Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳಿಂದ...

ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳಿಂದ ಹೀಗೊಂದು ಮಾದರಿ ಸಮಾಜ ಸೇವೆ!

ಪಾಕೆಟ್ ಮನಿಯನ್ನು ಸಂಗ್ರಹಿಸಿ ನೆರವಿನ ಹಸ್ತ ಚಾಚುವ ‘ಕೋಸ್’ ಸಮಿತಿ

ವಾರ್ತಾಭಾರತಿವಾರ್ತಾಭಾರತಿ12 Aug 2016 3:06 PM IST
share
ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳಿಂದ ಹೀಗೊಂದು ಮಾದರಿ ಸಮಾಜ ಸೇವೆ!

ಮಂಗಳೂರು, ಆ.12: ಮನೆಯಲ್ಲಿ ತಮಗೆ ನೀಡಲಾಗುವ ‘ಪಾಕೆಟ್ ಮನಿ’ಯಲ್ಲಿ ಸ್ವಲ್ಪ ಹಣವನ್ನು ಸಂಗ್ರಹಿಸಿ ಅದನ್ನು ಅಗತ್ಯ ಇರುವವರಿಗೆ ವಿವಿಧ ರೂಪದಲ್ಲಿ ಪೂರೈಸುವ ಮೂಲಕ ಸಮಾಜ ಸಮಾಜ ಸೇವೆಯ ಮೂಲಕ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿಗಳು ಗಮನ ಸೆಳೆಯುತ್ತಿದ್ದಾರೆ. ಕಾಲೇಜಿನ ಪಿಯುಸಿ ಹಾಗೂ ಪದವಿ ತರಗತಿಗಳ ವಿದ್ಯಾರ್ಥಿಗಳ ಜತೆ ಹಳೆ ವಿದ್ಯಾರ್ಥಿಗಳು ಮಾತ್ರವಲ್ಲದೆ, ಕಾಲೇಜು ಆಡಳಿತ ಮಂಡಳಿ ಕೂಡಾ ವಿದ್ಯಾರ್ಥಿಗಳ ಈ ಸಮಾಜ ಸೇವೆಯಲ್ಲಿ ಕೈಜೋಡಿಸಿದ್ದಾರೆ. 2014ರಿಂದ ಇದಕ್ಕಾಗಿ ‘ಕೋಸ್’ ಎಂಬ ಸಮಿತಿಯನ್ನು ರಚಿಸಿಕೊಂಡಿರುವ ವಿದ್ಯಾರ್ಥಿಗಳು ಕಳೆದ ಎರಡು ವರ್ಷಗಳಿಂದ ಹಲವು ಕಾರ್ಯಕ್ರಮಗಳ ಮೂಲಕ ನಗರದ ಸಂವೇದನಾ, ಪ್ರೀತಿ ಸದನ, ಸ್ನೇಹಸದನ, ಆವೆ ಮರಿ ಮೊದಲಾದ ಸಂಸ್ಥೆಗಳಿಗೆ ನೆರವಿನ ಹಸ್ತವನ್ನು ನೀಡಿದ್ದಾರೆ. ಈ ಸಾಲಿನಲ್ಲಿ ಸೈಂಟ್ ಅಲೋಶಿಯಸ್‌ನ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಕಾಲೇಜಿನ ಅರ್ಹ ವಿದ್ಯಾರ್ಥಿಗಳಿಗೆ ಸುಮಾರು 75,000 ರೂ. ಮೌಲ್ಯದ ಪುಸ್ತಕಗಳನ್ನು ವಿತರಿಸಿದ್ದಾರೆ. ಈ ರೀತಿ ವಿದ್ಯಾರ್ಥಿಗಳಿಂದಲೇ ಸಂಗ್ರಹಿಸಲಾಗುವ ಹಣವನ್ನು ಮನೆ ನಿರ್ಮಾಣ ಹಾಗೂ ವಿವಿಧ ಸಂಸ್ಥೆಗಳಿಗೆ ದೇಣಿಗೆ ರೂಪದಲ್ಲಿ ನೀಡುವ ಮೂಲಕ ಸಮಾಜ ಸೇವೆಯಲ್ಲಿ ತಮ್ಮನ್ನು ಕಾಲೇಜು ವಿದ್ಯಾರ್ಥಿಗಳು ತೊಡಗಿಸಿಕೊಂಡಿದ್ದಾರೆ. ಇದಕ್ಕಾಗಿ ವಿದ್ಯಾರ್ಥಿಗಳು ತಾವಾಗಿಯೇ ತಮ್ಮ ಪಾಕೆಟ್ ಮನಿಯ ಸ್ವಲ್ಪ ಭಾಗವನ್ನು