Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಾಕ್ ಮಾಜಿ ಕ್ರಿಕೆಟಿಗ ಹನೀಫ್ ಹೃದಯ ಬಡಿತ...

ಪಾಕ್ ಮಾಜಿ ಕ್ರಿಕೆಟಿಗ ಹನೀಫ್ ಹೃದಯ ಬಡಿತ 6 ನಿಮಿಷ ನಿಂತರೂ, ಮತ್ತೆ ಚೇತರಿಸಿಕೊಂಡರು..!

ವಾರ್ತಾಭಾರತಿವಾರ್ತಾಭಾರತಿ11 Aug 2016 7:38 PM IST
share
ಪಾಕ್ ಮಾಜಿ ಕ್ರಿಕೆಟಿಗ ಹನೀಫ್ ಹೃದಯ ಬಡಿತ 6 ನಿಮಿಷ ನಿಂತರೂ, ಮತ್ತೆ ಚೇತರಿಸಿಕೊಂಡರು..!

ಕರಾಚಿ, ಆ.11: ಆಗಾ ಖಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಹನೀಫ್ ಮುಹಮ್ಮದ್ ಅವರ ಹೃದಯ ಬಡಿತ ಆರು ನಿಮಿಷಗಳ ಕಾಲ ನಿಂತರೂ ಬಳಿಕ ಚೇತರಿಸಿಕೊಂಡ ಘಟನೆ ಇಂದು ನಡೆದಿದೆ.
 ವಯೋ ಸಂಬಂಧಿ ನಾನಾ ಕಾಯಿಲೆಗಳಿಂದ ಬಳಲುತ್ತಿದ್ದ ಹನೀಫ್ ಅವರು ತೀವ್ರ ನಿಗಾ ವಿಭಾಗದಲ್ಲಿ ಹಲವು ದಿನಗಳಿಂದ ಚಿಕತ್ಸೆ ಪಡೆಯುತ್ತಿದ್ದರು. ಆದರೆ ದಿಢೀರನೆ ಅವರ ಆರೋಗ್ಯ ಹದೆಗೆಟ್ಟು,ಉಸಿರಾಟದ ಕ್ರಿಯೆ ನಿಂತಿತು. ತಕ್ಷಣ ಹನೀಫ್ ಅವರ ಮಗ ಶುಐಬ್ ತಂದೆ ನಿಧನರಾಗಿರುವುದಾಗಿ ವಿವಿಧ ಟಿವಿ ಚಾನಲ್‌ಗಳಿಗೆ ಮಾಹಿತಿ ನೀಡಿದರು.
  ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ನಡೆಸಿದ ಪ್ರಯತ್ನದಲ್ಲಿ ಆರು ನಿಮಿಷಗಳ ಬಳಿಕ ಹನೀಫ್ ಅವರ ದೇಹದಲ್ಲಿ ಉಸಿರಾಟ ಕ್ರಿಯೆ ಕಾಣಿಸಿಕೊಂಡಿತು. ‘‘ ತಂದೆಯ ಹೃದಯ ಬಡಿತ ಆರು ನಿಮಿಷಗಳ ಕಾಲ ನಿಂತಿತು. ವೈದ್ಯರು ನಡೆಸಿದ ಪ್ರಯತ್ನದಲ್ಲಿ ಮತ್ತೆ ಉಸಿರಾಟ ಕಾಣಿಸಿಕೊಂಡಿತು ’’ ಎಂದು ಶುಐಬ್ ಮಾಹಿತಿ ನೀಡಿದರು.
 ‘‘ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳ ಮತ್ತು ಬೆಂಬಲಿಗರ ಪ್ರಾರ್ಥನೆಯ ಫಲವಾಗಿ ದೇವರು ಅವರಿಗೆ ಎರಡನೆ ಅವಕಾಶ ನೀಡಿದರು’’ ಎಂದು ಶುಐಬ್ ಅಭಿಪ್ರಾಯಪಟ್ಟಿದ್ದಾರೆ.
  ‘‘ ನಾನು ಆಸ್ಪತ್ರೆ ತಲುಪುವ ಹೊತ್ತಿಗೆ ಅಲ್ಲಿದ್ದ ಸಂಬಂಧಿಕರು ತಂದೆ ನಿಧನರಾಗಿರುವುದಾಗಿ ಮಾಹಿತಿ ನೀಡಿದರು. ನನಗೆ ಆಘಾತವಾಗಿ ಅಳಲು ಆರಂಭಿಸಿದೆ. ಆದರೆ ಸ್ವಲ್ಪ ಹೊತ್ತಿನಲ್ಲಿ ವೈದ್ಯರು ನಡೆಸಿದ ಪ್ರಯತ್ನದಲ್ಲಿ ತಂದೆಯ ದೇಹದಲ್ಲಿ ಉಸಿರಾಟ ಕಾಣಿಸಿಕೊಂಡಿತು’’ ಎಂದು ಶುಐಬ್ ಹೇಳಿದರು.
  ‘‘ ಹನೀಫ್ ಮುಹಮ್ಮದ್ ಬದುಕಿದ್ದಾರೆ. ಸಂಕೀರ್ಣವಾದ ಉಸಿರಾಟದ ಸಮಸ್ಯೆಯಿಂದಾಗಿ ಜುಲೈ 30ರಂದು ಆಸ್ಪತ್ರೆಗೆ ದಾಖಲಾಗಿದ್ದ ಹನೀಫ್ ಮುಹಮ್ಮದ್ ಅವರಿಗೆ ಸಾಧ್ಯವಿರುವ ಎಲ್ಲ ಚಿಕಿತ್ಸೆ ನೀಡಲಾಗುತ್ತಿದೆ ’’ ಎಂದು ಆಸ್ಪತ್ರೆಯ ವಕ್ತಾರರೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
 81ರ ಹರೆಯದ ಹನೀಫ್ ಮುಹಮ್ಮದ್ ಅವರು ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಅವರಿಗೆ 2013ರಲ್ಲಿ ಶ್ವಾಸ ಕೋಶದ ಕ್ಯಾನ್ಸರ್ ಇರುವ ವಿಚಾರ ಬೆಳಕಿಗೆ ಬಂದಿತ್ತು. ಬಳಿಕ ಅವರು ಲಂಡನ್‌ಗೆ ತೆರಳಿ ಯಶಸ್ವಿ ಚಿಕಿತ್ಸೆಯ ಬಳಿಕ ಮನೆಗೆ ವಾಪಸಾಗಿದ್ದರು.
  ಹನೀಫ್ ಮುಹಮ್ಮದ್ 1954-55ರಲ್ಲಿ ಭಾರತಕ್ಕೆ ಮೊದಲ ಬಾರಿ ಪ್ರವಾಸ ಕೈಗೊಂಡ ಪಾಕಿಸ್ತಾನ ಕ್ರಿಕೆಟ್ ತಂಡದ ಸದಸ್ಯರಾಗಿದ್ದರು. 55 ಟೆಸ್ಟ್‌ಗಳನ್ನು ಆಡಿರುವ ಅವರು 1957-58ರಲ್ಲಿ ವೆಸ್ಟ್‌ಇಂಡೀಸ್ ವಿರುದ್ಧದ ಟೆಸ್ಟ್‌ನಲ್ಲಿ 337ರನ್ ದಾಖಲಿಸಿದ್ದರು.ಟೆಸ್ಟ್ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಸುಮಾರು 40 ವರ್ಷಗಳ ದಾಖಲೆಯಾಗಿ ಉಳಿದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X