Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲಾ ಎಸ್ಪಿಯಾಗಿ...

ಉಡುಪಿ ಜಿಲ್ಲಾ ಎಸ್ಪಿಯಾಗಿ ಕೆ.ಟಿ.ಬಾಲಕೃಷ್ಣ ಅಧಿಕಾರ ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ11 Aug 2016 10:00 PM IST
share
ಉಡುಪಿ ಜಿಲ್ಲಾ ಎಸ್ಪಿಯಾಗಿ ಕೆ.ಟಿ.ಬಾಲಕೃಷ್ಣ ಅಧಿಕಾರ ಸ್ವೀಕಾರ

ಉಡುಪಿ, ಆ.11: ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಯಾಗಿ ಕೆ.ಟಿ.ಬಾಲಕೃಷ್ಣ ಅವರು ಇಂದು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಗದಗ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿದ್ದ ಕೆ.ಟಿ.ಬಾಲಕೃಷ್ಣ ಅವರು ಉಡುಪಿ ಜಿಲ್ಲಾ ಪ್ರಭಾರ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್‌ರಿಂದ ಅಧಿಕಾರ ಸ್ವೀಕರಿಸಿದರು.

ಜಿಲ್ಲೆಯಲ್ಲಿ ಸಾಂಪ್ರದಾಯಿಕ ಅಪರಾಧಗಳೊಂದಿಗೆ ಸಂಘಟಿತ ಅಪರಾಧ ಗಳನ್ನು ನಿಯಂತ್ರದಲ್ಲಿಡಲು ತಾನು ಆದ್ಯತೆ ನೀಡುವುದಾಗಿ ಅವರು ಅಧಿಕಾರ ಸ್ವೀಕಾರದ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ಜಿಲ್ಲೆಯಲ್ಲಿ ನೈತಿಕ ಪೊಲೀಸ್‌ಗಿರಿಗೆ ಅವಕಾಶ ನೀಡುವುದಿಲ್ಲ. ಕಾನೂನು ಪ್ರಕಾರ ಅಂಥವರ ವಿರುದ್ಧ ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತೇನೆ ಎಂದವರು ಭರವಸೆ ನೀಡಿದರು.

ಈಗ ನಾಡಿನಾದ್ಯಂತ ಸಂಚಲನ ಮೂಡಿಸಿರುವ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಕುರಿತು ಸಮಗ್ರ ಮಾಹಿತಿಗಳನ್ನು ಪಡೆದು ತನಿಖೆ ಸರಿಯಾದ ರೀತಿಯಲ್ಲಿ ನಡೆಯುವಂತೆ ನೋಡಿಕೊಳ್ಳುವುದಾಗಿ ನುಡಿದರು. ಪ್ರತಿ ಜಿಲ್ಲೆಗೂ ಅದರದೇ ಆದ ಸವಾಲುಗಳು, ಸಮಸ್ಯೆಗಳಿರುತ್ತವೆ. ಈ ಬಗ್ಗೆ ತಿಳಿದುಕೊಂಡು ಅವುಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ತಿಳಿಸಿದರು.

ಜನಸ್ನೇಹಿ ಪೊಲೀಸಿಂಗ್ ತನ್ನ ಆದ್ಯತೆಯಾಗಿದ್ದು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಹೆಚ್ಚಿನ ಗಮನ ಹರಿಸುತ್ತೇನೆ. ಜಿಲ್ಲೆಯಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಪ್ರಾರಂಭಗೊಂಡಿರುವ ಬಗ್ಗೆ ಪ್ರಶ್ನಿಸಿದಾಗ, ಎಎನ್‌ಎಫ್ ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಿ ಸರಿಯಾದ ಮಾಹಿತಿಯನ್ನು ಪಡೆದುಕೊಂಡು ಮುಂದಿನ ಕ್ರಮ ತೆಗೆದುಕೊಂಡು ಸಮಸ್ಯೆ ಮತ್ತೆ ತಲೆಎತ್ತದಂತೆ ನೋಡುವುದಾಗಿ ತಿಳಿಸಿದರು.

ಪ್ರತಿ ಇಲಾಖೆಗಳಲ್ಲೂ ಸಮಸ್ಯೆಗಳಿರುತ್ತವೆ. ಆದರೆ ಸರಕಾರ ನೀಡಿರುವ ಸೌಲಭ್ಯಗಳೊಂದಿಗೆ ವ್ಯವಸ್ಥೆಯ ಇತಿ-ಮಿತಿಯೊಳಗೆ ಕೆಲಸ ಮಾಡಲು, ಜನರಿಗೆ ಗರಿಷ್ಠ ಸೇವೆ ನೀಡಲು ಪ್ರಯತ್ನಿಸುವುದಾಗಿ ಬಾಲಕೃಷ್ಣ ನುಡಿದರು.

1997ರಲ್ಲಿ ಚೆನ್ನಪಟ್ಟಣದಲ್ಲಿ ಡಿವೈಎಸ್ಪಿಯಾಗಿ ಸೇವೆಗೆ ಸೇರಿದ ಕೆ.ಟಿ.ಬಾಲಕೃಷ್ಣ ಮುಂದೆ ಚಾಮರಾಜ ನಗರ, ಮೈಸೂರು ನಗರಗಳಲ್ಲೂ ಸೇವೆ ಸಲ್ಲಿಸಿದ್ದರು. 2006ರಲ್ಲಿ ಐಪಿಎಸ್‌ಗೆ ಭಡ್ತಿ ಪಡೆದ ಅವರು ಸಿಐಡಿ ಎಸ್ಪಿಯಾಗಿ ಮುಂದೆ ಉತ್ತರ ಕನ್ನಡ ಹಾಗೂ ಗದಗ ಜಿಲ್ಲೆಗಳ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದಾರೆ.

2003ರಲ್ಲಿ ಚಾಮರಾಜ ನಗರದಲ್ಲಿ ವೀರಪ್ಪನ್‌ನಿಂದ ಹತ್ಯೆಗೊಳಗಾದ ಮಾಜಿ ಸಚಿವ ನಾಗಪ್ಪ ಅವರ ನಾಲ್ವರು ಕೊಲೆಗಾರರನ್ನು ಪತ್ತೆ ಹಚ್ಚಿದ ಕಾರಣಕ್ಕಾಗಿ ತಮಗೆ ಪೊಲೀಸ್ ಪದಕ ದೊರಕಿತ್ತು ಎಂದವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X