Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಆಡಳಿತದ ರಾಜಸ್ಥಾನದ ಗೋಶಾಲೆಯಲ್ಲಿ...

ಬಿಜೆಪಿ ಆಡಳಿತದ ರಾಜಸ್ಥಾನದ ಗೋಶಾಲೆಯಲ್ಲಿ ಹಸಿವಿನಿಂದ 500ಕ್ಕೂ ಅಧಿಕ ಗೋವುಗಳ ಸಾವು

ವಾರ್ತಾಭಾರತಿವಾರ್ತಾಭಾರತಿ6 Aug 2016 11:29 PM IST
share

ಜೈಪುರ,ಆ.6: ಬಿಜೆಪಿ ಆಡಳಿತದ ರಾಜಸ್ಥಾನದಲ್ಲಿ ಕಳೆದ ಎರಡು ವಾರಗಳಲ್ಲಿ 500ಕ್ಕೂ ಅಧಿಕ ಗೋವುಗಳು ಹಸಿವಿನಿಂದ ನರಳಿ ಸಾವನ್ನಪ್ಪಿವೆ. ಜೈಪುರ ಸಮೀಪದ ಗೋಶಾಲೆಯಲ್ಲಿ ದನಗಳಿಗಾಗಿ ನಿರ್ಮಿಸಲಾಗಿರುವ ಶೆಡ್‌ಗಳು ಸಂಪೂರ್ಣವಾಗಿ ಅಲಕ್ಷಿಸಪಟ್ಟಿದ್ದು,ಗೋವುಗಳ ಪಾಲಿಗೆ ಮೃತ್ಯುಪಂಜರಗಳಾಗಿ ಪರಿಣಮಿಸಿವೆ. ತಥಾಕಥಿತ ಗೋರಕ್ಷಕರು ಅದೆಲ್ಲಿದ್ದಾರೋ ಗೊತ್ತಿಲ್ಲ....
ಹಿಂಗೋನಿಯಾ ಗೋಶಾಲೆಯ 250ಕ್ಕೂ ಹೆಚ್ಚಿನ ಗುತ್ತಿಗೆ ಕಾರ್ಮಿಕರು ತಮ್ಮ ಬಾಕಿ ವೇತನ ಪಾವತಿಗೆ ಆಗ್ರಹಿಸಿ ಕಳೆದ ತಿಂಗಳಿನಿಂದ ಮುಷ್ಕರದಲ್ಲಿ ತೊಡಗಿದ್ದಾರೆ. ಆಗಿನಿಂದಲೂ ದನಗಳ ಶೆಡ್‌ಗಳನ್ನು ಯಾರೂ ಸ್ವಚ್ಛಗೊಳಿಸಿಯೇ ಇಲ್ಲ. ಅವುಗಳಿಗೆ ಮೇವು ನೀಡುವವರೂ ಇಲ್ಲ. ಹಲವಾರು ಗೋವುಗಳು ಹಸಿವಿನಿಂದ ನರಳಿ ಮಲಗಿದಲ್ಲಿಯೇ ಸಾವನ್ನಪ್ಪಿದ್ದು,ಅವುಗಳ ಕಾಲುಗಳು ಭಾರೀಮಳೆ ಮತ್ತು ಸೆಗಣಿಯಿಂದ ಸೃಷ್ಟಿಗೊಂಡ ಕೊಚ್ಚೆಯಲ್ಲಿ ಸಿಕ್ಕಿಹಾಕಿಕೊಂಡಿವೆ.
  
