Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ: ನಾಡದೋಣಿ ಮುಳುಗಿ ಮೀನುಗಾರ...

ಉಳ್ಳಾಲ: ನಾಡದೋಣಿ ಮುಳುಗಿ ಮೀನುಗಾರ ನೀರುಪಾಲು; ರಕ್ಷಿಸಲು ತೆರಳಿದ ಯುವಕ ಅಸ್ವಸ್ಥಗೊಂಡು ಮೃತ್ಯು

ವಾರ್ತಾಭಾರತಿವಾರ್ತಾಭಾರತಿ6 Aug 2016 2:03 PM IST
share
ಉಳ್ಳಾಲ: ನಾಡದೋಣಿ ಮುಳುಗಿ ಮೀನುಗಾರ ನೀರುಪಾಲು; ರಕ್ಷಿಸಲು ತೆರಳಿದ ಯುವಕ ಅಸ್ವಸ್ಥಗೊಂಡು ಮೃತ್ಯು

ಉಳ್ಳಾಲ, ಆ.6: ಉಳ್ಳಾಲ ಕೋಟೆಪುರ ಅಳಿವೆ ಬಾಗಿಲು ಸಮುದ್ರದಲ್ಲಿ ಮೂವರು ಮೀನುಗಾರಿಕೆಗೆ ತೆರೆಳಿದ್ದ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ದೋಣಿ ಮಗುಚಿ ಬಿದ್ದ ಪರಿಣಾಮ ಓರ್ವ ಮೀನುಗಾರ ನೀರುಪಾಲಾದ ಘಟನೆ ಶನಿವಾರ ನಡೆದಿದೆ. ಇದೇ ಸಂದರ್ಬದಲ್ಲಿ ಸಮುದ್ರಪಾಲಾಗುತ್ತಿದ್ದ ಮೀನುಗಾರರನ್ನು ಕಂಡ ಸ್ಥಳೀಯ ಕೋಟೆಪುರದ ಸಾಹಸಿ ವ್ಯಕ್ತಿಯೊರ್ವರು ಸಮುದ್ರಕ್ಕೆ ಧುಮುಕಿ ಓರ್ವನನ್ನು ರಕ್ಷಿಸಿ ಮತ್ತೆ ಇಬ್ಬರ ರಕ್ಷಣೆಗೆ ಧಾವಿಸಿದಾಗ ಸಮುದ್ರದಲ್ಲಿದ್ದ ಬಂಡೆಕಲ್ಲು ತಲೆಗೆ ಬಡಿದು ದಾರುಣವಾಗಿ ಮೃತಪಟ್ಟಿದ್ದಾರೆ.

ಮೀನುಗಾರನ ರಕ್ಷಣೆಗೆ ತೆರಳಿ ಪ್ರಾಣತೆತ್ತ ಸಾಹಸಿ ವ್ಯಕ್ತಿಯನ್ನು ಕೋಟೆಪುರ ಕೋಡಿಯ ಮಸೀದಿ ಬಳಿಯ ನಿವಾಸಿ ಫಝಲ್ (38) ಎಂದು ಗುರುತಿಸಲಾಗಿದೆ. ತಮಿಳುನಾಡು, ತಿರುವನ ಹಳ್ಳಿ ಮೂಲದ ಮೀನುಗಾರ ಡೆಲ್ಲಿ ಚಂದನ್(40) ಎಂಬವರೇ ನೀರುಪಾಲಾದ ವ್ಯಕ್ತಿ.

ಕೋಟೆಪುರ ಅಳಿವೆ ಬಾಗಿಲಿನ ಸಮುದ್ರದಲ್ಲಿ ಅಣ್ಣು ಕಾಂಚನ್ ಮಾಲಕತ್ವದ ನಾಡದೋಣಿಯಲ್ಲಿ ತಮಿಳುನಾಡು ಮೂಲದ ಮೆಹನಸ್(46), ಕುಮಾರ್(30), ಡೆಲ್ಲಿ ಚಂದನ್(40) ಎಂಬವರು ಮೀನುಗಾರಿಕೆಗೆ ತೆರಳಿ ಮೂರು ದಿವಸಗಳ ನಂತರ ಶನಿವಾರ ಹಿಂದಿರುಗುತ್ತಿದ್ದ ವೇಳೆ ಪ್ರಕ್ಷುಬ್ದಗೊಂಡಿದ್ದ ಸಮುದ್ರದ ಅಲೆಗಳ ಸುಳಿಗೆ ಸಿಲುಕಿ ದೋಣಿ ಮಗುಚಿ ಬಿದ್ದಿದೆ.

