ಎಸ್ಡಿಎಂ: ತರಗತಿ ಪ್ರವೇಶ ಉದ್ಘಾಟನೆ
ಬೆಳ್ತಂಗಡಿ, ಆ.8: ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣದ ಗುರಿಯಾಗಿದ್ದು,ಉತ್ತಮ ಗುಣಮಟ್ಟದ ಶಿಕ್ಷಣದಿಂದ ಯುವಜನತೆಯನ್ನು ಸನ್ಮಾರ್ಗದಲ್ಲಿ ಮುನ್ನಡೆಸಬಹುದು ಎಂದು ರಾಂಚಿಯ ರಾಮಕೃಷ್ಣ ಮಠದ ಸ್ವಾಮಿ ಶಶಾಂಕಾನಂದ ಸ್ವಾಮೀಜಿ ಹೇಳಿದರು.
ಉಜಿರೆಯಲ್ಲಿ ಎಸ್ಡಿಎಂ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಪ್ರಥಮ ವರ್ಷದ ತರಗತಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಪುನಶ್ಚೇತನ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.
ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ.ಯಶೋವರ್ಮ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಎಸ್. ಮೋಹನ ನಾರಾಯಣ ಸ್ವಾಗತಿಸಿದರು. ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಡಾ. ಎಂ.ವೈ.ಮಂಜುಳಾ ವಂದಿಸಿದರು. ವಿದ್ಯಾರ್ಥಿಗಳಾದ ವಿದ್ಯಾಶಂಕರಿ, ಮಾನಸಾ ಕಾರ್ಯಕ್ರಮ ನಿರೂಪಿಸಿದರು.
Next Story