ಇದಕ್ಕಾಗಿ ಮೀಸಲಿರಿಸುವುದು ಮಾತ್ರವಲ್ಲದೆ, ವಿವಿಧ ನಗರದ ಸಿಟಿ ಸೆಂಟರ್ ಹಾಗೂ ಫೋರಂ ಫಿಝಾ ಮಾಲ್‌ಗಳಲ್ಲಿ ವಿದ್ಯಾರ್ಥಿಗಳಿಂದಲೇ ತಯಾರಿಸಿದ ಚಾಕಲೇಟುಗಳು, ಗ್ಲಾಸ್ ಪೇಯ್ಟಿಂಗ್, ಬುಕ್‌ಮಾರ್ಕ್‌ಗಳು, ಕಪ್ ಕೇಕ್ ಮೊದಲಾದವುಗಳನ್ನು ಮಾರಾಟ ಮಾಡಿ ಬಂದ ಹಣವನ್ನೂ ತಮ್ಮ ಸಮಾಜ ಸೇವೆಗೆ ಉಪಯೋಗಿಸುತ್ತಿದ್ದಾರೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ಅಲೋಶಿಯಸ್ ಕಾಲೇಜಿನ ಪದವಿ ಕಾಲೇಜಿನ ವಿದ್ಯಾರ್ಥಿ ಹಾಗೂ ಕಾರ್ಯಕ್ರಮ ಸಂಯೋಜಕ ಸುಹಾನ್ ಆಳ್ವ, ಕೋಸ್ ಸಮಿತಿ ವತಿಯಿಂದ ನಗರದ ಸಿಟಿ ಸೆಂಟರ್ ಮಾಲ್‌ನಲ್ಲಿ ವಿವಿಧ ವಸ್ತುಗಳ ಮಾರಾಟ ಮಳಿಗೆಯಿಂದ 53,000 ರೂ.ಗಳನ್ನು ಸಂಗ್ರಹಿಸಲಾಗಿದೆ. ಆ. 13 ಮತ್ತು 14ರಂದು ನಗರದ ಫೋರಂ ಫಿಝಾ ಮಾಲ್‌ನಲ್ಲಿಯೂ ಈ ಮಾರಾಟ ಮಳಿಗೆಯನ್ನು ಏರ್ಪಡಿಸಲಾಗಿದೆ. ಆ. 15ರಂದು ಫೋರಂ ಫಿಝಾ ಮಾಲ್‌ನಲ್ಲಿ ವಿಶೇಷ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ ಎಂದು ಸುಹಾನ್ ತಿಳಿಸಿದರು. ‘‘2014ರಲ್ಲಿ ನಾವು ನಮ್ಮ ಕೋಸ್ ಎಂಬ ಸಮಿತಿಯನ್ನು ರಚಿಸಿಕೊಂಡಿದ್ದೇವೆ. ಆ ವರ್ಷ ಸುರತ್ಕಲ್‌ನಲ್ಲಿ ಬಡ ಕುಟಂಬವೊಂದು ಮನೆ ಕಟ್ಟಲು ಆರಂಭಿಸಿ ಅದನ್ನು ಪೂರ್ಣಗೊಳಿಸಲು ಹಣದ ಕೊರತೆಯಿರುವ ಬಗ್ಗೆ ನಮ್ಮ ಸಮಿತಿಗೆ ಬಂದ ಮನವಿ ಪತ್ರದ ಮೇರೆಗೆ ನಾವು ನಮ್ಮಲ್ಲಿದ್ದ 50,000 ರೂ.ಗಳನ್ನು ಒದಗಿಸಿದ್ದೆವು. ಇದಲ್ಲದೆ, ಅನಾಥಾಲಯ, ವೃದ್ಧಾಶ್ರಮಗಳಿಗೆ ನಾವು ಸಹಾಯ ಹಸ್ತವನ್ನು ನೀಡುತ್ತಿದ್ದೇವೆ. ಕಳೆದೆರಡು ವರ್ಷಗಳು ಹಾಗೂ ಈ ವರ್ಷ ಸೇರಿ ಒಟ್ಟು ಮೂರು ವರ್ಷಗಳಲ್ಲಿ ವಿದ್ಯಾರ್ಥಿಗಳೇ ಒಟ್ಟುಗೂಡಿಸಿದ 10 ಲಕ್ಷ ರೂ.ಗಳವರೆಗೆ ಸಮಾಜಸೇವೆಗೆ ವಿನಿಯೋಗಿಸುವ ಇರಾದೆ ಇದೆ’’ ಎಂದು ಸುಹಾನ್ ಆಳ್ವ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮ ಸಂಯೋಜಕ ಮುಹಮ್ಮದ್ ಶಾವಾಝ್, ಸಮಿತಿ ಸದಸ್ಯರಾದ ಶರೀಫ್, ಅರ್ಝೂ ಅಹ್ಮದ್, ಅಮನ್ನಾ ಲಸ್ರಾದೋ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X