ಮಂಜೂರು ಮಾಡಲು ಕಾನೂನು ರೂಪಿಸಿದ್ದು, ಆದರೆ ವಿವಿಧ ಕಾರಣಗಳನ್ನು ಮುಂದಿಟ್ಟುಕೊಂಡು ಕಡತವನ್ನು ಪೆಂಡಿಂಗ್ ಇಡುತ್ತಿರುವ ಈ ಬಗ್ಗೆ ಹಲವು ಆರೋಪಗಳು ಕೇಳಿಬರುತ್ತಿದೆ. ನಿಮಗೆ ಸಲ್ಲಿಕೆಯಾದ ಅರ್ಜಿಗಳನ್ನು ನೀವು ಕೂಡಲೇ ವಿಲೇವಾರಿ ಮಾಡಬೇಕು. ಕಾನೂನು ತೊಡಕುಗಳಿದ್ದರೆ ಕೂಡಲೇ ಅಂತಹ ಕಡತಗಳನ್ನು ತಿರಸ್ಕರಿಸಿ. ಸಂಶಯ ಇರುವ ಫೈಲುಗಳನ್ನು ಮಾತ್ರ ಅರಣ್ಯ ಇಲಾಖೆಯ ಒಪ್ಪಿಗೆಗೆ ಬರೆಯಿರಿ, ಆರ್‌ಟಿಸಿಯಲ್ಲಿ ಅರಣ್ಯ ಎಂದು ನಮೂದಾಗಿದ್ದರೆ ಅಂತಹ ಫೈಲುಗಳನ್ನು ಕೂಡಲೇ ರಿಜೆಕ್ಟ್ ಮಾಡಿ ಎಂದು ಗರಂ ಆಗಿ ಹೇಳಿದರು.

ಅರ್ಹರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು. ಮುಂದಿನ ಶುಕ್ರವಾರದೊಳಗೆ ಪ್ರತಿ ಗ್ರಾಮಕರಣಿಕರು ದೂರವಾಣಿ ಕರೆ ಮಾಡಿಯಾದರೂ ತಾವು ಮಾಡಿದ ಕೆಲಸಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಹೇಳಿದರಲ್ಲದೆ, ಆ.31ರೊಳಗೆ ಕಡತಗಳ ವಿಲೇವಾರಿ ಮಾಡದಿದ್ದರೆ ಶಿಸ್ತುಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದರು.

ಕಡಬ ಸರ್ವೇ ಇಲಾಖೆಯಲ್ಲಿ ಸರ್ವೇಯರ್ ಕೊರತೆಯಿಂದ ಸರ್ವೇ ಕೆಲಸ ವಿಳಂಬ ಆಗುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡ ಎಸಿಯವರು ಸುಳ್ಯ ತಾಲೂಕಿನಿಂದ ಹೆಚ್ಚುವರಿ ಓರ್ವ ಸರ್ವೇಯರ್‌ರನ್ನು ಕಡಬಕ್ಕೆ ನೇಮಿಸುವುದಾಗಿ ತಿಳಿಸಿದರು. 5 ಎಕರೆಗಿಂತ ಹೆಚ್ಚು ಸರಕಾರಿ ಭೂಮಿ ಹೊಂದಿರುವವರ ಪಟ್ಟಿ ಮಾಡಿಕೊಂಡು ಅಂತಹವರಿಗೆ ನೋಟಿಸ್ ನೀಡಿ ಸರಕಾರಿ ಭೂಮಿಯನ್ನು ವಶಕ್ಕೆ ಪಡೆದುಕೊಳ್ಳಬೇಕು. ಅಲ್ಲಲ್ಲಿ ಮರಳು ಅಡ್ಡೆಗಳು ಇದ್ದು ಅಂತಹ ಮರಳು ತೆಗೆಯುವ ಸ್ಥಳಗಳನ್ನು ಪಟ್ಟಿ ಮಾಡುವಂತೆ ತಹಸೀಲ್ದಾರ್‌ಗೆ ಎಸಿ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಕಡಬ ವಿಶೇಷ ತಹಸೀಲ್ದಾರ್ ಬಿ.ಲಿಂಗಯ್ಯ, ಉಪ ತಹಶೀಲ್ದಾರ್ ನವ್ಯಾ, ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ಗುಮಾಸ್ತೆ ಭಾರತಿ, ಕವಿತಾ, ಗ್ರಾಮಕರಣಿಕರಾದ ನೆಬಿಸಾಬ್, ರಂಜನ್, ಶ್ರೀರಾಜ್, ಉತ್ತಪ್ಪ, ಪ್ರತಾಪ್, ವಿಜೇತ್, ಕೆಂಚನ ಗೌಡ, ದೇವಕಿ, ಗಂಗಾಧರ್, ಪೃಥ್ವಿರಾಜ್, ಸಂತೋಷ್, ರವಿಚಂದ್ರ, ಪುಷ್ಪರಾಜ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X