Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾನ್ಪುರ ಕಸ್ಟಡಿ ಸಾವು ಪ್ರಕರಣ : ಸಾಯುವ...

ಕಾನ್ಪುರ ಕಸ್ಟಡಿ ಸಾವು ಪ್ರಕರಣ : ಸಾಯುವ ಮೊದಲು ದಲಿತ ಯುವಕನಿಗೆ ಥಳಿಸಲಾಗಿತ್ತು

ಮರಣೋತ್ತರ ಪರೀಕ್ಷಾ ವರದಿ

ವಾರ್ತಾಭಾರತಿವಾರ್ತಾಭಾರತಿ6 Aug 2016 7:57 PM IST
share
ಕಾನ್ಪುರ ಕಸ್ಟಡಿ ಸಾವು ಪ್ರಕರಣ : ಸಾಯುವ ಮೊದಲು ದಲಿತ ಯುವಕನಿಗೆ ಥಳಿಸಲಾಗಿತ್ತು

ಕಾನ್ಪುರ, ಆ.6: ಈ ವಾರಾರಂಭದಲ್ಲಿ ಪೊಲೀಸ್ ಚೌಕಿಯೊಂದರಲ್ಲಿ ಮೃತನಾಗಿ ಪತ್ತೆಯಾಗಿದ್ದ ದಲಿತ ಯುವಕನಿಗೆ ಸಾಯುವ ಮೊದಲು ತೀವ್ರವಾಗಿ ಥಳಿಸಲಾಗಿತ್ತೆಂದು ಮರಣೋತ್ತರ ಪರೀಕ್ಷೆಯ ವರದಿ ತಿಳಿಸಿದೆ.

25ರ ಹರೆಯದ ಕಮಲ್ ವಾಲ್ಮೀಕಿ ಎಂಬ ದಲಿತ ಯುವಕನನ್ನು ದರೋಡೆ ಪ್ರಕರಣವೊಂದರ ವಿಚಾರಣೆಗಾಗಿ ಮಂಗಳವಾರ ರಾತ್ರಿ ಪೊಲೀಸರು ಒಯ್ದಿದ್ದರು. ಆತನಿಗೆ ಬೆನ್ನು ಹಾಗೂ ತಲೆಗೆ ಮಾರಕ ಗಾಯಗಳಾಗಿದ್ದವು. ಲಾಕಪ್‌ನಲ್ಲಿ ಕಮಲ್‌ನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪೊಲೀಸರೇ ಆತನನ್ನು ತೀವ್ರವಾಗಿ ಥಳಿಸಿ, ಬಳಿಕ ನೇಣು ಹಾಕಿದ್ದಾರೆಂದು ಆತನ ಕುಟುಂಬ ಆರೋಪಿಸಿದೆ.

ಕಮಲ್ ಉಸಿರುಗಟ್ಟಿ ಸತ್ತಿದ್ದಾನೆಂದು ಆತನ ಶವಪರೀಕ್ಷೆ ನಡೆಸಿರುವ ವಿಶೇಷಜ್ಞ ವೈದ್ಯರ ತಂಡವೊಂದು ಹೇಳಿದೆ.

ಪೊಲೀಸ್ ಚೌಕಿಯಲ್ಲಿದ್ದ ಎಲ್ಲ 15 ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಅವರಲ್ಲಿ ಕೆಲವರು ಕಾಣೆಯಾಗಿದ್ದಾರೆ. ಒಬ್ಬ ಪೊಲೀಸ್ ಸಿಬ್ಬಂದಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.

ಅಪರಾಧದ ಬಗ್ಗೆ ತಪ್ಪೊಪ್ಪಿಕೊಳ್ಳದಿದ್ದಲ್ಲಿ ಕೊಲ್ಲುವ ಬೆದರಿಕೆಯನ್ನು ಪೊಲೀಸರು ತನ್ನ ಸಹೋದರನಿಗೆ ಹಾಕಿದ್ದರೆಂದು ಕಮಲ್‌ನೊಂದಿಗೆ ಪೊಲೀಸರು ವಶಪಡಿಸಿಕೊಂಡಿದ್ದ ಆತನ ಸಹೋದರ ನಿರ್ಮಲ್ ಎಂಬಾತ ಆರೋಪಿಸಿದ್ದಾನೆ.

ನಿರ್ಮಲ್‌ನನ್ನು ಬಳಿಕ ಪೊಲೀಸರು ಬಿಟ್ಟಿದ್ದರು. ಆದಾಗ್ಯೂ ಮಂಗಳವಾರ ರಾತ್ರಿ ತಮ್ಮಿಬ್ಬರಿಗೂ ಪೊಲೀಸರು ಸರಳುಗಳಿಂದ ಥಳಿಸಿದ್ದರು, ಬೈದಿದ್ದರು ಹಾಗೂ ಅಪಹಾಸ್ಯ ಮಾಡಿದ್ದರು. ತಮ್ಮನ್ನು ಫುಟ್‌ಬಾಲ್‌ಗಳಂತೆ ಒದೆದಿದ್ದರೆಂದು ಆತ ದೂರಿದ್ದಾನೆ.

ಕಸ್ಟಡಿ ಸಾವು ಸಂಪೂರ್ಣ ಅನಂಗೀಕಾರಾರ್ಹವೆಂದು ಉತ್ತರಪ್ರದೇಶದ ಪೊಲೀಸ್ ವರಿಷ್ಠ ಜಾವೇದ್ ಅಹ್ಮದ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X