ಕಾರು-ಲಾರಿ ಢಿಕ್ಕಿ: ಇಬ್ಬರು ಗಂಭೀರ
ಕಾಸರಗೋಡು, ಆ.11: ಕಾರು ಮತ್ತು ಲಾರಿ ಢಿಕ್ಕಿ ಹೊಡೆದು ಕಾರು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ನಗರ ಹೊರವಲಯದ ವಿದ್ಯಾನಗರದಲ್ಲಿ ಗುರುವಾರ ನಡೆದಿದೆ.
ಗಾಯಗೊಂಡವರನ್ನು ಫರೀದ್ ಮತ್ತು ಅವರ ಪುತ್ರ ಫರ್ಹಾನ್(19)ಎಂದು ಗುರುತಿಸಲಾಗಿದೆ. ಈ ಪೈಕಿ ಫರ್ಹಾನ್ ಸ್ಥಿತಿ ಚಿಂತಾಜನಕವಾಗಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಾಯಿಯನ್ನು ನೋಡಲೆಂದು ಬರುತ್ತಿದ್ದಾಗ ಈ ಘಟನೆ ನಡೆದಿದೆ. ಕಾರು ನಜ್ಜುಗುಜ್ಜಾಗಿದೆ. ಫರ್ಹಾನ್ ಮಂಗಳೂರು ಕಾಲೇಜೊಂದರ ಡಿಗ್ರಿ ವಿದ್ಯಾರ್ಥಿಯಾಗಿದ್ದಾರೆೆ . ವಿದ್ಯಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story