Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಾಲು ಕರೆದ ಸಚಿವ ಎ. ಮಂಜು

ಹಾಲು ಕರೆದ ಸಚಿವ ಎ. ಮಂಜು

ಸರಕಾರದ ಹೊಸ ಯೋಜನೆ

ವಾರ್ತಾಭಾರತಿವಾರ್ತಾಭಾರತಿ12 Aug 2016 7:48 PM IST
share
ಹಾಲು ಕರೆದ ಸಚಿವ ಎ. ಮಂಜು

ಬೆಂಗಳೂರು, ಆ. 10: ಡೆಂಗ್ ಸೇರಿದಂತೆ ಇತರ ಮಾರಕ ಕಾಯಿಲೆಗಳಿಗೆ ಪರಿಣಾಮಕಾರಿಯಾದ ಮೇಕೆ ಹಾಲಿನ ಮಾರುಕಟ್ಟೆ ವಿಸ್ತರಣೆಗೆ ಯೋಜನೆ ರೂಪಿಸಲಾಗಿದೆೆ ಎಂದು ಪಶುಸಂಗೋಪನ ಸಚಿವ ಎ.ಮಂಜು ತಿಳಿಸಿದ್ದಾರೆ.

 ಶುಕ್ರವಾರ ನಗರದ ಲಾಲ್‌ಬಾಗ್‌ನಲ್ಲಿರುವ ಎಂ.ಎಚ್.ಮರಿಗೌಡ ಸಭಾಂಗಣದಲ್ಲಿ ಆಯೋಜಿಸಿದ್ದ ಯಶೋದವನ ಗೋಟ್ ಫಾರ್ಮ್‌ನ ‘ಮೈ ಗೋಟ್’ ಬ್ರಾಂಡ್ ಮೇಕೆ ಹಾಲನ್ನು ಕುಡಿಯುವ ಮೂಲಕ ಮಾರುಕಟ್ಟೆಗೆ ಬಿಡುಗಡೆಗೊಳಿಸಿ ಮಾತನಾಡಿದರು.

ಮೇಕೆ ಹಾಲು ಸಾಕಷ್ಟು ಔಷಧೀಯ ಗುಣಗಳನ್ನು ಹೊಂದಿರುವುದಲ್ಲದೆ, ಮಕ್ಕಳ ಆರೋಗ್ಯಕ್ಕೂ ಪೂರಕವಾಗಿದೆ. ಮೇಕೆ ಹಾಲು ತಾಯಿ ಎದೆ ಹಾಲಿಗಿಂತಲೂ ಶ್ರೇಷ್ಠವಾದದ್ದು. ಅಲ್ಲದೆ, ಅನೇಕ ಪೌಷ್ಠಿಕಾಂಶಗಳನದ್ನು ಒಳಗೊಂಡಿರುವುದರಿಂದ ಹೆಚ್ಚಿನ ಬೇಡಿಕೆಯಿದೆ. ಹೀಗಾಗಿ ದೇಶದಲ್ಲಿಯೇ ಮೊದಲ ಬಾರಿಗೆ ಮೇಕೆ ಹಾಲಿಗೆ ಮಾರುಕಟ್ಟೆ ಒದಗಿಸಲು ಸರಕಾರ ಯೋಜನೆ ರೂಪಿಸಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಜನರನ್ನು ಕಾಡುತ್ತಿರುವ ಡೆಂಗ್ ಜ್ವರ ಸೇರಿದಂತೆ ಇತರ ಮಾರಕ ಕಾಯಿಲೆಗಳಿಗೆ ಮೇಕೆ ಹಾಲು ಉಪಯುಕ್ತವಾದದ್ದು ಎಂದು ವೈದ್ಯರೂ ತಿಳಿಸಿದ್ದಾರೆ. ಹೀಗಾಗಿ ಮೇಕೆ ಹಾಲಿಗೆ ಸೂಕ್ತ ಮಾರುಕಟ್ಟೆ ವಿಸ್ತರಿಸುವ ಅಗತ್ಯತೆ ಇದೆ ಎಂದು ಸಚಿವರು ಅಭಿಪ್ರಾಯಿಸಿದರು.

ಯಶೋದವನ ಫಾರ್ಮ್‌ನ ಮಾಲಕ ಶ್ರೀನಿವಾಸ ಮಾತನಾಡಿ, ಮೇಕೆ ಹಾಲಿನ ಬಳಕೆಯಿಂದ ಸಾಕಷ್ಟು ಲಾಭಗಳಿವೆ. ಸಾಕಷ್ಟು ಔಷಧೀಯ ಗುಣಗಳಿರುವ ಮೇಕೆ ಹಾಲು ಮಕ್ಕಳ ಆರೋಗ್ಯಕ್ಕೆ ಪೂರಕವಾದದ್ದು. ಆದರೆ ಗ್ರಾಹಕರಿಗೆ ಸಲೀಸಾಗಿ ಸಿಗುತ್ತಿರಲಿಲ್ಲ. ಹಸುವಿನ ಹಾಲಿನಂತೆ ಮೇಕೆ ಹಾಲು ಮಾರುಕಟ್ಟೆಯಲ್ಲಿ ವ್ಯವಸ್ಥಿತವಾಗಿ ದೊರೆಯಬೇಕು ಎಂಬ ಮಹದಾಸೆಯಿಂದ ಈ ಪ್ರಯತ್ನಕ್ಕೆ ಕೈ ಹಾಕಿದ್ದೇನೆ ಎಂದು ತಿಳಿಸಿದರು.

