ಸ್ವಾತಂತ್ರೋತ್ಸ್ಸವದಲ್ಲಿ ಪಾಲ್ಗೊಳ್ಳಲು ಸೂಚನೆ
ಉಡುಪಿ, ಆ.8: ಬೀಡಿನಗುಡ್ಡೆಯ ಮಹಾತ್ಮಾಗಾಂಧಿ ಬಯಲು ರಂಗ ಮಂದಿರದಲ್ಲಿ 70ನೆ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಸಾರ್ವಜನಿಕರು ಆ.15ರಂದು ಬೆಳಗ್ಗೆ 8:30ಕ್ಕೆ ಬಯಲು ರಂಗಮಂದಿರದಲ್ಲಿ ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಮೆರುಗು ನೀಡಬೇಕೆಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಮನವಿ ಮಾಡಿದ್ದಾರೆ. ಸ್ವಾತಂತ್ರೋತ್ಸವ ಸಂಭ್ರಮದಲ್ಲಿ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಜರಿರಬೇಕೆಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
Next Story