ಎಷ್ಟು ಗೋವುಗಳು ಸತ್ತಿವೆ ಎಂಬ ಯಾವುದೇ ಅಧಿಕೃತ ಲೆಕ್ಕವಿಲ್ಲ. ಆದರೆ ಶೆಡ್‌ಗಳ ಸ್ವಚ್ಛತಾ ಕಾರ್ಯದಲ್ಲಿ ನೆರವಾಗಲು ಬಂದಿರುವ ಸ್ವಯಂ ಸೇವಕರು ಕಳೆದೆರಡು ದಿನಗಳಲ್ಲಿ 90ಕ್ಕೂ ಅಧಿಕ ಗೋವುಗಳ ಕಳೇಬರಗಳನ್ನು ತಾವು ಹೊರಕ್ಕೆ ತೆಗೆದಿದ್ದು, ಇನ್ನೂ ಹಲವು ಕಳೇಬರಗಳು ಇವೆ ಎಂದಿದ್ದಾರೆ. ಈ ಗೋಶಾಲೆಯಲ್ಲಿ ಸುಮಾರು 8,000 ಗೋವುಗಳಿವೆ. ಹೆಚ್ಚಿನ ಗೋವುಗಳ ಸಾವಿಗೆ ಹಸಿವೆಯೇ ಕಾರಣ ಹೊರತು ಯಾವುದೇ ಕಾಯಿಲೆಯಲ್ಲವೆಂದು ಸರಕಾರಿ ಪಶುವೈದ್ಯ ಡಾ.ದೇವೇಂದ್ರ ಕುಮಾರ ಯಾದವ್ ಅವರು ದೃಢಪಡಿಸಿದ್ದಾರೆ.
ನೌಕರರಿಗೆ ಕಳೆದ ಮೇ ತಿಂಗಳಿನಿಂದಲೂ ವೇತನ ಪಾವತಿಯಾಗದಿರುವುದು ಸಮಸ್ಯೆಗೆ ಮುಖ್ಯ ಕಾರಣವಾಗಿದೆ. ಕಾರ್ಮಿಕರೇ ಇಲ್ಲ, ಹೀಗಿರುವಾಗ ಸಮಸ್ಯೆಯನ್ನು ನಾನು ಪರಿಹರಿಸುವುದು ಹೇಗೆ ಸಾಧ್ಯ ಎಂದು ವಾರ್ಷಿಕ 20 ಕೋ.ರೂ.ಗಳ ಬಜೆಟ್ ಹೊಂದಿರುವ ಈ ಗೋಶಾಲೆಯ ಅಧ್ಯಕ್ಷ ಭಗವಂತ ಸಿಂಗ್ ದೇವಲ್ ಅವರು ತನ್ನನ್ನು ಸಂಪರ್ಕಿಸಿದ ಸುದ್ದಿಗಾರರನ್ನೇ ಪ್ರಶ್ನಿಸಿದ್ದಾರೆ.
 ಜೈಪುರ ಮಹಾನಗರ ಪಾಲಿಕೆ ಮತ್ತು ಗೋಶಾಲೆಗೆ ಗುತ್ತಿಗೆ ಆಧಾರದಲ್ಲಿ ನೌಕರರನ್ನು ಒದಗಿಸಿರುವ ಸಂಸ್ಥೆಯ ನಡುವೆ ಉಂಟಾಗಿರುವ ವಿವಾದ ವೇತನ ತಡೆಗೆ ಕಾರಣವಾಗಿದೆ.
 ಗೋವುಗಳ ಈ ದಯನೀಯ ಸಾವುಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆಯೇ ರಾಜಸ್ಥಾನ ಉಚ್ಚ ನ್ಯಾಯಾಲಯವು ಸರಕಾರದಿಂದ ವರದಿಯೊಂದನ್ನು ಕೇಳಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಸರಕಾರ ಕಾರ್ಯಾಚರಣೆಯನ್ನು ಕೈಗೊಂಡಿದ್ದು,ಭಾರೀ ಯಂತ್ರಗಳನ್ನು ಬಳಸಿ ಗೋಶಾಲೆಯಲ್ಲಿ ತುಂಬಿ ಕೊಂಡಿರುವ ಕೊಚ್ಚೆಯನ್ನು ತೆಗೆಯಲಾಗುತ್ತಿದೆ.

ಮುಖ್ಯಮಂತ್ರಿಯವರು ತೀವ್ರ ಕಳವಳ ಗೊಂಡಿದ್ದಾರೆ. ಉನ್ನತ ಮಟ್ಟದ ಸಭೆಯನ್ನು ಕರೆಯಲಾಗಿದ್ದು, ತನಿಖೆಯನ್ನು ನಡೆಸುವಂತೆ ಮತ್ತು ಸಮಸ್ಯೆಯನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ ಎಂದು ರಾಜ್ಯದ ಸಚಿವ ರಾಜೇಂದರ್ ಸಿಂಗ್ ರಾಠೋಡ್ ತಿಳಿಸಿದರು. ಆಡಳಿತ ಬಿಜೆಪಿ ವಿರುದ್ಧ ದಾಳಿ ನಡೆಸಿದ ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಮೇಶ್ವರಲಾಲ್ ಡೂಡಿ ಅವರು, ಗೋರಕ್ಷಕರೀಗ ಎಲ್ಲಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಸರಕಾರದ ನಿರಾಸಕ್ತಿ ಮತ್ತು ನಿರ್ಲಕ್ಷ ಇದಕ್ಕೆ ಕಾರಣವೆಂದು ಅವರು ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X