Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆರೋಪಿಗಳ ಪರ ವಕಾಲತ್ತು: ವಕೀಲರಿಂದ...

ಆರೋಪಿಗಳ ಪರ ವಕಾಲತ್ತು: ವಕೀಲರಿಂದ ಅಸ್ಪಷ್ಟ ಹೇಳಿಕೆ

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ10 Aug 2016 10:02 PM IST
share
ಆರೋಪಿಗಳ ಪರ ವಕಾಲತ್ತು: ವಕೀಲರಿಂದ ಅಸ್ಪಷ್ಟ ಹೇಳಿಕೆ

ಉಡುಪಿ, ಆ.10: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಗಳಾದ ಪತ್ನಿ ಹಾಗೂ ಮಗನ ಪರವಾಗಿ ವಕಲಾತ್ತು ವಹಿಸುವ ಬಗ್ಗೆ ಪ್ರತಿಕ್ರಿಯಿಸಿರುವ ಉಡುಪಿಯ ನ್ಯಾಯವಾದಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಈ ಪ್ರಕರಣದಲ್ಲಿ ಈವರೆಗೆ ನನ್ನನ್ನು ಯಾರು ಕೂಡ ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ.

ಇಂದು ಬಿಜೆಪಿ ಕಚೇರಿಯಲ್ಲಿ ಪಕ್ಷದ ವಿಚಾರವಾಗಿ ಕರೆಯಲಾದ ಸುದ್ದಿ ಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದರು. ಆರಂಭ ದಲ್ಲಿ ಈ ವಿಚಾರದಲ್ಲಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು ನಂತರವೂ ಸ್ಪಷ್ಟವಾದ ಉತ್ತರ ನೀಡದೆ ಗೊಂದಲ ಸೃಷ್ಠಿಸಿದರು.

ಆರೋಪಿಗಳ ಪರ ನ್ಯಾಯಾಲಯದಲ್ಲಿ ವಾದಿಸುವ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆಯುತ್ತಿರುವ ಕುರಿತ ಪತ್ರಕರ್ತರ ಪ್ರಶ್ನೆಗೆ, ಇದಕ್ಕೆ ನಾವು ಸಾಮಾಜಿಕ ಜಾಲತಾಣದಲ್ಲೇ ಅದಕ್ಕೆ ತಕ್ಕ ಉತ್ತರ ನೀಡಿದ್ದೇವೆ. ಇನ್ನು ಇಲ್ಲಿ ಏನು ಹೇಳುವ ವಿಚಾರ ಇಲ್ಲ ಎಂದು ತಿಳಿಸಿದರು.
ಮತ್ತೆ ಪ್ರಶ್ನೆ ಮುಂದುವರೆಸಿದ ಪತ್ರಕರ್ತರು, ತಾವು ಈ ಪ್ರಕರಣದಲ್ಲಿ ಆರೋಪಿಗಳ ಪರ ವಾದ ಮಾಡುತ್ತಿರೋ ಇಲ್ಲವೋ ಎಂಬುದಕ್ಕೆ, ಭಾಸ್ಕರ್ ಶೆಟ್ಟಿ ಕುಟುಂಬದವರು ಹಲವು ವರ್ಷಗಳಿಂದ ನನ್ನ ಕಕ್ಷಿದಾರರಾಗಿದ್ದಾರೆ. ಆದರೆ ಈ ಪ್ರಕರಣದಲ್ಲಿ ನನ್ನನು ಯಾರು ಕೂಡ ಸಂಪರ್ಕಿಸಿಲ್ಲ. ಮುಂದೆ ಪತ್ನಿ ಹಾಗೂ ಮಗನ ಜಾಮೀನಿಗೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವಾಗ ಯಾರು ಅವರ ಪರ ವಕೀಲರು ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ ಎಂದರು.

ವಕೀಲರಿಗೆ ವೃತ್ತಿ ಧರ್ಮ ಎಂಬುದು ಇದೆ. ನಾವು ಆರೋಪಿಗಳನ್ನು ಬೆಂಬಲಿಸುವುದಲ್ಲ, ಅಮಾಯಕರಿಗೆ ನ್ಯಾಯ ಒದಗಿಸುವುದು ನಮ್ಮ ಕರ್ತವ್ಯ ವಾಗಿದೆ. ನಮಗೆ ಧರ್ಮ, ಜಾತಿ, ಲಿಂಗ ಬೇಧವಿಲ್ಲ. ಸ್ವಜಾತಿ ಎಂಬ ಕಾರಣಕ್ಕೆ ನಾವು ವಾದ ಮಾಡಲ್ಲ ಎಂದು ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಪತ್ರಕರ್ತ ರೊಂದಿಗೆ ಮಾತನಾಡುತ್ತ ಹೇಳಿದರು.

ಕೊಲೆಗೆ 4 ದಿನ ಮುಂಚೆ ಬಂದಿದ್ದರು!

ಭಾಸ್ಕರ್ ಶೆಟ್ಟಿ ಕೊಲೆಯಾದ ಜು.28ಕ್ಕೆ ನಾಲ್ಕು ದಿನಗಳ ಮುಂಚೆ ಎರಡು ಬಾರಿ ನನ್ನನ್ನು ಭೇಟಿಯಾಗಲು ಪ್ರಯತ್ನಿಸಿದ್ದರು. ಆದರೆ ನಾನು ಬ್ಯುಸಿಯಾಗಿ ದ್ದ ಕಾರಣ ಅವರಿಗೆ ಸಿಗಲು ಆಗಿಲ್ಲ ಎಂದು ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದರು.

ಮೊದಲ ಬಾರಿಗೆ ನನ್ನನ್ನು ಸಂಪರ್ಕಿಸಲು ಬಂದಾಗ ನಾನು ಮುಂಬೈಯ ಕಕ್ಷಿದಾರರೊಂದಿಗೆ ಹಾಗೂ ಎರಡನೆ ಬಾರಿ ಬಂದಾಗ ಪಕ್ಷದ ಕಾರ್ಯಕರ್ತ ರೊಂದಿಗೆ ಸಭೆ ನಡೆಸಿಕೊಂಡಿದ್ದೆ. ಅದರ ನಂತರ ಅವರು ನನ್ನ ಸಂಪರ್ಕಕ್ಕೆ ಸಿಕ್ಕಿಲ್ಲ. ಮುಂದೆ ಅವರು ಬೇರೆ ವಕೀಲರನ್ನು ಸಂಪರ್ಕಿಸಿರಬಹುದು ಎಂದು ಅವರು ಹೇಳಿದರು.

ಪತ್ನಿಗೆ ವಿಚ್ಛೇದನ ಹಾಗೂ ತನ್ನ ಆಸ್ತಿಯನ್ನು ತಾಯಿ ಹಾಗೂ ಅವರ ಕುಟುಂಬಸ್ಥರ ಹೆಸರಿಗೆ ವಿಲ್ ಮಾಡುವ ವಿಚಾರದ ಕುರಿತು ಮಾತುಕತೆ ಮಾಡಲು ಭಾಸ್ಕರ್ ಶೆಟ್ಟಿ, ವಕೀಲ ಮಟ್ಟಾರು ರತ್ನಾಕರ್ ಹೆಗ್ಡೆಯವರನ್ನು ಹುಡುಕಿಕೊಂಡಿ ಬಂದಿರಬಹುದು ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X