Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಸರ್ ಮಅದನಿ : ವಿಚಾರಣಾಧೀನ ಕೈದಿಯಾಗಿ...

ನಾಸರ್ ಮಅದನಿ : ವಿಚಾರಣಾಧೀನ ಕೈದಿಯಾಗಿ ಹದಿನೈದುವರೆ ವರ್ಷ

ಆಗಸ್ಟ್ 17 ರಂದು ಸಾಲಿಡಾರಿಟಿ ಸಂಗಮ

ವಾರ್ತಾಭಾರತಿವಾರ್ತಾಭಾರತಿ6 Aug 2016 11:40 AM IST
share
ನಾಸರ್ ಮಅದನಿ : ವಿಚಾರಣಾಧೀನ ಕೈದಿಯಾಗಿ ಹದಿನೈದುವರೆ ವರ್ಷ

ಕೊಲ್ಲಂ, ಆ.6: 2008ರ ಬೆಂಗಳೂರು ಸ್ಫೋಟ ಪ್ರಕರಣ ಸಂಬಂಧ ಬಂಧಿತರಾಗಿ ಕಳೆದ ಆರು ವರ್ಷದಿಂದ ಪಿಡಿಪಿ ನಾಯಕ ಅಬ್ದುಲ್ ನಾಸರ್ ಮದನಿ ವಿಚಾರಣಾಧೀನ ಕೈದಿಯಾಗಿರುವ ಹಿನ್ನೆಲೆಯಲ್ಲಿ ಸಾಲಿಡಾರಿಟಿ ಯುತ್ ಮೂವ್‌ಮೆಂಟ್ ಕೊಲ್ಲಂ ನಗರದಲ್ಲಿ ಆಗಸ್ಟ್ 17 ರ ಸಂಜೆ 4 ಗಂಟೆಗೆ ಸಾಲಿಡಾರಿಟಿ ಸಂಗಮ ಕಾರ್ಯಕ್ರಮ ಆಯೋಜಿಸಲಿದೆಯೆಂದು ಸಂಘಟನೆಯ ಪತ್ರಿಕಾ ಹೇಳಿಕೆಯೊಂದು ತಿಳಿಸಿದೆ.

ಮದನಿಯವರು ಕೊಯಮತ್ತೂರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಸುಮಾರು ಒಂಬತ್ತೂವರೆ ವರ್ಷಗಳ ಕಾಲ ವಿಚಾರಣಾಧೀನ ಕೈದಿಯಾಗಿದ್ದರಿಂದ ಅವರು ವಿಚಾರಣಾಧೀನ ಕೈದಿಯಾಗಿ ಹದಿನೈದುವರೆ ವರ್ಷ ಪೂರೈಸಿದಂತಾಗಿದೆ.

ಈ ಸಾಲಿಡಾರಿಟಿ ಸಂಗಮವನ್ನು ಮದನಿಯವರ ಮಾನವ ಹಕ್ಕುಗಳನ್ನು ಸಂರಕ್ಷಿಸುವ ಸಲುವಾಗಿ ಆಯೋಜಿಸಲಾಗುತ್ತಿದೆಯೆಂದು ಸಂಘಟನೆ ಹೇಳಿಕೊಂಡಿದೆ.ಈ ಸಮಾರಂಭದಲ್ಲಿ ರಾಜಕೀಯ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಹಲವು ಗಣ್ಯರು ಭಾಗವಹಿಸಲಿದ್ದು ಖ್ಯಾತ ಲೇಖಕ ಹಾಗೂ ಮಾನವ ಹಕ್ಕು ಕಾರ್ಯಕರ್ತ ಬಿ.ಆರ್.ಪಿ. ಭಾಸ್ಕರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಕೊಯಮತ್ತೂರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತೂವರೆ ವರ್ಷ ವಿಚಾರಣಾಧೀನ ಕೈದಿಯಾಗಿದ್ದ ಮದನಿಯವರನ್ನು ಮತ್ತೆ 2010ರ ಆಗಸ್ಟ್ 17ರಂದು ಬೆಂಗಳೂರು ಸ್ಫೋಟ ಸಂಬಂಧದ 31ನೆ ಆರೋಪಿಯಾಗಿ ಅಕ್ರಮ ಚಟುವಟಿಕೆ ನಿಯಂತ್ರಣ ಕಾಯ್ದೆಯನ್ವಯ ಬಂಧಿಸಲಾಗಿತ್ತು. ಅವರ ಆರೋಗ್ಯ ಕೈಕೊಟ್ಟಾಗ ಅವರಿಗೆ ಸೂಕ್ತ ಚಿಕಿತ್ಸೆಗೂ ಅವಕಾಶ ನೀಡದೆ ಅವರ ಮಾನವ ಹಕ್ಕುಗಳನ್ನು ಉಲ್ಲಂಘಿಸಲಾಗಿದೆಯೆಂಬ ಆರೋಪವೂ ಕೇಳಿ ಬಂದಿತ್ತು. ಹಲವಾರು ಕಾನೂನು ಹೋರಾಟಗಳ ನಂತರವಷ್ಟೇ ಅವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ಅಕ್ರಮ ಚಟುವಟಿಕೆ ನಿಯಂತ್ರಣ ಕಾಯ್ದೆಯನ್ವಯ ಬಂಧಿತರಾದ ಮದನಿ ಹಾಗೂ ಇನ್ನಿತರರ ಶೀಘ್ರ ಬಿಡುಗಡೆಗೆ ವಿವಿಧ ಕ್ರಮಗಳ ಮೂಲಕ ಸರಕಾರವನ್ನು ಒತ್ತಾಯಿಸುವಂತೆ ಸಾಲಿಡಾರಿಟಿ ಮೂವ್ ಮೆಂಟ್ ವಿವಿಧ ಸಂಘಟನೆಗಳನ್ನು ಒತ್ತಾಯಿಸಿದೆ. ನಾಸರ್ ಮದನಿಯನ್ನು ಬಿಡುಗಡೆಗೊಳಿಸಿ, ಅಕ್ರಮ ಚಟುವಟಿಕೆ ನಿಯಂತ್ರಣ ಕಾಯಿದೆಯನ್ನು ಹಿಂದಕ್ಕೆ ಪಡೆಯಿರಿ’ ಎಂಬ ಸಮಾನ ಅಜೆಂಡಾದೊಂದಿಗೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಂಘಟನೆ ಮನವಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X