Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಝಾಕಿರ್ ನಾಯ್ಕ ವಿರುದ್ಧ ತನಿಖೆಯಲ್ಲಿ...

ಝಾಕಿರ್ ನಾಯ್ಕ ವಿರುದ್ಧ ತನಿಖೆಯಲ್ಲಿ ರಾಜಕೀಯ ಕೈವಾಡ

ಮಾಜಿ ಐಪಿಎಸ್ ಅಧಿಕಾರಿ ಸಿಂಗ್ ಆರೋಪ

ವಾರ್ತಾಭಾರತಿವಾರ್ತಾಭಾರತಿ11 Aug 2016 11:07 PM IST
share

ಮುಂಬೈ, ಆ.11: ಉಗ್ರರೊಂದಿಗೆ ನಂಟು ಹೊಂದಿದ್ದಾರೆ ಹಾಗೂ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆಂದು ಮುಂಬೈ ಪೊಲೀಸರಿಂದ ಗುರುತರ ಆರೋಪ ಹೊತ್ತ ವಿದ್ವಾಂಸ ಡಾ.ಝಾಕಿರ್ ನಾಯ್ಕಾ ವಿರುದ್ಧ ಮುಂಬೈ ಪೊಲೀಸರ ತನಿಖೆ ಮುಂದುವರಿಯುತ್ತಿದ್ದಂತೆಯೇ ಮಾಜಿ ಐಪಿಎಸ್ ಅಧಿಕಾರಿ ವೈ.ಪಿ.ಸಿಂಗ್ ಗಂಭೀರ ಆಪಾದನೆಯೊಂದನ್ನು ಮಾಡಿದ್ದಾರೆ. ಝಾಕಿರ್ ವಿರುದ್ಧದ ತನಿಖೆಯಲ್ಲಿ ರಾಜಕೀಯ ಕೈವಾಡವಿದೆಯೆಂದು ಅವರು ದೂರಿದ್ದಾರೆ.

ಈ ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಿಸುವಾಗ ಪೊಲೀಸರು ಸಾಮಾನ್ಯ ಪ್ರಕ್ರಿಯೆಯನ್ನು ಅನುಸರಿಸಿಲ್ಲವೆಂದು ಆರೋಪಿಸಿದ ಅವರು ಇದರ ಹಿಂದೆ ಕಾಣದ ರಾಜಕೀಯ ಕೈಗಳು ಇರುವ ಸಾಧ್ಯತೆಯಿದೆಯೆಂದಿದ್ದಾರೆ.
 
 ‘‘ಸೆಕ್ಷನ್ 153ಎ ಹಾಗೂ 295ಎ ಅನ್ವಯ ಪ್ರಕರಣ ದಾಖಲಿಸುವುದೆಂದರೆ, ಆರೋಪಿ ದೇಶದ ಹಿತಾಸಕ್ತಿ ಹಾಗೂ ಸಾಮರಸ್ಯಕ್ಕೆ ವಿರುದ್ಧವಾಗಿ ಏನನ್ನೋ ಮಾತನಾಡಿದ್ದಾನೆಂದರ್ಥ. ಇದು ಕ್ರಿಮಿನಲ್ ಅಪರಾಧವಾದರೂ ವಾಕ್ ಹಾಗೂ ಅಭಿವ್ಯಕ್ತಿ ಸ್ವಾತಂತ್ರ ಇರುವ ನಮ್ಮಂತಹ ದೇಶದಲ್ಲಿ ಈ ಆರೋಪವನ್ನು ಸಾಬೀತು ಪಡಿಸುವುದು ಬಹಳ ಕಷ್ಟ’’ ಎಂದು ಸಿಂಗ್ ಹೇಳಿದ್ದಾರೆ. ‘‘ಯಾರಿಗಾದರೂ ತನ್ನ ಧರ್ಮವನ್ನು ಹೊಗಳಬೇಕೆನಿಸಿದರೆ ಅದರರ್ಥ ಆತ ತಪ್ಪು ಮಾಡಿದ್ದಾನೆಂದಲ್ಲ. ಎಲ್ಲಾ ಧರ್ಮಗಳ ಎಲ್ಲಾ ಧಾರ್ಮಿಕ ನಾಯಕರೂ ಉತ್ಪ್ರೇಕ್ಷಿತ ಹೇಳಿಕೆಗಳನ್ನು ನೀಡುತ್ತಾರೆ. ಹಾಗೆಂದ ಮಾತ್ರಕ್ಕೆ ಅವರು ಅಪರಾಧ ಮಾಡಿದ್ದಾರೆಂದು ಹೇಳಲಾಗದು’’ ಎಂದು ಸಿಂಗ್ ನುಡಿದಿದ್ದಾರೆ.
ಝಾಕಿರ್ ನಾಯ್ಕ ದೇಶಕ್ಕೆ ಮರಳದೇ ಇದ್ದಲ್ಲಿ ಅವರನ್ನು ಗಡೀಪಾರು ಮಾಡುವಂತೆ ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಂಗಳವಾರ ಹೇಳಿದ್ದರು. ನಾಯ್ಕಿ ವಿರುದ್ಧ ಮುಂಬೈ ಪೊಲೀಸರು ಗಂಭೀರ ಆರೋಪ ಹೊರಿಸಿ ಸಲ್ಲಿಸಲಾಗಿರುವ ವರದಿ ತಮಗೆ ದೊರೆತಿದೆಯೆಂದೂ ಫಡ್ನವೀಸ್ ತಿಳಿಸಿದ್ದರು.
ಢಾಕಾ ದಾಳಿಯ ಉಗ್ರರು ನಾಯ್ಕ ಭಾಷಣಗಳಿಂದ ಪ್ರಭಾವಿತರಾಗಿದ್ದಿರಬಹುದೆಂಬ ವರದಿಗಳ ಹಿನ್ನೆಲೆಯಲ್ಲಿ ಕಳೆದ ತಿಂಗಳು ಮಹಾರಾಷ್ಟ್ರ ಸರಕಾರ ಆನ್‌ಲೈನ್‌ನಲ್ಲಿ ಲಭ್ಯವಿರುವ ನಾಯ್ಕೆ ಭಾಷಣಗಳನ್ನು ತನಿಖೆಗೊಳಪಡಿಸಲು ಮುಂಬೈ ಪೊಲೀಸರಿಗೆ ಆದೇಶಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X