Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ ಸಚಿವ ಜಲೀಲ್‌ಗೆ ಸೌದಿ ಪ್ರಯಾಣಕ್ಕೆ...

ಕೇರಳ ಸಚಿವ ಜಲೀಲ್‌ಗೆ ಸೌದಿ ಪ್ರಯಾಣಕ್ಕೆ ಪಾಸ್‌ಪೋರ್ಟ್ ನಿರಾಕರಿಸಿದ ಕೇಂದ್ರಸರಕಾರ!

ಸೌದಿ ಸಂತ್ರಸ್ತರ ವಿಷಯದಲ್ಲಿಯೂ ರಾಜಕೀಯ

ವಾರ್ತಾಭಾರತಿವಾರ್ತಾಭಾರತಿ5 Aug 2016 12:39 PM IST
share
ಕೇರಳ ಸಚಿವ ಜಲೀಲ್‌ಗೆ ಸೌದಿ ಪ್ರಯಾಣಕ್ಕೆ ಪಾಸ್‌ಪೋರ್ಟ್ ನಿರಾಕರಿಸಿದ ಕೇಂದ್ರಸರಕಾರ!

 ತಿರುವನಂತಪುರಂ,ಆ.5: ಸೌದಿ ಅರೇಬಿಯಾದಲ್ಲಿನ ಕೇರಳದ ಕಾರ್ಮಿಕರ ಸಮಸ್ಯೆಗೆ ಸಂಬಂಧಿಸಿ ಕೇರಳ ಸರಕಾರದ ವತಿಯಿಂದ ಸೌದಿ ಅರೇಬಿಯಾಕ್ಕೆ ಕಳುಹಿಸಲಿದ್ದ ಸಚಿವ ಕೆ.ಟಿ ಜಲೀಲ್‌ರಿಗೆ ವಿದೇಶ ಸಚಿವಾಲಯದಿಂದ ರಾಜತಾಂತ್ರಿಕ ಪಾಸ್‌ಪೋರ್ಟ್ ನಿರಾಕರಿಸಲಾಗಿದ್ದು ಈ ಕುರಿತು ರಾಜಕೀಯ ವಿವಾದವೊಂದು ಹೊಸದಾಗಿಸೃಷ್ಟಿಯಾಗಿದೆ ಎಂದು ತಿಳಿದು ಬಂದಿದೆ. ಜಲೀಲ್‌ರ ಸೌದಿ ಪ್ರಯಾಣಕ್ಕೆ ಅಡ್ಡಿಪಡಿಸಿದುದರ ಹಿಂದೆ ಸೌದಿಯಲ್ಲಿ ಸಿಲುಕಿಕೊಂಡಿರುವಕೇರಳದ ಉದ್ಯೋಗಿಗಳನ್ನು ಜಲೀಲ್ ಊರಿಗೆ ಕರೆತರುವ ಮೂಲಕ ರಾಜಕೀಯ ಲಾಭ ಪಡೆಯಬಹುದೆಂದು ಭಾವಿಸಿ ಕೇಂದ್ರ ಸರಕಾರ ಅವರ ಪ್ರಯಾಣಕ್ಕೆ ಅಡ್ಡಿಪಡಿಸಿದೆ ಎಂದು ಕೇರಳ ಸರಕಾರದ ಮೂಲಗಳು ತಿಳಿಸಿವೆ.

 ರಾಜತಾಂತ್ರಿಕ ಪಾಸ್‌ಪೋರ್ಟ್ ಲಭಿಸಲಿದೆ ಎಂಬ ನಿರೀಕ್ಷೆಯಲ್ಲಿ ಶುಕ್ರವಾರ ಸೌದಿಗೆ ಸಚಿವ ಜಲೀಲ್ ಮತ್ತು ಕೇರಳ ಸರಕಾರದ ಅಧೀನ ಕಾರ್ಯದರ್ಶಿ ವಿ.ಕೆ.ಬೇಬಿಯವರನ್ನು ಸೌದಿಗೆ ಕಳುಹಿಸಲು ಸಚಿವ ಸಂಪುಟ ತೀರ್ಮಾನಿಸಿತ್ತು. ಅದರಂತೆ ರಾಜತಾಂತ್ರಿಕ ಪಾಸ್‌ಪೋರ್ಟ್‌ಗೆ ಅರ್ಜಿಸಲ್ಲಿಸಲಾಗಿತ್ತು. ಸರಕಾರದ ಆದೇಶ ಮತ್ತು ಸಚಿವರ ಪ್ರವಾಸ ಕಾರ್ಯಕ್ರಮ ಸಂಹಿತೆಯನ್ನು ಗುರುವಾರ ಬೆಳಗ್ಗೆ ವಿದೇಶ ಸಚಿವಾಲಯದ ಅನುಮತಿಗಾಗಿ ಕಳುಹಿಸಿಕೊಡಲಾಗಿತ್ತು. ಇದಕ್ಕೆ ಸಂಬಂಧಿಸಿ ಸಚಿವ ಜಲೀಲ್ ವಿದೇಶ ಸಚಿವಾಲಯದ ಖಾಸಗಿ ಕಾರ್ಯದರ್ಶಿ ಸತೀಶ್ಚಂದ್ರ ಗುಪ್ತರೊಡನೆ ಮಾತಾಡಿದ್ದರು ಎನ್ನಲಾಗಿದೆ.

