Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದ್ಯಾರ್ಥಿಗಳುಇಚ್ಛಾಶಕ್ತಿ, ...

ವಿದ್ಯಾರ್ಥಿಗಳುಇಚ್ಛಾಶಕ್ತಿ, ಕ್ರಿಯಾಶಕ್ತಿಯನ್ನು ಗಳಿಸಿಕೊಳ್ಳಬೇಕಾಗಿದೆ : ಪ್ರೊ.ಸಿ.ಎಂ.ತ್ಯಾಗರಾಜ್

ಎನ್ನೆಸ್ಸೆಸ್ ಚಟುವಟಿಕೆಗಳ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ10 Aug 2016 10:04 PM IST
share

ತರೀಕೆರೆ, ಆ.10: ಅಂಕಪಟ್ಟಿಗಳು ಲಾಟರಿ ಟಿಕೆಟ್‌ಗಳಲ್ಲ. ನಿಮ್ಮ ಶ್ರಮದ ಪ್ರಾಮಾಣಿಕತೆಯ ಪ್ರಮಾಣಪತ್ರ, ನಕಲು ಮಾಡಿ ಹೆಚ್ಚು ಅಂಕಗಳಿಸಿ ಅಂಕಪಟ್ಟಿ ತೆಗೆದುಕೊಂಡ ವಿದ್ಯಾರ್ಥಿಗಳಿಗೆ ಜ್ಞ್ಞಾನಾರ್ಜನೆ ಇರುವುದಿಲ್ಲ. ಓದಲು ಬರುವುದಿಲ್ಲ, ಬರೆಯಲೂ ಬರುವುದಿಲ್ಲ ಇದರಿಂದ ಪ್ರಯೋಜನ ಇರುವುದಿಲ್ಲ ಎಂದು ಕುವೆಂಪು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಸಿ.ಎಂ.ತ್ಯಾಗರಾಜ್ ಹೇಳಿದ್ದಾರೆ. ಪಟ್ಟಣದ ಎಸ್‌ಜೆಎಂ ಕಾಲೇಜಿನಲ್ಲಿ ಕ್ರೀಡಾ ಸಾಂಸ್ಕೃತಿಕ ಯೂತ್ ರೆಡ್‌ಕ್ರಾಸ್ ಹಾಗೂ ಎನ್ನೆಸ್ಸೆಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಇಚ್ಛಾಶಕ್ತಿ ಮತ್ತು ಕ್ರಿಯಾಶಕ್ತಿಯನ್ನು ಗಳಿಸಿಕೊಳ್ಳಬೇಕಾಗಿದೆ. ವಿದ್ಯಾರ್ಥಿಗಳು ಕೇವಲ 35 ಅಂಕ ತಲುಪುವುದು ಗುರಿಯಲ್ಲ 100ಕ್ಕೆ 100ಪ್ರಯತ್ನ ಮಾಡಬೇಕು ವಿದ್ಯಾರ್ಥಿ ಜೀವನದಲ್ಲಿ ಮೂಲತವಾಗಿ ಭಾಷಾ ಕೌಶಲ್ಯತೆ, ತಂತ್ರಜ್ಞಾನ ಕೌಶಲ್ಯತೆ, ಸ್ಪರ್ಧಾತ್ಮಕ ಸಾಮರ್ಥ್ಯತೆ, ನಿರಂತರ ಪ್ರಯತ್ನ ಮತ್ತು ನಾಯಕತ್ವ ಗುಣಗಳನ್ನು ರೂಢಿಸಿಕೊಂಡಲ್ಲಿ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸನ್ನು ಗಳಿಸಬಹುದು. ವಿದ್ಯಾರ್ಥಿಗಳ ಗುರಿ ಕೇವಲ ಗುಮಾಸ್ತಗಿರಿಗಲ್ಲದೆ ಐಎಎಸ್, ಕೆಎಎಸ್, ಮತ್ತು ಬ್ಯಾಂಕ್ ಎಕ್ಸಾಮ್ ಗಳನ್ನು ತೆಗೆದುಕೊಳ್ಳುವ ಪ್ರಯತ್ನ ಮಾಡಬೇಕು ಎಂದರು.

