Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕ ಪರಮಾಣು ಅಸ್ತ್ರಗಳನ್ನು ಯಾಕೆ...

ಅಮೆರಿಕ ಪರಮಾಣು ಅಸ್ತ್ರಗಳನ್ನು ಯಾಕೆ ಬಳಸಬಾರದು? ಟ್ರಂಪ್ ಪ್ರಶ್ನೆ; ಅವರ ಮಾನಸಿಕ ಸ್ಥಿರತೆ ಬಗ್ಗೆ ಸಂಶಯ

ವಾರ್ತಾಭಾರತಿವಾರ್ತಾಭಾರತಿ5 Aug 2016 7:54 PM IST
share
ಅಮೆರಿಕ ಪರಮಾಣು ಅಸ್ತ್ರಗಳನ್ನು ಯಾಕೆ ಬಳಸಬಾರದು? ಟ್ರಂಪ್ ಪ್ರಶ್ನೆ; ಅವರ ಮಾನಸಿಕ ಸ್ಥಿರತೆ ಬಗ್ಗೆ ಸಂಶಯ

ವಾಶಿಂಗ್ಟನ್, ಆ. 5: ಪರಮಾಣು ಅಸ್ತ್ರಗಳ ಬಳಕೆ ಬಗ್ಗೆ ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ನೀಡಿದ್ದಾರೆನ್ನಲಾದ ಹೇಳಿಕೆಗೆ ಅಮೆರಿಕದ ವಿದೇಶ ನೀತಿ ಪರಿಣತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದೇ ವೇಳೆ, ಟ್ರಂಪ್‌ರ ಮಾನಸಿಕ ಸ್ಥಿರತೆ ಬಗ್ಗೆ ಹಾಗೂ ಜಗತ್ತಿನ ಅತ್ಯಂತ ಶಕ್ತಿಶಾಲಿ ಸೇನೆಯ ನಿಯಂತ್ರಣವನ್ನು ಅವರಿಗೆ ವಹಿಸಬಹುದೇ ಎಂಬ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಕಳವಳ ವ್ಯಕ್ತವಾಗುತ್ತಿದೆ.
 ಟ್ರಂಪ್‌ರ ಯದ್ವಾತದ್ವ ಸಾರ್ವಜನಿಕ ಹೇಳಿಕೆಗಳು ಹಾಗೂ ಅವರ ಹೇಳಿಕೆಗಳಲ್ಲಿ ಸ್ಪಷ್ಟತೆ ಮತ್ತು ಸಾಮ್ಯತೆ ಇಲ್ಲದಿರುವ ಬಗ್ಗೆ ಸ್ವತಃ ರಿಪಬ್ಲಿಕನ್ ಪಕ್ಷದಲ್ಲೇ ಭಿನ್ನಾಭಿಪ್ರಾಯಗಳಿವೆ. ಒಂದು ವೇಳೆ, ಯಾವುದೇ ಕಾರಣಕ್ಕಾಗಿ ಟ್ರಂಪ್ ತನ್ನ ಅಭ್ಯರ್ಥಿತ್ವವನ್ನು ನಿರಾಕರಿಸಿದರೆ ಏನು ಮಾಡಬೇಕು ಎಂಬ ಬಗ್ಗೆ ಚರ್ಚೆ ಮಾಡುವಷ್ಟು ದೂರಕ್ಕೆ ರಿಪಬ್ಲಿಕನ್ ಪಕ್ಷದ ಕೆಲವು ನಾಯಕರು ಹೋಗಿದ್ದಾರೆ ಎನ್ನಲಾಗಿದೆ.
  ಅಮೆರಿಕ ತನ್ನ ಪರಮಾಣು ಅಸ್ತ್ರಗಳನ್ನು ಯಾಕೆ ಬಳಸಬಾರದು ಎಂದು ಟ್ರಂಪ್ ಪದೇ ಪದೇ ವಿದೇಶ ನೀತಿ ಸಲಹಾಕಾರರೊಬ್ಬರನ್ನು ಪ್ರಶ್ನಿಸುವುದಕ್ಕೆ ಸಂಬಂಧಿಸಿದ ಸುದ್ದಿ ಮೊದಲು ಎಂಎಸ್‌ಎನ್‌ಬಿಸಿ ಟಿವಿ ಕಾರ್ಯಕ್ರಮದಲ್ಲಿ ಬುಧವಾರ ಪ್ರಸಾರವಾಯಿತು. ಇದು ರಿಪಬ್ಲಿಕನ್ ಅಭ್ಯರ್ಥಿಯ ಜವಾಬ್ದಾರಿ ಪ್ರಜ್ಞೆ ಬಗ್ಗೆ ಜನರಲ್ಲಿ ಇದ್ದ ಸಂಶಯದ ಬೆಂಕಿಗೆ ಇನ್ನಷ್ಟು ತುಪ್ಪ ಸುರಿಯಿತು.
‘‘ನಮ್ಮಲ್ಲಿ ಅವುಗಳು ಇರುವಾಗ ನಾವು ಅವುಗಳನ್ನು ಯಾಕೆ ಬಳಸಬಾರದು?’’ ಎಂಬುದಾಗಿ ಟ್ರಂಪ್ ಮೂರು ಬಾರಿ ಪ್ರಶ್ನಿಸಿದರು ಎಂದು ‘ಮಾರ್ನಿಂಗ್ ಜೋ’ ಕಾರ್ಯಕ್ರಮದ ನಿರೂಪಕ ಜೋ ಸ್ಕಾರ್‌ಬೋರೊ ಹೇಳುತ್ತಾರೆ. ಅವರು ಫ್ಲೋರಿಡದ ಮಾಜಿ ರಿಪಬ್ಲಿಕನ್ ಕಾಂಗ್ರೆಸ್ ಸದಸ್ಯರೂ ಹೌದು.
ಟ್ರಂಪ್ ಪ್ರಚಾರ ತಂಡ ಇದನ್ನು ನಿರಾಕರಿಸಿದೆಯಾದರೂ, ಜಾಗತಿಕ ವ್ಯವಹಾರಗಳ ಬಗ್ಗೆ ಟ್ರಂಪ್‌ರ ನಿರ್ಲಕ್ಷದ ಹಾಗೂ ಅಪ್ರಬುದ್ಧ ನಿಲುವನ್ನು ಅಲ್ಲಗಳೆಯಲು ಅದಕ್ಕೆ ಸಾಧ್ಯವಾಗಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X