ಭಾರತದ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗಿದೆ. ಅಲ್ಲಿಂದ ಸೂಚನೆ ಸಿಕ್ಕಿದೊಡನೆ ಪಾಸ್‌ಪೋರ್ಟ್ ನೀಡಲಾಗುವುದು ಎಂದು ಉತ್ತರ ನೀಡಲಾಗಿತ್ತು. ನಂತರ ಸಚಿವ ಜಲೀಲ್ ಮತ್ತು ಕಾರ್ಯದರ್ಶಿ ಬೇಬಿಯವರ ಅರ್ಜಿ ತಿರಸ್ಕಾರಗೊಂಡಿದೆ ಎಂದು ಮಾಹಿತಿ ನೀಡಲಾಯಿತು.ಗುರುವಾರ ಪತ್ರಿಕಾಗೋಷ್ಠಿ ಕರೆದಿದ್ದರೂ ರಾಜತಾಂತ್ರಿಕ ಪಾಸ್‌ಪೋರ್ಟ ಲಭಿಸದ ವಿಷಯವನ್ನು ಸಚಿವರು ತಿಳಿಸಲಿಲ್ಲ. ಪಾಸ್‌ಪೋರ್ಟ್ ಸಿಕ್ಕದ ವಿಷಯ ತಿಳಿದಿಲ್ಲ ಎಂದು ಸರಕಾರದ ಮುಖ್ಯಕಾರ್ಯದರ್ಶಿ ಎಸ್‌ಎಂ ವಿಜಯಾನಂದ್ ಹೇಳಿದ್ದರು. 48 ಗಂಟೆ ಕಳೆದ ಬಳಿಕವೇ ಯಾವುದೇ ಮಾಹಿತಿ ನೀಡಲು ಸಾಧ್ಯ ಎಂದು ಕೇಂದ್ರದಿಂದ ತಿಳಿಸಲಾಗಿದೆ ಎಂದು ಮುಖ್ಯಕಾರ್ಯದರ್ಶಿ ಹೇಳಿದ್ದರು ಎಂದು ವರದಿ ತಿಳಿಸಿದೆ.

 ಜಿದ್ದ,ರಿಯಾದ್, ದಮ್ಮಾಂಗಳಿಗೆ ಭೇಟಿ ನೀಡಿ ಕೇರಳದ ಉದ್ಯೋಗಿಗಳ ಸಮಸ್ಯೆ ಪರಿಹಾರಕ್ಕೆ ನೇತೃತ್ವ ನೀಡುವ ಉದ್ದೇಶದಿಂದ ಜಲೀಲ್‌ರನ್ನು ಸೌದಿಗೆ ಕಳುಹಿಸಲು ಕೇರಳ ಸರಕಾರ ನಿರ್ಧರಿಸಿತ್ತು. ಸೌದಿಯಿಂದ ಮರಳಿಬರುವವರಿಗೆ ಪುನರ್ವಸತಿ ಪ್ಯಾಕೇಜ್ ಸರಕಾರದ ಪರಿಗಣನೆಯಲ್ಲಿದೆ ಎಂದು ಸಚಿವ ಜಲೀಲ್ ಈ ಹಿಂದೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು. ಆದರೆ ಈಗ ಸಚಿವ ಜಲೀಲ್‌ರ ಸೌದಿಯಾತ್ರೆಯನ್ನು ಉದ್ದೇಶಪೂರ್ವಕವಾಗಿ ಕೇಂದ್ರ ಸರಕಾರ ತಡೆದಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X