ಇದೇ ಸಂದರ್ಭದಲ್ಲಿ ದಕ್ಷಿಣ ಏಷ್ಯನ್ ಪಂದ್ಯಾವಳಿ 2016ರಲ್ಲಿ ಸ್ವರ್ಣ ಪದಕ ವಿಜೇತ ಭದ್ರಾವತಿಯ ಮುನೀರ್ ಬಾಷಾ ಇವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಅಥವಾ ಜೀವನದಲ್ಲಿ ಆಗುವ ಸೋಲು ಸೋಲಲ್ಲ. ಆದರೆ ಗುರಿಮುಟ್ಟಲು ಪ್ರಯತ್ನಿಸದಿರುವುದೇ ಸೋಲು ಎಂದು ನುಡಿದರು.

 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಡಾ. ಜಿ.ಇ.ವಿಜಯಕುಮಾರ್, ಇಂದು ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಕಾರ್ಯಕ್ರಮ ಯಶಸ್ವಿಯಾಗಿ ಉದ್ಘಾಟನೆಯಾಗಿದೆ. ಪಠ್ಯದ ಜೊತೆಗೆ ಪಠ್ಯೇತ್ತರ ಚಟುವಟಿಕೆಗಳ ಮೂಲಕ ಮನಸ್ಸು ಮತ್ತು ದೇಹವನ್ನು ಆರೋಗ್ಯದಿಂದ, ಉಲ್ಲಾಸಭರಿತವಾಗಿ ಇಟ್ಟುಕೊಳ್ಳಲು ಸಾಧ್ಯವಾಗುತ್ತದೆ. ಮುಂದಿನ ದಿನಗಳಲ್ಲಿ ರಕ್ತದಾನ ಶಿಬಿರ, ಸ್ವಚ್ಛತಾ ಕಾರ್ಯಕ್ರಮಗಳು, ಕ್ರೀಡಾಚಟುವಟಿಕೆಗಳು, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಇತರ ಅರ್ಥಪೂರ್ಣ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ವರ್ಷಪೂರ್ತಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಲು ವಿದ್ಯಾರ್ಥಿಗಳು ಶಿಸ್ತಿನಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಲು ಸೂಚಿಸಿದರು.

ಕುಮಾರಿ ಸಿಂಧು.ಎಚ್.ವೈ. ಮತ್ತು ಸಂಗಡಿಗರು ನಾಡಗೀತೆ ಹಾಡಿದರು, ಕುಮಾರಿ ಮುಬೀನ ತಾಜ್ ಧರ್ಮಗ್ರಂಥಗಳ ಚುಟುಕುಗಳನ್ನು ಪಠಣ ಮಾಡಿದರು, ಪ್ರದೀಪ್.ಪಿ.ಒ ಮತ್ತು ಸಂಗಡಿಗರು ಎನ್ನೆಸ್ಸೆಸ್‌ಗೀತೆಯನ್ನು ಹಾಡಿದರು, ಶೈಲಜಾ ಮತ್ತು ಶಾಂತಕುಮಾರ್ ಜಾನಪದಗೀತೆ ಮತ್ತು ಭಾವಗೀತೆಹಾಡಿದರು, ಕುಮಾರಿ ಆಶಾರಾಣಿ ಸ್ವಾಗತಿಸಿ ನಾಗರಾಜ್.ಪಿ.ಆರ್. ವಂದಿಸಿದರು ಹಾಗೂ ನಿರ್ಮಲಾ.ಆರ್ ಮತ್ತು ಚೇತನ್.ಎಚ್.ಪಿ ಕಾರ್ಯಕ್ರಮ ನಿರೂಪಿಸಿದರು.

 ಎನ್ನೆಸ್ಸೆಸ್ ಅಧಿಕಾರಿಗಳಾದ ಪ್ರೊ.ಬಿ.ಆರ್.ಡಮ್ಮಳ್ಳಿ, ಪ್ರೊ.ಎಂ.ಆರ್ ಚಿದಾನಂದಪ್ಪ, ಸಾಂಸ್ಕೃತಿಕ ಸಮಿತಿ ಸಂಚಾಲಕ ಪ್ರೊ.ಕೆ.ಆರ್.ವೀರೇಶ್ ಮತ್ತು ಕ್ರೀಡಾಸಮಿತಿ ಸಂಚಾಲಕಎ.ಸದಾಶಿವನಾಯ್ಕೊ ಉಪಸ್ಥಿತರಿದ್ದರು, ಕಾರ್ಯಕ್ರಮ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X