Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಅಕ್ರಮಕ್ಕೆ ಸಹಕರಿಸಿದ ಅಧಿಕಾರಿಗಳನ್ನು...

ಅಕ್ರಮಕ್ಕೆ ಸಹಕರಿಸಿದ ಅಧಿಕಾರಿಗಳನ್ನು ಶಿಕ್ಷಿಸಿ

ಆನಂದ ಸಿ., ಅಯ್ಯೂರು ಕೋಲಾರಆನಂದ ಸಿ., ಅಯ್ಯೂರು ಕೋಲಾರ10 Aug 2016 11:50 PM IST
share

ಮಾನ್ಯರೆ,

ರಾಜಧಾನಿ ಬೆಂಗಳೂರಿನಲ್ಲಿ ಕೃತಕ ನೆರೆಗೆ ಕಾರಣವಾಗಿದ್ದ ರಾಜಕಾಲುವೆ ಒತ್ತುವರಿಯನ್ನು ಸರಕಾರ ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸುತ್ತಿದೆ. ಒಂದು ಸಣ್ಣ ಮಳೆಗೂ ಉದ್ಯಾನನಗರಿ ಹೆದರುವ ಸನ್ನಿವೇಶ ನಿರ್ಮಾಣವಾಗಿದ್ದು, ನಗರದ ಭವಿಷ್ಯದ ದೃಷ್ಟಿಯಿಂದ ಮುಂದಾಗುವ ಮತ್ತಷ್ಟು ಅನಾಹುತ ತಡೆಗೆ ಇದು ಜರೂರು ಆಗಬೇಕಿದ್ದ ಕ್ರಮ. ಯಾವುದೇ ಒತ್ತಡಕ್ಕೂ ಮಣಿಯದೆ, ಅಕ್ರಮ ಕಟ್ಟಡಗಳ ತೆರವು ಕಾರ್ಯ ಮುಂದುವರಿಯುತ್ತದೆ ಎಂದು ಸರಕಾರ ಘೋಷಣೆ ಮಾಡಿರುವುದು ಶ್ಲಾಘನೀಯ. ಆದರೆ ಇಲ್ಲಿ ಕೇವಲ ಕಟ್ಟಡ ಮಾಲಕರನ್ನು ಮಾತ್ರ ಹೊಣೆಗಾರರನ್ನಾಗಿ ಮಾಡಿ ದಂಡಿಸಲಾಗುತ್ತಿದೆ. ಪಾಲಿಕೆ ಅಧಿಕಾರಿಗಳು ಭಾಗಿಯಾಗದೇ ಅಕ್ರಮವಾಗಿ ಕಟ್ಟಡ ತಲೆಎತ್ತಲು ಸಾಧ್ಯವಿಲ್ಲ ಎಂಬುದು ಸರ್ವವಿಧಿತ. ಖಾತೆ ನೀಡಿಕೆ, ಕಟ್ಟಡ ನಕ್ಷೆ ಮಂಜೂರಾತಿ, ಎನ್‌ಒಸಿ ಸೇರಿದಂತೆ ನಿರ್ಮಾಣ ಕಾರ್ಯದ ಪ್ರತೀ ಹಂತದಲ್ಲೂ ಅಧಿಕಾರಿಗಳ ಸಹಾಯ ಹಸ್ತವಿಲ್ಲದೆ ಇಷ್ಟೆಲ್ಲಾ ಅಕ್ರಮ ನಡೆಯಲು ಸಾಧ್ಯವೇ ಇಲ್ಲ. ಹಣಕ್ಕಾಗಿ ಸರಕಾರಿ ಭೂಮಿ ಕಬಳಿಸುವುದು, ಅದಕ್ಕೆ ಸಹಕರಿಸುವುದು ಮತ್ತು ಜನಾಸಾಮಾನ್ಯ ಮಾಡುವ ಒತ್ತುವರಿ, ಎರಡೂ ಒಂದೇ ಅಲ್ಲ ಎಂಬುದನ್ನು ಆಳುವವರು ಮನಗಾಣಬೇಕು. ಆದರೆ ಕಾನೂನು ಬಲೆಯಲ್ಲಿ ಪ್ರತಿಸಲ ಸಿಕ್ಕಿಬೀಳುವವರು ಜನ ಸಾಮಾನ್ಯರು ಎನ್ನುವಂತಾಗಿದೆ. ಇದು ವ್ಯವಸ್ಥೆಯ ದೋಷ. ಪಾಲಿಕೆಯಲ್ಲಿ ತಾಂಡವಾಡುತ್ತಿರುವ ಭ್ರಷ್ಟಾಚಾರವೇ ಇದರ ಮೂಲ ಬೇರು ಎಂದರೆ ತಪ್ಪಾಗಲಾರದು, ತೆರವು ಕಾರ್ಯಾಚರಣೆಯೊಂದಿಗೆ, ಕೆರೆ, ಕಾಲುವೆ, ಗೋಮಾಳದಂತಹ ಸರಕಾರಿ ಭೂಮಿಯ ಒತ್ತುವರಿ ಮಾಡಿಕೊಳ್ಳಲು ಸಹಕರಿಸಿದಂತಹ ಅಧಿಕಾರಿಗಳನ್ನು ಕಠಿಣ ಶಿಕ್ಷೆಗೊಳಪಡಿಸಬೇಕು. ಹಣಕ್ಕಾಗಿ ಸರಕಾರಿ ಭೂಮಿಗಳನ್ನು ಕಬಳಿಸಿ, ಮಾರಿರುವ ಬಿಲ್ಡರ್‌ಗಳಿಗೆ ಶಿಕ್ಷೆಯ ಜೊತೆ ಅವರಿಂದ ದಂಡ ವಸೂಲಿ ಮಾಡಿ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಬೇಕು. ಅಲ್ಲದೆ ಇದರೊಂದಿಗೆ ನಗರದಲ್ಲಿ ಸರಕಾರಿ ಭೂಮಿಯನ್ನು ಗುರುತಿಸುವ ಕಾರ್ಯ ನಡೆಯಬೇಕಿದೆ. ಕೆರೆಗಳ, ಕಾಲುವೆಗಳ ಹೂಳು ತೆಗೆಸಬೇಕು. ನಗರದ ಅಳಿದುಳಿದ ಕೆರೆ, ಸರಕಾರಿ ಭೂಮಿ, ಭೂಗಳ್ಳರ ಪಾಲಾಗದೆ, ಅದರ ಸಂರಕ್ಷಣೆಗೆ ದಿಟ್ಟ ಕ್ರಮ ಕೈಗೊಳ್ಳಬೇಕಿದೆ. 

share
ಆನಂದ ಸಿ., ಅಯ್ಯೂರು ಕೋಲಾರ
ಆನಂದ ಸಿ., ಅಯ್ಯೂರು ಕೋಲಾರ
Next Story
X