Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಂಪನಕಟ್ಟೆಯಲ್ಲಿ ರಸ್ತೆ ಬ್ಲಾಕ್ ಮಾಡಿದ...

ಹಂಪನಕಟ್ಟೆಯಲ್ಲಿ ರಸ್ತೆ ಬ್ಲಾಕ್ ಮಾಡಿದ ‘ಕಳ್ಳ’

ವಾರ್ತಾಭಾರತಿವಾರ್ತಾಭಾರತಿ9 Aug 2016 9:06 PM IST
share
ಹಂಪನಕಟ್ಟೆಯಲ್ಲಿ ರಸ್ತೆ ಬ್ಲಾಕ್ ಮಾಡಿದ ‘ಕಳ್ಳ’

ಮಂಗಳೂರು, ಆ. 9: ಕುಡಿತದ ಅಮಲಿನಲ್ಲಿದ್ದ ವ್ಯಕ್ತಿಯೋರ್ವ ನಗರದ ಹಂಪನಕಟ್ಟೆ ಬಳಿಯ ಐಡಿಯಲ್ ಐಸ್‌ಕ್ರೀಂ ಪಾರ್ಲರ್ ಕಟ್ಟಡ ಛಾವಣಿ ಏರಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ ಘಟನೆ ಇಂದು ಸಂಜೆ ನಡೆದಿದೆ.

ಈತನ ರಾದ್ಧಾಂತವನ್ನು ವೀಕ್ಷಿಸಲು ಸ್ಥಳದಲ್ಲಿ ಬೃಹತ್ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿದ್ದರಿಂದ ಹಂಪನಕಟ್ಟೆಯನ್ನು ಸೇರುವ ಬಹುತೇಕ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾದ ಘಟನೆಯೂ ನಡೆಯಿತು.

ಕಟ್ಟಡ ಏರಿದ ವ್ಯಕ್ತಿಯನ್ನು ಉತ್ತರ ಪ್ರದೇಶದ ಶಾನವಾಝ್ (30) ಎಂದು ಗುರುತಿಸಲಾಗಿದೆ. ಈತ ಇಂದು ಸಂಜೆ ಸುಮಾರು 7 ಗಂಟೆಯ ಹೊತ್ತಿಗೆ ನಗರದ ಗಣಪತಿ ಹೈಸ್ಕೂಲ್ ರಸ್ತೆಯಲ್ಲಿರುವ ಐಡಿಯಲ್ ಪಾರ್ಲರ್‌ನ ಕಟ್ಟಡದ ಛಾವಣಿ ಏರಿದ್ದ. ಸಾರ್ವಜನಿಕರ ಎದುರಲ್ಲೇ ಛಾವಣಿ ಮೇಲೆ ಅತ್ತಿಂದಿತ್ತ ಸಂಚರಿಸ ತೊಡಗಿದ್ದು, ಕುಡಿತ ಅಮಲಿನಲ್ಲಿದ್ದ ಈತ ಸಾರ್ವಜನಿಕರಲ್ಲಿ ಆತ್ಮಹತ್ಯೆ ಮಾಡುವ ಧಮಕಿ ಹಾಕುತ್ತಿದ್ದ. ಕೊನೆಗೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಬಂದರು ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಆತನನ್ನು ಕೆಳಗಿಳಿಯುವಂತೆ ಕೋರಿಕೊಂಡರೂ ಕೆಳಗೆ ಧುಮುಕುವ ಬೆದರಿಕೆ ಒಡ್ಡುತ್ತಿದ್ದ.