ಸಾಮಾನ್ಯವಾಗಿ ಮೇಕೆ ವರ್ಷಕ್ಕೆ ಎರಡು ಬಾರಿ ಮರಿ ಹಾಕುತ್ತದೆ, ಹೀಗಾಗಿ ಮೇಕೆ ಹಾಲನ್ನು ಸೀಸನಲ್ ಮಿಲ್ಕ್ ಎನ್ನಬಹುದು. ಮೇಕೆ ತನ್ನ ಮರಿಗಳಿಗೆ ಹಾಲುಣಿಸಿ ಉಳಿದ ಹೆಚ್ಚುವರಿ ಹಾಲನ್ನು ಮಾರುಕಟ್ಟೆಗೆ ಪೂರೈಸಲಾಗುವುದು. ಇದಕ್ಕಾಗಿ ಒಂದು ವರ್ಷ ನಿರಂತರ ಸಂಶೋಧನೆ ಕೈಗೊಂಡು ಯಶಸ್ವಿಯಾಗಿದ್ದೇವೆ ಎಂದರು.

ಉತ್ತಮ ತಳಿಯ ಮೇಕೆಯ ಹಾಲನ್ನು ಮಾರುಕಟ್ಟೆಗೆ ತರುವ ಮುನ್ನ ಜನರಲ್ಲಿ ಮೇಕೆ ಹಾಲಿನ ಕುರಿತು ಅರಿವು ಮೂಡಿಸಲು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಮಯದಲ್ಲಿ ಒಂದು ಸಾವಿರ ಲೀ. ಮೇಕೆ ಹಾಲನ್ನು ಸುಮಾರು ಆರು ಸಾವಿರ ಜನರಿಗೆ ಉಚಿತವಾಗಿ ಎರಡು ತಿಂಗಳು ಹಂಚಿದ್ದೇವೆ. ಜನರಿಂದ ಕೂಡ ನಮ್ಮ ಪ್ರಯತ್ನಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದರು.

ಮೇಕೆ ಹಾಲಿಗೆ ಬೇಡಿಕೆ ಇಟ್ಟು ಈವರೆಗೆ ಸುಮಾರು ಮೂರು ಸಾವಿರಕ್ಕೂ ಅಧಿಕ ಜನರು ನೋಂದಣಿ ಮಾಡಿಸಿಕೊಂಡಿದ್ದಾರೆ. ದಿನಕ್ಕೆ ಒಂದು ಸಾವಿರ ಮೇಕೆ ಹಾಲು ಉತ್ಪಾದನೆ ಮಾಡಿದವರಲ್ಲಿ ದೇಶದಲ್ಲಿ ನಾವೇ ಮೊದಲು. ಮೇಕೆ ಹಾಲನ್ನು ಪ್ಯಾಶ್ಚೀಕರಿಸಿ ಗುಣಮಟ್ಟದ ಹಾಲನ್ನು ಗ್ರಾಹಕರಿಗೆ ಒದಗಿಸಲಾಗುತ್ತದೆ ಎಂದರು.

ಪ್ರಾರಂಭಿಕವಾಗಿ ಬೆಂಗಳೂರು ಮತ್ತು ಮೈಸೂರು ನಗರದಲ್ಲಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಪ್ರಯತ್ನಕ್ಕೆ ಜನರಿಂದ ಸೂಕ್ತ ಬೆಂಬಲ ದೊರೆತರೆ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಸಂತಸ ಹಂಚಿಕೊಂಡ ಅವರು, ಮೇಕೆ ಹಾಲು ಬಾಟಲ್ ರೂಪದಲ್ಲಿ ದೊರಕಲಿದ್ದು, 200 ಮಿ.ಲೀ. ಬಾಟಲ್‌ಗೆ 50 ರೂ, 500 ಮಿ.ಲೀ.ಗೆ 125 ರೂ., ಒಂದು ಲೀ.ಗೆ 250 ರೂ.ಗಳಂತೆ ಮಾರಾಟ ಮಾಡಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವ್ಯವಸ್ತಾಪಕ ನಿರ್ದೇಶಕ ಡಾ.ಶಿವರಾಂ ಭಟ್, ರಾಜಸ್ಥಾನದ ಆಡು ಸಾಕಣಿಕೆ ತಜ್ಞ ದೀಪಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X