ಗುಜರಾತ್ ಬಿಲ್ಲವ ಸಂಘದ ಸ್ಥಾಪಕ ಗೌರವಾಧ್ಯಕ್ಷ ಭಕ್ತವತ್ಸಲಾ ಆರ್.ಬೋಂಟ್ರಾ ನಿಧನ
.jpg)
ಮುಂಬಯಿ, ಆ.11: ಗುಜರಾತ್ ಬಿಲ್ಲವ ಸಂಘದ ಸ್ಥಾಪಕ ಗೌರವಾಧ್ಯಕ್ಷ, ಅಹ್ಮದಾಬಾದ್ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷ ಭಕ್ತವತ್ಸಲಾ ಆರ್.ಬೋಂಟ್ರಾ (78) ಅನಾರೋಗ್ಯದಿಂದ ಸ್ವನಿವಾಸದಲ್ಲಿ ನಿಧನರಾದರು.
ಮೂಲತಃ ಕಾರ್ಕಳ ಕೈರೊಟ್ಟು, ಕಲ್ಯ ಬೋಂಟ್ರಾ ಮನೆತನದವರಾಗಿದ್ದ ಭಕ್ತವತ್ಸಲಾ ಅವರು ಪ್ರಸ್ತುತ ಅಹ್ಮದಾಬಾದ್ನ ಹಿರಿಯ ಕೈಗಾರಿಕೋದ್ಯಮಿಯಾಗಿದ್ದರು. ಮೃತರು ಪತ್ನಿ ಮಾಯಾ ಭಕ್ತವತ್ಸಲಾ, ಪುತ್ರ ವೇಣುಗೋಪಾಲ್ ಬಿ.ಬೋಂಟ್ರಾ, ಪುತ್ರಿ ಡಾ.ಮೀರಾ ಸುಮನ್ಲಾಲ್, ಅಳಿಯ ಸುಮನ್ಲಾಲ್ ಕೊಡಿಯಾಲ್ಬೈಲ್ ಸೇರಿದಂತೆ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯನ್ನು ಅಹ್ಮದಾಬಾದ್ನ ಪಲ್ಟೇಜ್ನ ಅಂತಿಮ್ಧಾಮ್ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು.
ನಿಧನಕ್ಕೆ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷ ಹಾಗೂ ಭಾರತ್ ಬ್ಯಾಂಕ್ನ ಕಾರ್ಯಾಧ್ಯಕ್ಷ ಜಯ ಸಿ.ಸುವರ್ಣ, ಗುಜರಾತ್ ಬಿಲ್ಲವ ಸಂಘದ ಅಧ್ಯಕ್ಷ ದಯಾನಂದ ಬೋಂಟ್ರಾ, ಸ್ಥಾಪಕ ಸಂಚಾಲಕ ಎಸ್.ಕೆ ಹಳೆಯಂಗಡಿ, ಸ್ಥಾಪಕ ಉಪಾಧ್ಯಕ್ಷ ಮೋಹನ್ ಸಿ.ಪೂಜಾರಿ ಮತ್ತು ಪದಾಧಿಕಾರಿಗಳು, ಮಾಜಿ ಕೇಂದ್ರ ವಿತ್ತ ಸಚಿವ ಬಿ.ಜನಾರ್ದನ ಪೂಜಾರಿ, ಕರ್ನಾಟಕದ ಮಾಜಿ ಸಚಿವ, ಕಾಪು ಶಾಸಕ ವಿನಯ ಕುಮಾರ್ ಸೊರಕೆ, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ನಿತ್ಯಾನಂದ ಡಿ.