Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಿಯೋ ಒಲಿಂಪಿಕ್ಸ್‌ಗೆ ಕೊಡಗಿನ...

ರಿಯೋ ಒಲಿಂಪಿಕ್ಸ್‌ಗೆ ಕೊಡಗಿನ ಕ್ರೀಡಾಪಟುಗಳು

ವಾರ್ತಾಭಾರತಿವಾರ್ತಾಭಾರತಿ4 Aug 2016 11:53 PM IST
share
ರಿಯೋ ಒಲಿಂಪಿಕ್ಸ್‌ಗೆ ಕೊಡಗಿನ ಕ್ರೀಡಾಪಟುಗಳು

ನಿಖಿನ್ ತಿಮ್ಮಯ್ಯಗೆ ಸ್ಥಾನ 

 ಮಡಿಕೇರಿ, ಆ.4: ಆ.5ರಿಂದ 21ರವರೆಗೆ ನಡೆಯಲಿರುವ ರಿಯೋ ಒಲಿಂಪಿಕ್ಸ್‌ನಲ್ಲಿ ಭಾರತದಿಂದ 114 ಕ್ರೀಡಾಪಟುಗಳು ಭಾಗವಹಿಸಲಿದ್ದು, ಕೊಡಗಿನಿಂದ 4 ಹಾಕಿ ಪಟುಗಳು ಸೇರಿದಂತೆ ಒಟ್ಟು 7 ಮಂದಿ ದೇಶವನ್ನು ಪ್ರತಿನಿಧಿಸಲಿದ್ದಾರೆ. ಕೊಡಗಿನ ಹಾಕಿ ಪಟುಗಳಾದ ಎಸ್.ವಿ. ಸುನಿಲ್, ವಿ.ಆರ್. ರಘುನಾಥ್, ಎಸ್.ಕೆ. ಉತ್ತಪ್ಪ, ನಿಖಿನ್ ತಿಮ್ಮಯ್ಯ ರಿಯೋ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದು, ಭಾರತೀಯ ಟೆನ್ನಿಸ್ ರಂಗದಲ್ಲಿ ಗಮನ ಸೆಳೆದಿರುವ ಆಟಗಾರ ಕೊಡಗಿನ ರೋಹನ್ ಬೋಪಣ್ಣ, ಬ್ಯಾಡ್ಮಿಂಟನ್ ತಾರೆ ಅಶ್ವಿನಿ ಪೊನ್ನಪ್ಪ, ಓಟಗಾರ್ತಿ ಪೂವಮ್ಮ(ಅಥ್ಲೆಟಿಕ್ಸ್ -ರಿಲೇ) ಈ ಬಾರಿಯ ರಿಯೋ ಒಲಿಂಪಿಕ್ಸ್‌ನಲ್ಲಿ ಪದಕ ಪಡೆಯುವ ಹುಮ್ಮಸ್ಸಿನಲ್ಲಿದ್ದಾರೆ.
ಒಲಿಂಪಿಕ್ಸ್ ಇತಿಹಾಸದಲ್ಲಿ ಈವರೆಗೆ ಕೊಡಗಿನ ಸುಮಾರು 16 ಕ್ರೀಡಾಪಟುಗಳು ವಿವಿಧ ವಿಭಾಗಗಳಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ. ರೋಹನ್, ಅಶ್ವಿನಿ ಹಾಗೂ ಪೂವಮ್ಮರಿಗೆ ಇದು ಎರಡನೆ ಒಲಿಂಪಿಕ್ಸ್ ಆಗಿದ್ದು, ನಿಖಿನ್ ತಿಮ್ಮಯ್ಯ ಹೊಸ ಸೇರ್ಪಡೆಯಾಗಿದ್ದಾರೆ.
ರಾಷ್ಟ್ರಕ್ಕೆ ಅಸಂಖ್ಯಾತ ಕ್ರೀಡಾಪಟುಗಳನ್ನು ಕೊಡುಗೆಯಾಗಿ ನೀಡಿರುವ ರಾಜ್ಯದ ಅತ್ಯಂತ ಪುಟ್ಟ ಜಿಲ್ಲೆ ಕೊಡಗು 2016ರ ರಿಯೋ ಒಲಿಂಪಿಕ್ಸ್‌ನಲ್ಲಿ ವಿಶೇಷ ಗಮನ ಸೆಳೆದಿದೆ. ದೇಶೀಯ ಕ್ರೀಡೆಯಾದ ಹಾಕಿಗೆ ಕೊಡಗಿನಲ್ಲಿ ಹೆಚ್ಚು ಮಹತ್ವವಿದ್ದು, ತಂಡದ ಸದಸ್ಯರ ಪೈಕಿ ಕೊಡಗಿನ ಹಾಕಿ ಪಟುಗಳು ಪಾರುಪತ್ಯ ಮೆರೆದಿದ್ದಾರೆ. ತಂಡದ ಒಟ್ಟು ಆಟಗಾರರಲ್ಲಿ 4 ಮಂದಿ ಕೊಡಗಿನವರಾಗಿರುವುದು ಹೆಮ್ಮೆಯ ವಿಷಯವಾಗಿದೆ.