ನೀರಿಗೆ ಬಿದ್ದು ಜೀವರಕ್ಷಣೆಗೆ ಮೀನುಗಾರರು ಬೊಬ್ಬಿಡುತ್ತಿದ್ದ ಸಂದರ್ಭದಲ್ಲಿ ದಡದಲ್ಲಿದ್ದ ಸ್ಥಳೀಯ ಈಜುಗಾರ ಫಝಲ್, ರಮೀಝ್ ಮತ್ತು ಸ್ನೇಹಿತರು ಸೇರಿ ಮೂವರು ಮೀನುಗಾರರ ರಕ್ಷಣೆಗೆ ಧಾವಿಸಿದ್ದಾರೆ. ಸ್ನೇಹಿತರು ಹಗ್ಗ ಹಿಡಿದಿದ್ದು ಫಝಲ್ ಸಮುದ್ರಕ್ಕೆ ಧುಮುಕಿ ಮೊದಲಿಗೆ ಮೆಹನಸ್‌ನನ್ನು ಹಗ್ಗದ ಸಹಾಯದಿಂದ ದಡಕ್ಕೆ ಸುರಕ್ಷಿತವಾಗಿ ತಲುಪಿಸಿದ್ದಾರೆ. ಓರ್ವನನ್ನು ರಕ್ಷಿಸಿ ಉಳಿದಿಬ್ಬರನ್ನೂ ರಕ್ಷಿಸಲು ಮುಂದಾದ ಫಝಲ್ ಸಮುದ್ರಕ್ಕೆ ಮತ್ತೆ ಧುಮುಕಿ ಡೆಲ್ಲಿ ಚಂದನ್‌ರನ್ನು ರಕ್ಷಿಸಿಲು ಕೈ ನೀಡಿದ್ದು ನೀರಿನಲ್ಲಿ ಮುಳುಗುತ್ತಿದ್ದ ಚಂದನ್ ಫಝಲ್‌ರನ್ನು ಗಟ್ಟಿಯಾಗಿ ನೀರಿನೊಳಗೆ ಎಳೆದಿದ್ದು, ಫಝಲ್ ಕೈಗಳಿಂದ ಹಗ್ಗದ ಹಿಡಿತವೂ ತಪ್ಪಿ ಹೋಗಿದ್ದಲ್ಲದೆ, ಸಮುದ್ರದೊಳಗಿದ್ದ ಬಂಡೆಕಲ್ಲು ಅವರ ತಲೆಗೆ ಬಲವಾಗಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡರು.

ಚಿಂತಾಜನಕ ಸ್ಥಿತಿಯಲ್ಲಿದ್ದ ಫಝಲ್‌ರನ್ನು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಅಲ್ಲಿಂದ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದ್ದು ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ. ಮೂವರು ಮೀನುಗಾರರಲ್ಲಿ ಕುಮಾರ್ ಎಂಬಾತ ಸಮುದ್ರದಲ್ಲಿ ಈಜಿಕೊಂಡೇ ಪ್ರಾಣ ರಕ್ಷಿಸಿಕೊಂಡಿದ್ದಾರೆ. ಅಸ್ವಸ್ಥಗೊಂಡ ಮೆಹನಸ್ ಮತ್ತು ಕುಮಾರ್ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಮುದ್ರದಲ್ಲಿ ಮುಳುಗಿ ಅಸ್ವಸ್ಥರಾದ ಫಝಲ್‌ರನ್ನು ಆಸ್ಪತ್ರೆಗೆ ದಾಖಲಿಸಲು 108 ಉಚಿತ ಆ್ಯಂಬುಲೆನ್ಸ್‌ಗೆ ಕರೆ ಮಾಡಲಾಗಿತ್ತು. ಆದರೆ ಬಹಳ ಹೊತ್ತಾದರೂ ಬಾರದೆ ಕೊನೆಗೆ ಪೊಲೀಸ್ ವಾಹನದಲ್ಲಿ ತೊಕ್ಕೊಟ್ಟಿನ ಆಸ್ಪತ್ರೆಗೆ ಕರೆತರಲಾಗಿತ್ತು. ತೊಕ್ಕೊಟ್ಟಿನ ಆಸ್ಪತ್ರೆಯಲ್ಲಿ ಸುಮಾರು 20 ನಿಮಿಷಗಳ ಕಾಲ ಸಾವು, ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರೂ ಆ್ಯಂಬುಲೆನ್ಸ್ ವಾಹನ ತಡವರಿಸಿ ಬಂದ ಪರಿಣಾಮ ಸಾವು ಸಂಭವಿಸಿದೆ ಎಂದು ಸಂಬಂಧಿಕರು, ಸ್ನೇಹಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X