ಕೋಟ್ಯಾನ್, ಮಾಜಿ ಅಧ್ಯಕ್ಷ ಎಲ್.ವಿ ಅವಿೂನ್, ಬಿಲ್ಲವ ಜಾಗೃತಿ ಬಳಗ ಮುಂಬಯಿ ಅಧ್ಯಕ್ಷ ಹಾಗೂ ಬಿಲ್ಲವ ಛೇಂಬರ್ ಆಪ್ ಕಾಮರ್ಸ್ ಎಂಡ್ ಇಂಡಸ್ಟ್ರೀ ಕಾರ್ಯಾಧ್ಯಕ್ಷ ಎನ್.ಟಿ ಪೂಜಾರಿ, ಬಿಲ್ಲವ ಜಾಗೃತಿ ಬಳಗದ ಸ್ಥಾಪಕಾಧ್ಯಕ್ಷ ಸೂರು ಸಿ.ಕರ್ಕೇರ, ಮಾಜಿ ಉಪಾಧ್ಯಕ್ಷ ಕೆ.ಬೋಜರಾಜ್, ಕೃಪಾ ಬೋಜರಾಜ್, ಬಿಲ್ಲವರ ಸಂಘ ನಾಸಿಕ್ ಅಧ್ಯಕ್ಷ ಗಂಗಾಧರ್ ಅಮೀನ್, ಬಾರತ್ ಬ್ಯಾಂಕ್ನ ಮಾಜಿ ಕಾರ್ಯಾಧ್ಯಕ್ಷ ವಿ.ಆರ್.ಕೋಟ್ಯಾನ್, ಉಪ ಕಾರ್ಯಾಧ್ಯಕ್ಷೆ ನ್ಯಾ. ರೋಹಿಣಿ ಜೆ.ಸಾಲಿಯಾನ್, ಆಡಳಿತ ನಿರ್ದೇಶಕ ಸಿ.ಆರ್ ಮೂಲ್ಕಿ ಮತ್ತು ನಿರ್ದೇಶಕ ಮಂಡಳಿ, ತುಳು ಸಂಘ ಬರೋಡಾ ಅಧ್ಯಕ್ಷ ಶಶಿಧರ ಬಿ.ಶೆಟ್ಟಿ, ಸುರತ್ಕಲ್ ಜಯರಾಮ ಶೆಟ್ಟಿ, ವಾಸು ಪಿ.ಪೂಜಾರಿ, ಮಧನ್ ಕುಮಾರ್ ಗೌಡ, ಎಂ.ಎಸ್ ರಾವ್ ಅಹ್ಮದಾಬಾದ್, ಸಾಹಿತಿ ಡಾ.ಗಣೇಶ್ ಅಮೀನ್ ಸಂಕಮಾರ್, ಅಖಿಲ ಬಾರತ ತುಳು ಒಕ್ಕೂಟ ಅಧ್ಯಕ್ಷ ಧರ್ಮಪಾಲ್ ಯು.ದೇವಾಡಿಗ, ತೀಯಾ ಸಮಾಜ, ಮುಂಬಯಿ ಇದರ ಅಧ್ಯಕ್ಷ ಚಂದ್ರಶೇಖರ್ ಆರ್.ಬೆಳ್ಚಡ, ಚಲನಚಿತ್ರ ನಿರ್ಮಾಪಕ ರಾಜಶೇಖರ್ ಆರ್.ಕೋಟ್ಯಾನ್, ಉದ್ಯಮಿಗಳಾದ ಹರೀಶ್ ಜಿ.ಅವಿೂನ್, ಸುರೇಂದ್ರ ಎ.ಪೂಜಾರಿ, ಬೆಂಗಳೂರು ಬಿಲ್ಲವರ ಸಂಘದ ಅಧ್ಯಕ್ಷ ಎಂ.ವೇದಕುಮಾರ್, ಶೋಬಾ ದಯಾನಂದ್ ಬೋಂಟ್ರಾ, ಮನೋಜ್ ಎಂ.ಪೂಜಾರಿ, ಹರೀಶ್ ಎಂ.ಪೂಜಾರಿ, ಅಹ್ಮದಾಬಾದ್, ಮನೋಜ್ ಸಿ.ಪೂಜಾರಿ ಸೂರತ್ ಸಂತಾಪ ವ್ಯಕ್ತಪಡಿಸಿದ್ದಾರೆ.