ಮತ್ತೊಂದು ವಿಶೇಷವೆಂದರೆ, ತಂಡದ ಉಪನಾಯಕನಾಗಿ ಜಿಲ್ಲೆಯ ಎಸ್.ವಿ. ಸುನಿಲ್ ಆಯ್ಕೆಯಾಗಿದ್ದಾರೆ. ವಿ.ಆರ್. ರಘುನಾಥ್, ಎಸ್.ಕೆ. ಉತ್ತಪ್ಪ ಹಾಗೂ ಚೇಂದಂಡ ನಿಖಿನ್ ತಿಮ್ಮಯ್ಯ ತಂಡದಲ್ಲಿದ್ದಾರೆ. ಸುನಿಲ್, ರಘುನಾಥ್ ಹಾಗೂ ಉತ್ತಪ್ಪರಿಗೆ ಇದು ಎರಡನೆ ಒಲಿಂಪಿಕ್ಸ್ ಆಗಿದ್ದರೆ, ನಿಖಿನ್ ತಿಮ್ಮಯ್ಯ ಪ್ರಥಮ ಬಾರಿ ಪ್ರವೇಶ ಪಡೆದಿದ್ದಾರೆ. ರಿಯೋ ಒಲಿಂಪಿಕ್ಸ್‌ನಲ್ಲಿ ನಾಲ್ವರು ಪ್ರತಿನಿಧಿಸುವುದರೊಂದಿಗೆ ಹಾಕಿ ಇತಿಹಾಸದಲ್ಲಿ ಕೊಡಗಿನ 10 ಆಟಗಾರರು ಈ ವರೆಗೆ ದೇಶವನ್ನು ಪ್ರತಿನಿಧಿಸಿದಂತಾಗಿದೆ. ಸಿಯೋಲ್ ಒಲಿಂಪಿಕ್ಸ್ ಹಾಗೂ 1992 ರ ಬಾರ್ಸಿಲೋನಾದಲ್ಲಿ ನಡೆದ ಒಲಿಂಪಿಕ್ಸ್‌ನ ತಂಡದಲ್ಲಿ ಕೊಡಗಿನ ತಲಾ ಇಬ್ಬರು ಆಟಗಾರರಿದ್ದರು. 1988 ರಲ್ಲಿ ಎಂ.ಎಂ. ಸೋಮಯ್ಯ ಹಾಗೂ ಬಿ.ಕೆ. ಸುಬ್ರವುಣಿ ಹಾಗೂ 1992ರಲ್ಲಿ ಅಂಜಪರವಂಡ ಸುಬ್ಬಯ್ಯ, ಸಿ.ಎಸ್. ಪೂಣಚ್ಚ ಭಾರತ ತಂಡದಲ್ಲಿದ್ದರು. 2012ರಲ್ಲಿ ಲಂಡನ್ ಒಲಿಂಪಿಕ್ಸ್‌ನಲ್ಲಿ ಎಸ್. ವಿ. ಸುನಿಲ್, ರಘುನಾಥ್ ಹಾಗೂ ಎಸ್.ಕೆ. ಉತ್ತಪ್ಪ ತಂಡದಲ್ಲಿದ್ದರು. ಆದರೆ, ಈ ಬಾರಿ ಕೊಡಗಿನ ನಾಲ್ವರು ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X