Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋರಕ್ಷಕರು ಸಮಾಜ ಕಂಟಕರು:ಮೋದಿ

ಗೋರಕ್ಷಕರು ಸಮಾಜ ಕಂಟಕರು:ಮೋದಿ

ಗೋರಕ್ಷಣೆ ಕುರಿತು ಮೊದಲ ಬಾರಿಗೆ ಮೌನ ಮುರಿದ ಪ್ರಧಾನಿ

ವಾರ್ತಾಭಾರತಿವಾರ್ತಾಭಾರತಿ6 Aug 2016 9:22 PM IST
share
ಗೋರಕ್ಷಕರು ಸಮಾಜ ಕಂಟಕರು:ಮೋದಿ

ಮೋದಿ ಹೇಳಿದ್ದು......

ರಾತ್ರಿಯಲ್ಲಿ ಕ್ರಿಮಿನಲ್‌ಗಳು,ಹಗಲಿನಲ್ಲಿ ಗೋರಕ್ಷಕರು
ಗೋರಕ್ಷಣೆ ಎಂದರೆ ಇನ್ನೊಬ್ಬರಿಗೆ ಕಿರುಕುಳ ನೀಡುವುದಲ್ಲ
ಕಸಾಯಿಖಾನೆಗಳಲ್ಲಿಗಿಂತ ಹೆಚ್ಚಿನ ಗೋವುಗಳು ಪ್ಲಾಸ್ಟಿಕ್ ತಿಂದೇ ಸಾಯುತ್ತಿವೆ.

