ಒಳಚರಂಡಿ ಯೋಜನೆ ಮಾಹಿತಿ ಕಾರ್ಯಕ್ರಮ
ಪುತ್ತೂರು, ಆ.11: ನಗರಸಭಾ ವ್ಯಾಪ್ತಿಯ ಒಳಚರಂಡಿ ಯೋಜನೆಯ ಕುರಿತ ಮಾಹಿತಿ ಕಾರ್ಯಕ್ರಮ ಗುರುವಾರ ಇಲ್ಲಿನ ಸಮುದಾಯ ಭವನದಲ್ಲಿ ನಗರಸಭಾ ಅಧ್ಯಕ್ಷೆ ಜಯಂತಿ ಬಲ್ನಾಡು ಅವರ ನೇತೃತ್ವದಲ್ಲಿ ನಡೆಯಿತು. ನಗರಸಭಾ ವ್ಯಾಪ್ತಿಯಲ್ಲಿನ ಒಳ ಚರಂಡಿಗೆ 75 ಕೋಟಿ ರೂ. ಬಿಡುಗಡೆಯಾಗಿದ್ದು ಈ ಬಗ್ಗೆ ಮಾಹಿತಿ ನೀಡಿದ ಕೆಯುಐಡಿಎಫ್ಸಿ ಉಪನಿರ್ದೇಶಕ ಪ್ರಭಾಕರ ಶರ್ಮ ಈ ಬಗ್ಗೆ ಸಾರ್ವಜನಿಕರು ಯಾವುದೇ ಗೊಂದಲಕ್ಕೆ ಒಳಗಾಗ ಬೇಕಾಗಿಲ್ಲ. ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿ ಪ್ರತಿಯೊಬ್ಬರ ಜಮೀನಿಗೆಆಗಮಿಸಿ ಸ್ಥಳ ಗುರುತು ಮಾಡಲಾಗು ವುದು. ಯೋಜನೆಯಂತೆ 5 ಮೀಟರ್ ಜಾಗದಲ್ಲಿ ಒಳಚರಂಡಿ ನಿರ್ಮಾಣವಾಗಲಿದೆ. ಇದಕ್ಕಿಂತ ಹೆಚ್ಚು ಜಾಗವನ್ನು ಎಲ್ಲಿಯೂ ಸ್ವಾಧೀನ ಮಾಡಿಕೊಳ್ಳುವುದಿಲ್ಲ. ಒಳಚರಂಡಿ ಮೇಲ್ಭಾಗದಲ್ಲಿ ರಸ್ತೆ ನಿರ್ಮಿಸಲಾಗುವುದು ಎಂದು ತಿಳಿಸಿದರು. ತಹಶೀಲ್ದಾರ್ ಪುಟ್ಟ ಶೆಟ್ಟಿ, ನಗರಸಭೆ ಅಧ್ಯಕ್ಷೆ ಜಯಂತಿ ಬಲ್ನಾಡು, ಉಪಾಧ್ಯಕ್ಷ ವಿಶ್ವನಾಥ ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ವಿನಯ ಭಂಡಾರಿ, ಪೌರಾಯುಕ್ತೆ ರೇಖಾ ಜೆ. ಶೆಟ್ಟಿ, ಮುಹಮ್ಮದ್ಆಲಿ, ರಾಮಣ್ಣ ಗೌಡ ಹಲಂಗ ಮತ್ತಿತರರು ಉಪಸ್ಥಿತರಿದ್ದರು.





