Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: ಶಾಲಾ ಮಕ್ಕಳ ಹಿತದೃಷ್ಟಿಯಿಂದ...

ಪುತ್ತೂರು: ಶಾಲಾ ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳಲ್ಲಿ ಕ್ಯಾಬ್ ಸಮಿತಿ ರಚನೆ

ವಾರ್ತಾಭಾರತಿವಾರ್ತಾಭಾರತಿ9 Aug 2016 11:29 PM IST
share

ಪುತ್ತೂರು, ಆ.9: ಕುಂದಾಪುರ ತಾಲೂಕಿನ ತ್ರಾಸಿಯಲ್ಲಿ ನಡೆದ ಸ್ಕೂಲ್ ಬಸ್ ಅಪಘಾತ ಪ್ರಕರಣದ ಬಳಿಕ ಜಿಲ್ಲಾಡಳಿತದ ಸೂಚನೆಯಂತೆ ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ತಾಲೂಕು ಮಟ್ಟದಲ್ಲಿ ನಾನಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇದೀಗ ಶಾಲೆಗಳಲ್ಲಿ ಕ್ಯಾಬ್ ಕಮಿಟಿ ರಚನೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

ಪ್ರತೀ ಶಾಲೆಗಳಲ್ಲಿ ಈಗಾಗಲೇ ಇರುವ ಮಕ್ಕಳ ಸುರಕ್ಷಾ ಸಮಿತಿಯು ಸಭೆ ಸೇರಿ ಸ್ಕೂಲ್ ಬಸ್‌ಗಳಲ್ಲಿ ಬರುವ ಮಕ್ಕಳ ಬಗ್ಗೆ ತೆಗೆದುಕೊಳ್ಳಬೇಕಾದ ಎಚ್ಚರಿಕೆ ಕ್ರಮಗಳನ್ನು ಪರಿಶೀಲಿಸಿದ್ದು, ಮುಂದಿನ ಹಂತದಲ್ಲಿ ಕ್ಯಾಬ್ ಕಮಿಟಿ ರಚನೆ ಪ್ರಕ್ರಿಯೆ ಆರಂಗೊಂಡಿದೆ. ತಾಲೂಕಿನ ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಮಂಗಳವಾರ ನಡದ ಪೋಷಕರ ಸಭೆಯಲ್ಲಿ ಕ್ಯಾಬ್ ಕಮಿಟಿ ರಚನೆಗೆ ಚಾಲನೆ ನೀಡಲಾಯಿತು.

ಸ್ಕೂಲ್ ಬಸ್‌ಗಳಲ್ಲಿ ಬರುವ ಮಕ್ಕಳ ಪೋಷಕರು ಈ ಸಭೆಯಲ್ಲಿ ಭಾಗವಹಿಸಿದ್ದರು. ಶಾಲೆಯ ಸಂಚಾಲಕ ಭಾಸ್ಕರ ಆಚಾರ್ ಹಿಂದಾರ್ ಮಾತನಾಡಿ, ತ್ರಾಸಿ ಘಟನೆಯ ಬಳಿಕ ಸರಕಾರ ಕಾನೂನು ಬಿಗಿಗೊಳಿಸಿದೆ. ಸ್ಕೂಲ್ ಬಸ್‌ಗಳಲ್ಲಿ ಬರುವ ಮಕ್ಕಳ ಸಮಗ್ರ ವಿವರ, ಅದರ ಜತೆಗೆ ಸರಕಾರಿ ಬಸ್‌ಗಳು, ಆಟೊ ರಿಕ್ಷಾಗಳು ಮತ್ತಿತರ ಖಾಸಗಿ ವಾಹನಗಳಲ್ಲಿ ಬರುವ ಮಕ್ಕಳು ಹಾಗೂ ಪೋಷಕರೇ ಬಂದು ಬಿಟ್ಟು ಹೋಗುವ ಮಕ್ಕಳ ವಿವರವನ್ನೂ ಕೇಳಿದೆ. ಇದೆಲ್ಲವನ್ನೂ ಒದಗಿಸಲಾಗುತ್ತಿದೆ. ಇದೀಗ ಸರಕಾರದ ಸೂಚನೆಯಂತೆ ಸ್ಕೂಲ್ ಬಸ್‌ಗಳಲ್ಲಿ ಬರುವ ಮಕ್ಕಳ ಪೋಷಕರಲ್ಲೇ ಸಮಿತಿ ರಚಿಸಬೇಕಾಗಿದೆ ಎಂದರು.

ಅದರಂತೆ ಪ್ರತೀ ಸ್ಕೂಲ್ ಬಸ್‌ಗಳ ಪೋಷಕರಿಂದ ತಲಾ ಮೂವರಂತೆ ಸದಸ್ಯರನ್ನು ಆರಿಸಲಾಯಿತು. ಶಾಲೆಯಲ್ಲಿ ಒಟ್ಟು 9 ಸ್ಕೂಲ್ ಬಸ್‌ಗಳಿದ್ದು, 27 ಸದಸ್ಯರ ಸಮಿತಿ ರಚಿಸಲಾಗುತ್ತದೆ. ಈ ಸಮಿತಿಯು ತಿಂಗಳಿಗೊಮ್ಮೆ ಸಭೆ ಸೇರಿ ಸ್ಕೂಲ್ ಬಸ್‌ಗಳ ನಿರ್ವಹಣೆ ಮತ್ತು ಮಕ್ಕಳ ಸುರಕ್ಷತೆ ವಿಚಾರದಲ್ಲಿ ಚರ್ಚೆ ನಡೆಸಲಿದೆ. ನಿಯಮಗಳ ಪಾಲನೆಯನ್ನು ಪರಾಮರ್ಶೆ ನಡೆಸಲಿದೆ ಎಂದರು.

ನಮ್ಮ ಸಂಸ್ಥೆಯ ಸ್ಕೂಲ್ ಬಸ್‌ಗಳಲ್ಲಿ ಎಲ್ಲ ನಿಯಮ ಪಾಲಿಸಲಾಗುತ್ತಿದೆ. ಪ್ರಸ್ತುತ ಜಿಪಿಎಸ್ ಕೂಡ ಅಳವಡಿಸಲಾಗುತ್ತಿದೆ. ಶಾಲೆಯಿಂದ ಸ್ಕೂಲ್ ಬಸ್‌ಗಳು ಬಿಟ್ಟ ಕೂಡಲೇ ಹೆತ್ತವರಿಗೆ ಮೆಸೇಜ್ ಹೋಗುವ ವ್ಯವಸ್ಥೆಯನ್ನೂ ಮಾಡಲಾಗುತ್ತದೆ ಎಂದವರು ನುಡಿದರು.

ಶಾಲೆಯ ಮುಖ್ಯ ಶಿಕ್ಷಕಿ ಜಯಮಾಲಾ ಮತ್ತು ಶಿಕ್ಷಕಿ ಗೀತಾ ಎಚ್.ಎಸ್. ಪೂರಕ ಮಾಹಿತಿ ನೀಡಿದರು. ಮಕ್ಕಳನ್ನು ಬೆಳಗ್ಗೆ ಸ್ಕೂಲ್ ಬಸ್‌ಗೆ ಹತ್ತಿಸುವ ಸಂದರ್ಭ ಮತ್ತು ಸಂಜೆ ಇಳಿಸುವ ಸಂದರ್ಭ ಪೋಷಕರು ಸ್ಥಳದಲ್ಲಿ ಇದ್ದು ಸಹಕರಿಸಬೇಕು ಎಂದು ಮುಖ್ಯ ಶಿಕ್ಷಕರು ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X