Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಒಲಿಂಪಿಕ್ಸ್ ಪದಕ ದ್ವಿಗುಣಗೊಳಿಸಲು ಸರಕಾರ...

ಒಲಿಂಪಿಕ್ಸ್ ಪದಕ ದ್ವಿಗುಣಗೊಳಿಸಲು ಸರಕಾರ ವಿಶೇಷ ಉಪಕ್ರಮ

ವಾರ್ತಾಭಾರತಿವಾರ್ತಾಭಾರತಿ4 Aug 2016 11:49 PM IST
share
ಒಲಿಂಪಿಕ್ಸ್ ಪದಕ ದ್ವಿಗುಣಗೊಳಿಸಲು ಸರಕಾರ ವಿಶೇಷ ಉಪಕ್ರಮ

 ಹೊಸದಿಲ್ಲಿ, ಆ.4: ಭಾರತ ಈ ಬಾರಿಯ ರಿಯೋ ಗೇಮ್ಸ್‌ಗೆ ಅತ್ಯಂತ ದೊಡ್ಡ ಸಂಖ್ಯೆಯಲ್ಲಿ ಅಥ್ಲೀಟ್‌ಗಳನ್ನು ಕಳುಹಿಸಿಕೊಟ್ಟಿದ್ದು, ಈ ಮೊದಲಿನ ಆವೃತ್ತಿಗಿಂತ ಹೆಚ್ಚು ಪದಕ ಗೆಲ್ಲಲಿದೆ ಎಂಬ ವಿಶ್ವಾಸವಿದೆ. ಲಂಡನ್ ಒಲಿಂಪಿಕ್ಸ್ ಬಳಿಕ ಕೇಂದ್ರ ಸರಕಾರ ಹಾಗೂ ಭಾರತದ ಕ್ರೀಡಾ ಪ್ರಾಧಿಕಾರ(ಸಾಯ್) ವಿಶೇಷ ಉಪಕ್ರಮಗಳನ್ನು ತೆಗೆದುಕೊಂಡಿದೆ. ಅವುಗಳೆಂದರೆ ....

1.ರಾಷ್ಟ್ರೀಯ ಕ್ರೀಡಾಭಿವೃದ್ದಿ ನಿಧಿಯಡಿ ಯುವಜನ ವ್ಯವಹಾರ ಹಾಗೂ ಕ್ರೀಡಾ ಇಲಾಖೆ ‘ಟಾರ್ಗೆಟ್ ಫೋರ್ ಪೋಡಿಯಂ(ಟಾಪ್) ಯೋಜನೆ ರಚಿಸಿತ್ತು. ಈ ಯೋಜನೆಗೆ 45 ಕೋಟಿ ರೂ. ಮೀಸಲಿಡಲಾಗಿದ್ದು, 100ಕ್ಕೂ ಅಧಿಕ ಅಥ್ಲೀಟ್‌ಗಳು ಈ ಯೋಜನೆ ಪ್ರಯೋಜನ ಪಡೆದಿದ್ದಾರೆ. ಪ್ರತಿ ಅಥ್ಲೀಟ್‌ಗಳಿಗೆ 30ರಿಂದ 150 ಲಕ್ಷ ರೂ. ಆರ್ಥಿಕ ನೆರವು ಮಂಜೂರು ಮಾಡಲಾಗಿದೆ.

2. ತರಬೇತಿ ಹಾಗೂ ಪಂದ್ಯಾವಳಿಗಳ ವಾರ್ಷಿಕ ಕ್ಯಾಲೆಂಡರ್ ಪ್ರಕಾರ ಅಥ್ಲೀಟ್‌ಗಳಿಗೆ ವಿದೇಶದಲ್ಲಿ ತರಬೇತಿ ನಡೆಸಲು ಉದಾರ ಆರ್ಥಿಕ ನೆರವು ನೀಡಲಾಗಿದ್ದು, ಈ ಉದ್ದೇಶಕ್ಕಾಗಿ ಕಳೆದ ಎರಡು ವರ್ಷಗಳಲ್ಲಿ ಒಟ್ಟು 180 ಕೋಟಿ ರೂ. ಬಜೆಟ್ ಮೀಸಲಿಡಲಾಗಿದೆ.

