Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದ 55 ಸಾವಿರಕ್ಕೂ ಅಧಿಕ ಗ್ರಾಮಗಳಲ್ಲಿ...

ದೇಶದ 55 ಸಾವಿರಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್ ಸಂಪರ್ಕವಿಲ್ಲ

ಕರ್ನಾಟಕ, ಕೇರಳದ ಎಲ್ಲ ಗ್ರಾಮಗಳಲ್ಲಿ ಮೊಬೈಲ್ ಜಾಲ

ವಾರ್ತಾಭಾರತಿವಾರ್ತಾಭಾರತಿ5 Aug 2016 11:43 PM IST
share

ಹೊಸದಿಲ್ಲಿ, ಆ.5: ಭಾರತದಲ್ಲಿ ಸುಮಾರು 55,000ಕ್ಕಿಂತ ಅಧಿಕ ಗ್ರಾಮಗಳಲ್ಲಿ ಇಂದಿಗೂ ಮೊಬೈಲ್ ಜಾಲ (ಕವರೇಜ್) ಇಲ್ಲ. ಇಂತಹ ಅತ್ಯಧಿಕ ಸಂಖ್ಯೆಯ ಗ್ರಾಮಗಳು ಒಡಿಶಾ ರಾಜ್ಯದಲ್ಲಿವೆ ಎಂದು ಕೇಂದ್ರ ಸಂಪರ್ಕ ಖಾತೆಯ ರಾಜ್ಯ ಸಚಿವ ಮನೋಜ್ ಸಿನ್ಹಾ ಶುಕ್ರವಾರ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.

 ‘‘ದೇಶದಲ್ಲಿ ಸುಮಾರು 55,000ಕ್ಕಿಂತ ಅಧಿಕ ಗ್ರಾಮಗಳಲ್ಲಿ ಮೊಬೈಲ್ ಸಂಪರ್ಕವಿಲ್ಲ ಎಂದು ಅಂದಾಜಿಸಲಾಗಿದೆ.ಹಣದ ಲಭ್ಯತೆಯ ಅನುಸಾರ ಮೊಬೈಲ್ ಸಂಪರ್ಕ ಒಳಪಡದ ಗ್ರಾಮಗಳಿಗೆ ಹಂತಹಂತವಾಗಿ ಒದಗಿಸಲಾಗುವುದು’’ ಎಂದು ರಾಜ್ಯಸಭೆಯಲ್ಲಿ ಲಿಖಿತ ಉತ್ತರವೊಂದರಲ್ಲಿ ಅವರು ತಿಳಿಸಿದರು.
ನಕ್ಸಲ್ ಪೀಡಿತ ಪ್ರದೇಶ, ಈಶಾನ್ಯ ರಾಜ್ಯಗಳು, ದ್ವೀಪಗಳು ಮತ್ತು ಹಿಮಾಲಯ ರಾಜ್ಯಗಳಾದ ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶಗಳಿಗೆ ಪ್ರಥಮ ಹಂತದಲ್ಲಿ ಮೊಬೈಲ್ ಸೇವೆಗಳನ್ನು ಒದಗಿಸುವುದು ಸರಕಾರದ ಆದ್ಯತೆಯಾಗಿದೆ ಎಂದು ಸಚಿವರು ತಿಳಿಸಿದರು.
  ಮೊಬೈಲ್ ಪ್ರಸಾರ ವ್ಯಾಪ್ತಿ ಹೊಂದಿರದ ಪೈಕಿ 10,398ರಷ್ಟು ಅತ್ಯಧಿಕ ಸಂಖ್ಯೆಯ ಗ್ರಾಮಗಳು ಒಡಿಶಾದಲ್ಲಿವೆ.ಜಾರ್ಖಂಡ್ ನಲ್ಲಿ 5,926, ಮಧ್ಯಪ್ರದೇಶದಲ್ಲಿ 5,926 , ಛತ್ತಿಸ್‌ಗಡದಲ್ಲಿ 4,041 ಹಾಗೂ ಆಂಧ್ರಪ್ರದೇಶದಲ್ಲಿ 3,812. ಆದರೆ ಕರ್ನಾಟಕ ,ಕೇರಳ ಮತ್ತು ಪುದುಚೇರಿಗಳಲ್ಲಿ ಮೊಬೈಲ್ ಸೇವೆಗಳ ಸಂಪರ್ಕವು ಎಲ್ಲ ಗ್ರಾಮಗಳಲ್ಲಿ ಇವೆ ಎಂದು ಸಚಿವರು ಹೇಳಿದ್ದಾರೆ.
2011ರ ಜನಗಣತಿಯ ಪ್ರಕಾರ 5,93,601 ಜನ ವಸತಿ ಗ್ರಾಮಗಳ ಪೈಕಿ 5,81,183 (ಶೇ.97.9) ಗಳಿಗೆ ಸಾರ್ವತ್ರಿಕ ಸೇವೆ ಬಾಧ್ಯತೆಯ ನಿಧಿಯ ಆರ್ಥಿಕ ನೆರವಿನೊಂದಿಗೆ ಸಾರ್ವಜನಿಕ ದೂರವಾಣಿಯನ್ನು ಒದಗಿಸಲಾಗಿದೆ ಎಂದು ಸಚಿವರು ಹೇಳಿದರು.
ಸಾರ್ವತ್ರಿಕ ಸಂಪರ್ಕ ತೆರಿಗೆಯಡಿಯಲ್ಲಿ 76,403.7 ಕೋ.ರೂ. ಸಂಗ್ರಹಿಸಲಾಗಿದೆ. ಅದರಲ್ಲಿ 2016ರ ಜೂನ್ 30ರೊಳಗೆ 31,147.19 ಕೋ.ರೂ. ಸಾರ್ವತ್ರಿಕ ಸೇವೆ ಬಾಧ್ಯತೆಯ ನಿಧಿ (ಯುಎಸ್‌ಒಎಫ್)ಯ ಮೂಲಕ ಹಂಚಿಕೆ ಮತ್ತು ವಿತರಿಸಲಾಗಿದೆ ಎಂದು ಸಚಿವ ಮನೋಜ್ ಸಿನ್ಹಾ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X