Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 100 ರೂಪಾಯಿ ಲಂಚ ಕೊಡದ್ದಕ್ಕೆ ಇಬ್ಬರು...

100 ರೂಪಾಯಿ ಲಂಚ ಕೊಡದ್ದಕ್ಕೆ ಇಬ್ಬರು ಕಾರ್ಮಿಕರನ್ನು ಕೊಂದೇ ಬಿಟ್ಟ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ6 Aug 2016 8:41 AM IST
share
100 ರೂಪಾಯಿ ಲಂಚ ಕೊಡದ್ದಕ್ಕೆ ಇಬ್ಬರು ಕಾರ್ಮಿಕರನ್ನು ಕೊಂದೇ ಬಿಟ್ಟ ಪೊಲೀಸರು

ಆಗ್ರಾ, ಆ.6: ಕಾನ್ಪುರದಲ್ಲಿ ದಲಿತ ಯುವಕನೊಬ್ಬನ ಶಂಕಿತ ಲಾಕಪ್ ಡೆತ್ ಪ್ರಕರಣ, 15 ರೂಪಾಯಿ ಸಾಲದ ವಿವಾದದಲ್ಲಿ ದಂಪತಿ ಹತ್ಯೆ ಘಟನೆಗಳು ಮಾಸುವ ಮುನ್ನವೇ, 100 ರೂಪಾಯಿ ಲಂಚ ನೀಡಲು ನಿರಾಕರಿಸಿದ ಇಬ್ಬರು ಕಾರ್ಮಿಕರನ್ನು ಪೊಲೀಸರು ಹೊಡೆದು ಕೊಂದ ಪೈಶಾಚಿಕ ಘಟನೆ ಮೈನ್‌ಪುರಿ ಜಿಲ್ಲೆಯಿಂದ ವರದಿಯಾಗಿದೆ.

ಜಿಲ್ಲೆಯ ಚೆಕ್‌ಪಾಯಿಂಟ್ ಪೊಲೀಸರು ಈ ಕೃತ್ಯ ಎಸಗಿದ್ದಾರೆ. ಆರಂಭದಲ್ಲಿ ಪೊಲೀಸರು ಈ ಕೃತ್ಯವನ್ನು ಒಪ್ಪಿಕೊಂಡಿರಲಿಲ್ಲ. ದಿಲೀಪ್ ಯಾದವ್ ಹಾಗೂ ಪಂಕಜ್ ಯಾದವ್ ಅವರು ಪೊಲೀಸರಿಂದ ತಪ್ಪಿಸಿಕೊಂಡು ಹೋಗಲು ಯತ್ನಿಸಿದಾಗ ಕೆರೆಯಲ್ಲಿ ಮುಳುಗಿ ಸತ್ತಿದ್ದಾರೆ ಎಂದು ಕಥೆ ಕಟ್ಟಿದ್ದರು. ಆದರೆ ಯುವಕರ ಮರಣೋತ್ತರ ಪರೀಕ್ಷೆಯಲ್ಲಿ, ಇವರು ಮೃತಪಟ್ಟಿರುವುದು ನೀರಿನಲ್ಲಿ ಮುಳುಗಿದ ಕಾರಣದಿಂದ ಅಲ್ಲ, ಪೊಲೀಸರ ಹಲ್ಲೆಯಿಂದ ಎಂದು ಸ್ಪಷ್ಟವಾಗಿ ತಿಳಿದುಬಂದಿದೆ.

ಈ ಸಂಬಂಧ ಪೊಲೀಸರು ನಾಲ್ವರು ಸಹೋದ್ಯೋಗಿಗಳ ವಿರುದ್ಧ ಮತ್ತು ಇಬ್ಬರು ಗೃಹರಕ್ಷಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಲ್ಲರನ್ನೂ ಅಮಾನತುಗೊಳಿಸಲಾಗಿದೆ.

ನಾಲ್ವರು ಕಾರ್ಮಿಕರು ಇಟ್ಟಿಗೆ ತುಂಬಿದ್ದ ಟ್ರಕ್‌ನಲ್ಲಿ ಹೋಗುತ್ತಿದ್ದಾಗ ಶುಕ್ರವಾರ ಮುಂಜಾನೆ ಕೊಸ್ಮಾ ಚೆಕ್‌ಪೋಸ್ಟ್ ಬಳಿ ಪೊಲೀಸರು ಟ್ರಕ್ ತಡೆದರು. ಟ್ರಕ್ ಬಿಡಬೇಕಾದರೆ 100 ರೂಪಾಯಿ ಲಂಚ ಕೊಡುವಂತೆ ಪೊಲೀಸರು ಕೇಳಿದರು. ಆದರೆ ಚಾಲಕ ವಿನೇಶ್ ನಿರಾಕರಿಸಿದಾಗ, ಸಿಟ್ಟಿನಿಂದ ಪೊಲೀಸರು ಥಳಿಸಿದರು ಎಂದು ಮೃತ ಯುವಕರ ಸಂಬಂಧಿಕರು ದೂರಿನಲ್ಲಿ ವಿವರಿಸಿದ್ದಾರೆ.

ಚಾಲಕ ವಿನೇಶ್ ಹಾಗೂ ಇತರ ಇಬ್ಬರು ಕಾರ್ಮಿಕರಾದ ನೇತ್ರಪಾಲ್ ಹಾಗೂ ರಾಧಾಮೋಹನ್ ಎಂಬವರು ತಪ್ಪಿಸಿಕೊಂಡರು. ಆಗ ಪೊಲೀಸರು ದಿಲೀಪ್ ಹಾಗೂ ಪಂಕಜ್‌ನನ್ನು ಹಿಡಿದು ಅಮಾನುಷವಾಗಿ ಹಲ್ಲೆ ನಡೆಸಿದರು. ಬೆಳಗ್ಗೆ 10:30ರ ವೇಳೆಗೆ ಮೃತದೇಹಗಳು ಪಕ್ಕದ ಕೆರೆಂುಲ್ಲಿ ತೇಲುತ್ತಿದ್ದವು. ಪೊಲೀಸರು ಹೊಡೆದು ಸಾಯಿಸಿ ಕೆರೆಗೆ ತಳ್ಳಿದರು ಎಂದು ದೂರಲಾಗಿದೆ.

ಘಟನೆಯನ್ನು ಖಂಡಿಸಿ ಗ್ರಾಮಸ್ಥರು ರಸ್ತೆ ತಡೆ ಚಳವಳಿ ನಡೆಸಿದರು. ಪರಿಸ್ಥಿತಿ ನಿಯಂತ್ರಿಸಲು ಆಗಮಿಸಿದ ಇಬ್ಬರು ಪೊಲೀಸರನ್ನೂ ಪ್ರತಿಭಟನಾಕಾರರು ಥಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X