ಈ ಸಂದರ್ಭದಲ್ಲಿ ಅಗ್ನಿಶಾಮಕ ದಳದವರನ್ನು ದೂರವಾಣಿ ಕರೆ ಮಾಡಿ ಸ್ಥಳಕ್ಕೆ ಕರೆಸಲಾಗಿತ್ತು. ಪಾಂಡೇಶ್ವರ ಹಾಗೂ ಕದ್ರಿ ಠಾಣಾ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಶಾನವಾಝ್‌ನನ್ನು ಕೆಳಗಿಳಿಸಲು ಕೋರಿಕೊಂಡರೂ ಕೆಳಗಡೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಧಮಕಿ ಹಾಕುತ್ತಿದ್ದ. ಕೊನೆಗೂ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಹಾಗೂ ಕೆಲವು ಸ್ಥಳೀಯರು ಆತನ ಬಳಿ ತೆರಳಿ ಆತನಿಗೆ ಸಮಜಾಯಿಷಿ ಕೆಳಗಿಳಿಯುವಂತೆ ಮನವಿ ಮಾಡಿದ್ದರೂ ಆತನ ಅವರಲ್ಲಿ ಸಿಗರೇಟ್, ಹಣವನ್ನು ಕೇಳಿದ್ದು, ಈ ಸಂದರ್ಭದಲ್ಲಿ ಕೆಳಗಿಳಿದರೆ ಕೊಡುವುದಾಗಿಯೂ ತಿಳಿಸಲಾಯಿತು.

ಹೀಗೆ ಆತನಲ್ಲಿ ಮಾತನಾಡುತ್ತಲೇ ಕಟ್ಟಡ ಏರಿದ ಸುರತ್ಕಲ್‌ನ ರಿಝ್ವಿನ್, ಅಗ್ನಿ ಶಾಮಕ ದಳದ ರಮೇಶ್, ನವೀನ್ ಮತ್ತಿತರ ಪೈಕಿ ರಿಝ್ವಿನ್ ಆತನ ಕೈಯನ್ನು ಬಲವಾಗಿ ಹಿಡಿದ. ಕೂಡಲೇ ರಮೇಶ್, ನವೀನ್ ಮತ್ತಿತರರೂ ಆತನನ್ನು ಹಿಡಿದಿದ್ದು, ಅನಂತರ ಅಗ್ನಿಶಾಮಕ ದಳದ ಇತರ ಸಿಬ್ಬಂದಿ ಹಾಗೂ ಸ್ಥಳೀಯರು ಆತನನ್ನು ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂಜೆ 7 ಗಂಟೆಗೆ ಕಟ್ಟಡದ ಮೇಲೇರಿ ಈತ ಸೃಷ್ಟಿಸಿದ ರಾದ್ಧಾಂತ, ಆತಂಕಗಳು ರಾತ್ರಿ 9:20ಕ್ಕೆ ಕೆಳಗಿಳಿಸುವುದರೊಂದಿಗೆ ಮುಕ್ತಾಯ ಕಂಡಿತು.

ಟ್ರಾಫಿಕ್ ಜಾಮ್

ಈತನ ರಾದ್ಧಾಂತವನ್ನು ಸಾರ್ವಜನಿಕರು ಬೃಹತ್ ಸಂಖ್ಯೆಯಲ್ಲಿ ಸೇರಿ ವೀಕ್ಷಿಸುತ್ತಿದ್ದುದರಿಂದ ನಗರದಲ್ಲಿ ಸಂಚಾರ ದಟ್ಟಣೆ ತೀವ್ರಗೊಂಡಿತು. ಗಣಪತಿ ಹೈಸ್ಕೂಲ್ ಹೋಗುವ ರಸ್ತೆ, ಹಂಪನಕಟ್ಟೆ ಸೇರುವ ರಸ್ತೆ, ಸೆಂಟ್ರಲ್ ಮಾರುಕಟ್ಟೆ ರಸ್ತೆಗಳಲ್ಲಿ ವಾಹನ ದಟ್ಟಣೆಯಿಂದಾಗಿ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸ್ಟೇಟ್ ಬ್ಯಾಂಕ್‌ನಿಂದ ಹೊರಡಿದ ಸರ್ವಿಸ್ ಮತ್ತು ಸಿಟಿ ಬಸ್ಸುಗಳು, ಖಾಸಗಿ ವಾಹನಗಳು ಮತ್ತು ಪ್ರಯಾಣಿಕರು ವಾಹನ ದಟ್ಟಣೆಯಿಂದಾಗಿ ಪರದಾಡಬೇಕಾಯಿತು. ಸುಮಾರು 2 ಗಂಟೆ ಕಾಲ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X