Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚೆನ್ನೈ ರೈಲು ದರೋಡೆ, ಹೋದದ್ದು 6ಕೋಟಿ...

ಚೆನ್ನೈ ರೈಲು ದರೋಡೆ, ಹೋದದ್ದು 6ಕೋಟಿ ರೂ. ಇಬ್ಬರು ಪೋರ್ಟರ್‌ಗಳು ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ10 Aug 2016 4:04 PM IST
share
ಚೆನ್ನೈ ರೈಲು ದರೋಡೆ, ಹೋದದ್ದು 6ಕೋಟಿ ರೂ. ಇಬ್ಬರು ಪೋರ್ಟರ್‌ಗಳು ವಶಕ್ಕೆ

ಸೇಲಂ,ಆ.10: ಸೇಲಂನಿಂದ ಚೆನ್ನೈ ರಿಸರ್ವ್ ಬ್ಯಾಂಕ್ ರೀಜನಲ್ ಕಚೇರಿಗೆ ರೈಲಿನ ಮೂಲಕ ತರಲಾಗುತ್ತಿದ್ದ ಹಳೆ ನೋಟುಗಳು ದರೋಡೆಯಾದ ಘಟನೆಗೆ ಸಂಬಂಧಿಸಿ ಇಬ್ಬರು ಪೋರ್ಟರ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಇವರಿಬ್ಬರೂ ಸೇಲಂ ನಿಲ್ದಾಣದ ಪೋರ್ಟರ್‌ಗಳಾಗಿದ್ದಾರೆ. ಇವರ ನೇತೃತ್ವದಲ್ಲಿ ಹಣ ಇರಿಸಲಾಗಿದ್ದ ಪೆಟ್ಟಿಗೆಯನ್ನು ರೈಲಿನ ಬೋಗಿಯಲ್ಲಿರಿಸಲಾಗಿತ್ತು ಎನ್ನಲಾಗಿದೆ.

ಇವರನ್ನು ಪೊಲೀಸರು ಪ್ರಶ್ನಿಸುತ್ತಿದ್ದು ಇದೇ ವೇಳೆ ದರೋಡೆಯ ಹಿಂದೆ ದೊಡ್ಡ ತಂಡವೊಂದು ಕಾರ್ಯಾಚರಿಸಿರುವ ಕುರಿತು ಸೂಚನೆ ಲಭಿಸಿದ್ದು, ನಾಲ್ವರ ಬೆರಳಚ್ಚು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.

   ರೈಲಿನ ಬೋಗಿಯ ಮೇಲ್ಭಾಗದಲ್ಲಿ ಕನ್ನ ಕೊರೆದು ಹಣವನ್ನು ದೋಚಲಾಗಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ರೈಲು ಚೆನ್ನೈಯ ಎಗ್ಮೋರ್ ರೈಲು ನಿಲ್ದಾಣಕ್ಕೆ ತಲುಪಿದಾಗ ಪೆಟ್ಟಿಗೆಯಿಂದ ಹಣ ಕಾಣೆಯಾಗಿರುವುದು ಪತ್ತೆಯಾಗಿತ್ತು. ವಿಶೇಷಬೋಗಿಯಲ್ಲಿ 228 ಪೆಟ್ಟಿಗೆಗಳಲ್ಲಿ ಹಣವನ್ನು ತುಂಬಿಸಿಡಲಾಗಿತ್ತು ಎನ್ನಲಾಗಿದೆ. ಈ ಪೆಟ್ಟಿಗೆಗಳಲ್ಲಿ ನಾಲ್ಕು ಪೆಟ್ಟಿಗೆಗಳನ್ನು ತೆರೆದು 5.78 ಕೋಟಿ ರೂಪಾಯಿಯನ್ನು ಕಳ್ಳರು ಎಗರಿಸಿದ್ದಾರೆ. ಬೋಗಿಯ ಮೇಲ್ಭಾಗದಲ್ಲಿ ಎರಡು ಅಡಿ ಉದ್ದ ಮತ್ತು ಅಗಲದಲ್ಲಿ ತೂತು ಮಾಡಿ ಕಳ್ಳರು ಬೋಗಿಯ ಒಳಕ್ಕೆ ನುಗ್ಗಿದ್ದರು. ಐವತ್ತುಕೋಟಿ ರೂಪಾಯಿ ದರೋಡೆಯಾಗಿದೆ ಎಂದು ಮೊದಲು ತನಿಖೆ ನಡೆಸಿದ ಪೊಲೀಸರು ಅಂದಾಜಿಸಿದ್ದರು. ಆದರೆ ನಂತರ ದರೋಡೆಯಾದ ಹಣದ ಸರಿಯಾದ ಲೆಕ್ಕವನ್ನು ಹಣ ನಷ್ಟವಾಗಿರುವ ಬ್ಯಾಂಕ್‌ಗಳೇ ಬಹಿರಂಗಗೊಳಿಸಿವೆ. ಕೆಟ್ಟು ಹೋದ ನೋಟುಗಳಿವು. ಇದನ್ನು ನಾಶಪಡಿಸಲಿಕ್ಕಾಗಿ ಕೊಂಡೊಯ್ಯಲಾಗುತ್ತಿತ್ತು. ಆದರೆ ಬ್ಯಾಂಕ್‌ಗಳಿಗೆ ಕೊಟ್ಟು ಇದನ್ನು ಎಕ್ಸ್‌ಚೇಂಜ್ ಮಾಡಿಸಿಕೊಳ್ಳಲು ಸಾಧ್ಯವಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X