3.2012ರ ಒಲಿಂಪಿಕ್ಸ್‌ನಿಂದ ಈ ತನಕ ಸಾಯ್ ಕೇಂದ್ರಗಳಲ್ಲಿ ಹಲವಾರು ಆಧುನಿಕ ಕ್ರೀಡಾ ಸಾಧನಗಳನ್ನು ಅಳವಡಿಸಲಾಗಿದೆ. ಆಧುನಿಕ ಕ್ರೀಡಾ ವಿಜ್ಞಾನ ಸಲಕರಣೆಗಳನ್ನು ವಿವಿಧ ಕೇಂದ್ರಕ್ಕೆ ಒದಗಿಸಲಾಗಿದೆ. ಇದನ್ನು ಅಥ್ಲೀಟ್‌ಗಳು ಬಳಸಿಕೊಂಡಿದ್ದಾರೆ.

4. ರಿಯೋ ಒಲಿಂಪಿಕ್ಸ್ ತಯಾರಿಗೆ ಅಥ್ಲೀಟ್‌ಗಳ ಅಗತ್ಯಕ್ಕೆ ತಕ್ಕಂತೆ ಫಿಸಿಯೋ, ಮಸಾಜ್ ತಜ್ಞರು ಹಾಗೂ ತರಬೇತುದಾರರನ್ನು ಒದಗಿಸಲಾಗಿದೆ.

5. ವೈಯಕ್ತಿಕ ಕೋಚ್‌ಗಳು, ಸಲಹೆಗಾರರು, ತರಬೇತುದಾರರು, ಪಿಸಿಯೋ ಹಾಗೂ ಇತರ ಸಹಾಯಕ ಸಿಬ್ಬಂದಿಗಳ ನೆರವಿನಿಂದ ಹೊರಗಡೆ ಇಲ್ಲವೇ ರಾಷ್ಟ್ರೀಯ ಶಿಬಿರಗಳಲ್ಲಿ ಅಭ್ಯಾಸ ನಡೆಸಲು ಅವಕಾಶ ಕಲ್ಪಿಸಲಾಗಿದೆ.

6. ಅಥ್ಲೀಟ್‌ಗಳ ಕೋಚಿಂಗ್ ಹಾಗೂ ತರಬೇತಿಗೆ 40ಕ್ಕೂ ಅಧಿಕ ವಿದೇಶಿ ಕೋಚ್‌ಗಳು ಹಾಗೂ ಇತರ ತಜ್ಞರನ್ನು ನಿಯೋಜಿಸಲಾಗಿದೆ.

7. ಈ ಹಿಂದಿನ ಒಲಿಂಪಿಕ್ಸ್‌ನಲ್ಲಿ ಗೇಮ್ಸ್ ಆರಂಭವಾಗುವ 2-3 ದಿನದ ಮುಂಚಿತವಾಗಿ ಅಥ್ಲೀಟ್‌ಗಳನ್ನು ಕಳುಹಿಸಿಕೊಡಲಾಗುತ್ತಿತ್ತು. ಈ ಬಾರಿ 15-20 ದಿನಗಳು ಮುಂಚಿತವಾಗಿ ಅಥ್ಲೀಟ್‌ಗಳು ರಿಯೋ ತಲುಪಿದ್ದಾರೆ. ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಅನುವು ಮಾಡಿಕೊಡಲಾಗಿದೆ.

8. ಅಥ್ಲೀಟ್‌ಗಳ ಊಟೋಪಚಾರಕ್ಕೆ ನೀಡುವ ಹಣವನ್ನು ದಿನಕ್ಕೆ 450ರಿಂದ 650 ರೂ.ಗೆ ಹೆಚ್ಚಿಸಲಾಗಿದೆ. ಪೂರಕ ಆಹಾರದ ಶುಲ್ಕವನ್ನು ದಿನಕ್ಕೆ 300 ರಿಂದ 700 ರೂ.ಗೆ ಏರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X