Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದ ಗಡಿಯಲ್ಲಿ ದಾಳಿಗೆ ತಾಲಿಬಾನ್...

ಭಾರತದ ಗಡಿಯಲ್ಲಿ ದಾಳಿಗೆ ತಾಲಿಬಾನ್ ಯೋಜನೆ : ಪಾಕಿಸ್ತಾನ ಗುಪ್ತಚರ ಸಂಸ್ಥೆಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ12 Aug 2016 8:23 PM IST
share
ಭಾರತದ ಗಡಿಯಲ್ಲಿ ದಾಳಿಗೆ ತಾಲಿಬಾನ್ ಯೋಜನೆ : ಪಾಕಿಸ್ತಾನ ಗುಪ್ತಚರ ಸಂಸ್ಥೆಯ ಎಚ್ಚರಿಕೆ

ಲಾಹೋರ್, ಆ.12: ಪಾಕಿಸ್ತಾನದ ಉನ್ನತ ಭಯೋತ್ಪಾದನೆ ವಿರೋಧಿ ಸಂಸ್ಥೆಯು ಎರಡು ಮುನ್ನೆಚ್ಚರಿಕೆಗಳನ್ನು ಹೊರಡಿಸಿದೆ. ಸ್ವಾತಂತ್ರ ದಿನಾಚರಣೆಯ ಆಸುಪಾಸಿನಲ್ಲಿ ಇಬ್ಬರು ತಾಲಿಬಾನ್ ಆತ್ಮಹತ್ಯಾ ಬಾಂಬರ್‌ಗಳಿಂದ ಭಾರತ-ಪಾಕಿಸ್ತಾನದ ವಾಘಾ ಹಾಗೂ ಗಂದಾ ಸಿಂಗ್ ಗಡಿಗಳಲ್ಲಿ ದಾಳಿ ನಡೆಯುವ ಸಂಭಾವ್ಯವಿದೆಯೆಂದು ಅದು ಎಚ್ಚರಿಸಿವೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಭದ್ರತಾ ಸಿಬ್ಬಂದಿಯ ರಕ್ಷಣೆಗೆ ಭಾರೀ ತಡೆ ಕ್ರಮಗಳನ್ನು ಕೈಗೊಳ್ಳುವಂತೆ ಪಾಕಿಸ್ತಾನದ ಭಯೋತ್ಪಾದನೆ ವಿರೋಧಿ ಪ್ರಾಧಿಕಾರವು ಪಾಕಿಸ್ತಾನಿ ರೇಂಜರ್ಸ್‌ನ ಪಂಜಾಬ್ ಮಹಾನಿರ್ದೇಶಕ, ಗೃಹ ಇಲಾಖೆ ಹಾಗೂ ಪಂಜಾಬ್(ಪಾಕಿಸ್ತಾನ) ಪೊಲೀಸ್ ವರಿಷ್ಠರಿಗೆ ಆದೇಶ ನೀಡಿದೆ.

 ತೆಹ್ರಿಕ್-ಇ-ತಾಲಿಬಾನ್‌ನ ಫಝಲುಲ್ಲಾ ಗುಂಪು ಆ.13,14 ಅಥವಾ 15ರಂದು ಲಾಹೋರ್‌ನ ವಾಘಾ ಗಡಿ ಹಾಗೂ ಕಸೂರ್‌ನ ಗಂದಾ ಸಿಂಗ್ ಗಡಿಗಳಲ್ಲಿ ಸ್ವಾತಂತ್ರೋತ್ಸವ ಪೆರೇಡ್‌ನ ಮೇಲೆ ದಾಳಿ ನಡೆಸಲು ಯೋಜನೆ ಹಾಕಿಕೊಂಡಿದೆಯೆಂದು ಭದ್ರತಾ ಎಚ್ಚರಿಕೆ ತಿಳಿಸಿದೆ.

ಈ ಗುರಿಗಳ ಮೇಲೆ ದಾಳಿ ನಡೆಸಲು ಇಬ್ಬರು ಆತ್ಮಹತ್ಯಾ ಬಾಂಬರ್‌ಗಳನ್ನು ಕಳುಹಿಸಲಾಗಿದೆಯೆಂದೂ ಅದು ಹೇಳಿದೆ.

ಯಾವುದೇ ಅಹಿತಕರ ಘಟನೆಯನ್ನು ನಿವಾರಿಸಲು ತೀವ್ರ ಕಣ್ಗಾವಲು ಹಾಗೂ ಉನ್ನತ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂಎ ಸಲಹೆ ನೀಡಲಾಗಿದೆಯೆಂದು ಎಚ್ಚರಿಕೆ ತಿಳಿಸಿದೆ.

ಕನಿಷ್ಠ 16 ಮಂದಿ ಆತ್ಮಹತ್ಯಾ ದಾಳಿಕಾರರು ಪ್ರಾಂತವನ್ನು ಪ್ರವೇಶಿಸಿದ್ದಾರೆ. ಅವರು, ಸ್ವಾತಂತ್ರ ದಿನಾಚರಣೆಗೆ ಸಂಬಂದಿಸಿದ ಸಾರ್ವಜನಿಕ ಸಭೆಗಳ ಮೇಲೆ ಗುರಿಯಿರಿಸಲು ಯೋಚಿಸಿದ್ದಾರೆಂದು ಪಂಜಾಬ್‌ನ(ಪಾಕಿಸ್ತಾನ) ಗೃಹ ಇಲಾಖೆಯು ಪ್ರತ್ಯೇಕ ಎಚ್ಚರಿಕೆಯನ್ನು ಹೊರಡಿಸಿವೆ.

ಈ ಹಿನ್ನೆಲೆಯಲ್ಲಿ ಪಂಜಾಬ್ ಪೊಲೀಸರು ಗಡಿಪ್ರದೇಶಗಳಲ್ಲಿ ದಾಳಿ ನಡೆಸಿ ಹಲವು ಮಂದಿ ಶಂಕಿತರನ್ನು ಬಂಧಿಸಿದ್ದಾರೆ.

ದಾಳಿಯ ವೇಳೆ ಪೊಲೀಸರು 50ಕ್ಕೂ ಹೆಚ್ಚು ಮಂದಿ ಶಂಕಿತರನ್ನು ಬಂಧಿಸಿದ್ದಾರೆ. ನಗರ ಹಾಗೂ ಗಡಿಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆಯೆಂದು ಲಾಹೋರ್ ಪೊಲೀಸ್ ವಕ್ತಾರ ನಿಯಾಬ್ ಹೈದರ್ ತಿಳಿಸಿದ್ದಾರೆ.

ಬಂಧಿತರಲ್ಲಿ ಹಲವರಿಂದ ಅವರ ಗುರುತಿನ ದಾಖಲೆ ಸಲ್ಲಿಸಲು ಸಾಧ್ಯವಾಗಿಲ್ಲ. ಆದುದರಿಂದ ಪರಿಶೀಲನೆ ಪ್ರಕ್ರಿಯೆ ಮುಗಿಯುವ ವರೆಗೆ ಅವರನ್ನು ವಿಚಾರಣೆಗೊಳಪಡಿಸಿ ಕಸ್ಟಡಿಯಲ್ಲೇ ಇರಿಸಿಕೊಳ್ಳಲಾಗುವುದೆಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X