ಕಾಂಗ್ರೆಸ್ ಸಂಸದನ ಕಾರು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು ಸವಾರ ಮೃತ್ಯು
ಅಳಪ್ಪುಝಾ(ಕೇರಳ),ಆ.10: ಇಲ್ಲಿಗೆ ಸಮೀಪದ ಪುತ್ತಿಯಾಕಾವು ಎಂಬಲ್ಲಿ ಕೊಚ್ಚಿ-ಅಲಪ್ಪುಝಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಕಾಂಗ್ರೆಸ್ ಸಂಸದ ಜ್ಯೋತಿರಾದಿತ್ಯ ಸಿಂದಿಯಾ ಅವರು ಪ್ರಯಾಣಿಸುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದಾನೆ.
ದಿಲ್ಲಿಯಿಂದ ಕೊಚ್ಚಿಗೆ ಆಗಮಿಸಿದ್ದ ಸಿಂದಿಯಾ ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲು ಚೆರ್ತಲಕ್ಕೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು,ಕಾರನ್ನು ಚಾಲಕ ಚಲಾಯಿಸುತ್ತಿದ್ದ.
ಅಪಘಾತದಲ್ಲಿ ಸ್ಥಳೀಯ ನಿವಾಸಿಯಾಗಿದ್ದ ಸವಾರ ಶಶಿ(65) ತೀವ್ರವಾಗಿ ಗಾಯಗೊಂಡಿದ್ದು,ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
Next Story