ಹೊಸದಿಲ್ಲಿ,ಆ.6: ತಥಾಕಥಿತ ಗೋರಕ್ಷಕರಿಂದ ದಲಿತರ ವಿರುದ್ಧದ ಹಿಂಸಾಚಾರದ ಕುರಿತು ಪ್ರಧಾನಿ ನರೇಂದ್ರ ಮೋದಿ ಕೊನೆಗೂ ತನ್ನ ವೌನ ಮುರಿದಿದ್ದಾರೆ. ಶನಿವಾರ ಇಲ್ಲಿ ಗೋರಕ್ಷಕರನ್ನು ತೀವ್ರ ತರಾಟೆಗೆತ್ತಿಕೊಂಡ ಮೋದಿ, ಈ ಪೈಕಿ ಹೆಚ್ಚಿನವರು ಗೋರಕ್ಷಣೆಯ ಹೆಸರಿನಲ್ಲಿ ‘ಅಂಗಡಿ ’ಗಳನ್ನು ತೆರೆದು ಕುಳಿತುಕೊಂಡಿರುವ ಸಮಾಜ ವಿರೋಧಿ ಶಕ್ತಿಗಳಾಗಿದ್ದಾರೆ ಮತ್ತು ಇದು ತನ್ನನ್ನು ಸಿಟ್ಟಿಗೆಬ್ಬಿಸಿದೆ ಎಂದು ಹೇಳಿದರು.
 ಈ ಸ್ವಘೋಷಿತ ಗೋರಕ್ಷಕರ ಪೈಕಿ ಶೇ.80ರಷ್ಟು ಜನರು ರಾತ್ರಿಗಳಲ್ಲಿ ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಾ ಹಗಲುಗಳಲ್ಲಿ ಗೋರಕ್ಷಣೆಯ ಸೋಗಿನಲ್ಲಿರುವವರಾಗಿದ್ದಾರೆ. ಆದ್ದರಿಂದ ಇಂತಹ ಗೋರಕ್ಷಕರ ಬಗ್ಗೆ ಮಾಹಿತಿ ವಿವರಗಳ ದಾಖಲೆಗಳನ್ನು ಸಿದ್ಧಪಡಿಸುವಂತೆ ರಾಜ್ಯ ಸರಕಾರಗಳಿಗೆ ಸೂಚಿಸಿದ ಅವರು, ಗೋರಕ್ಷಣೆ ಎಂದರೆ ಇತರರಿಗೆ ಕಿರುಕುಳ ನೀಡುವುದು ಎಂದು ಅರ್ಥವಲ್ಲ ಎಂದು ಒತ್ತಿ ಹೇಳಿದರು. ತನ್ಮೂಲಕ ತಥಾಕಥಿತ ಗೋರಕ್ಷಕರಿಗೆ ಕಠಿಣ ಸಂದೇಶವೊಂದನ್ನು ರವಾನಿಸಿದರು.
 ತನ್ನ ಸರಕಾರದ ‘ಮೈ ಗವ್ ’ವೇದಿಕೆಯ ದ್ವಿತೀಯ ವರ್ಷಾಚರಣೆಯ ಪ್ರಯುಕ್ತ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾರ ‘ಟೌನ್‌ಹಾಲ್’ ಮಾದರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಜೆಗಳೊಂದಿಗೆ ತನ್ನ ಮೊದಲ ನೇರ ಸಂವಾದ ಕಾರ್ಯಕ್ರಮದಲ್ಲಿ ಮೋದಿ ಗೋರಕ್ಷಕರ ವಿರುದ್ಧ ಈ ಕಟುಟೀಕೆಯನ್ನು ಮಾಡಿದರು.
ಉತ್ತರ ಪ್ರದೇಶ,ಗುಜರಾತ್ ಮತ್ತು ಮಧ್ಯಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಗೋರಕ್ಷಕರಿಂದ ದಲಿತರು ಮತ್ತು ಮುಸ್ಲಿಮರ ವಿರುದ್ಧದ ಹಿಂಸಾಚಾರದ ಘಟನೆಗಳ ಕುರಿತು ತನ್ನ ಸರಕಾರ ಮತ್ತು ಬಿಜೆಪಿ ವ್ಯಾಪಕ ಟೀಕೆಗಳಿಗೆ ಗುರಿಯಾಗಿರುವ ಸಂದರ್ಭದಲ್ಲಿ ಪ್ರಧಾನಿಯವರ ಈ ಹೇಳಿಕೆ ಹೊರಬಿದ್ದಿದೆ.
‘‘ಜನರು ಗೋರಕ್ಷಣೆಯ ಹೆಸರಿನಲ್ಲಿ ಅಂಗಡಿಗಳನ್ನು ನಡೆಸುತ್ತಿರುವುದು ನನ್ನಲ್ಲಿ ಸಿಟ್ಟನ್ನು ಮೂಡಿಸಿದೆ. ಅವರಲ್ಲಿ ಹೆಚ್ಚಿನವರು ಗೋರಕ್ಷಣೆಯ ಮುಖವಾಡದ ಹಿಂದೆ ಬಚ್ಚಿಟ್ಟುಕೊಂಡಿರುವ ಸಮಾಜ ವಿರೋಧಿಗಳಾಗಿದ್ದಾರೆ ’’ ಎಂದು ಅವರು ಹೇಳಿದರು.
ಹೆಚ್ಚಿನ ಗೋವುಗಳು ಮಾಂಸಕ್ಕಾಗಿ ಕೊಲ್ಲಲ್ಪಡುವುದಕ್ಕಿಂತ ಪ್ಲಾಸ್ಟಿಕ್ ತ್ಯಾಜ್ಯಗಳನ್ನೇ ತಿಂದು ಸಾಯುತ್ತಿವೆ ಎಂದು ಬೆಟ್ಟು ಮಾಡಿದ ಅವರು, ಗೋವುಗಳನ್ನು ರಕ್ಷಿಸಲು ಬಯಸುವವರು ಅವು ಪ್ಲಾಸ್ಟಿಕ್ ತಿನ್ನುವುದನ್ನು ತಡೆಯಬೇಕು ಮತ್ತು ಇದು ಮಹತ್ವದ ಸೇವೆಯಾಗುತ್ತದೆ ಎಂದರು.
ಗೋಸೇವೆಯಲ್ಲಿ ತನ್ನ ಸ್ವಂತ ಕಾರ್ಯವನ್ನು ನೆನಪಿಸಿಕೊಂಡ ಮೋದಿ, ಜಾನುವಾರುಗಳ ಆರೋಗ್ಯ ತಪಾಸಣೆಗಾಗಿ ತಾನು ಹಮ್ಮಿಕೊಂಡಿದ್ದ ಶಿಬಿರವೊಂದರಲ್ಲಿ ಒಂದು ಗೋವಿನ ಹೊಟ್ಟೆಯಿಂದ ಕನಿಷ್ಠ ಎರಡು ಬಕೆಟ್ ತುಂಬ ಪ್ಲಾಸ್ಟಿಕ್ ಹೊರತೆಗೆಯಲಾಗಿತ್ತು ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X