Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆ. 13 ಮತ್ತು 14ರಂದು ಮುಲ್ಕಿಯಲ್ಲಿ ತುಳು...

ಆ. 13 ಮತ್ತು 14ರಂದು ಮುಲ್ಕಿಯಲ್ಲಿ ತುಳು ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ12 Aug 2016 9:58 PM IST
share
ಆ. 13 ಮತ್ತು 14ರಂದು ಮುಲ್ಕಿಯಲ್ಲಿ ತುಳು ಸಮ್ಮೇಳನ

ಮುಲ್ಕಿ, ಆ. 12: ಮುಲ್ಕಿ ತುಳು ಸಮ್ಮೇಳನದ ಸಂಯೋಜನೆಂುಲ್ಲಿ ಟೈಮ್ಸ್ ಆಫ್ ಕುಡ್ಲ ತುಳು ಪತ್ರಿಕೆಯ ನಾಲ್ಕನೆ ವರ್ಷದ ಸವಿನೆನಪಿಗಾಗಿ ಮುಲ್ಕಿಯಲ್ಲಿ ಆಗಸ್ಟ್ 13 ಮತ್ತು 14ರಂದು ಎರಡು ದಿನಗಳ ಕಾಲದಲ್ಲಿ ‘ತುಳು ಐಸಿರದ ಐಸ್ರ’ ಎಂಬ ಹೆಸರಿನಲ್ಲಿ ಬಪ್ಪನಾಡು ಕ್ಷೇತ್ರದ ವಠಾರದಲ್ಲಿ ತುಳು ಸಮ್ಮೇಳನವನ್ನು ಸಂಯೋಜಿಸಲಾಗಿದೆ.

ಮುಂಬೈನ ಹಿರಿಯ ಸಾಹಿತಿ ಡಾ. ಸುನೀತಾ ಎಂ. ಶೆಟ್ಟಿ ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ. ಆ.13ರಂದು ತುಳುವೆರೆ ದಿಬ್ಬಣದೊಂದಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಮ್ಮೇಳನಾಧ್ಯಕ್ಷರ ಆಕರ್ಷಕ ಮೆರವಣಿಗೆ ನಡೆಯಲಿದ್ದು, ದಿಬ್ಬಣಕ್ಕೆ ಬಾಳೆಕೋಡಿ ಶಿಲಾಂಜನ ಕ್ಷೇತ್ರದ ಶ್ರೀ ಶಶಿಕಾಂತ ಮಣಿಸ್ವಾಮೀಜಿ ಚಾಲನೆ ನೀಡುವರು.

ತುಳುವ ಐಸಿರಿದ ಐಸ್ರ ತುಳು ಸಮ್ಮೇಳನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಉದ್ಘಾಟಿಸುವರು. ಉದ್ಘಾಟನಾ ಕಾರ್ಯಕ್ರಮದ ನಂತರ ಪಾರಿ-ಪಾಡ್ದನ, ಸಂಧಿ-ಭೀರ, ಸೆಬಿಸವಾಲ್, ವಣಸ್ ತೆನಸ್‌ದ ಪೊರ್ತು, ಅರು ಪತ್ತಿ ತುಳು ಬಾಸೆ ಗೋಷ್ಠಿ-1ರಲ್ಲಿ ಡಿಜಿಟಲ್ ಮೀಡಿಯಾದಲ್ಲಿ ತುಳು ವಿಕಿಪಿಡಿಯ, ಶಾಲಾ ಮಕ್ಕಳಿಂದ ತೆಲಿಕೆ-ನಲಿಕೆ, ಗೋಷ್ಠಿ-2ರಲ್ಲಿ ಮುಂಬೈಯಲ್ಲಿ ತುಳು ಬಾಸೆದ ಬುಲೆಚ್ಚಿಲ್ ನಡೆಯಲಿದೆ. ಕಾವೂರು ಬಂಟರ ಸಂಘದಿಂದ ಜಾನಪದ ತುಳು ನಲಿಕೆಯನ್ನು ಪ್ರದರ್ಶಿಸಲಿದ್ದಾರೆ. ಗೋಷ್ಟಿ-3ರಲ್ಲಿ ತುಳು ಬಾಷೆ-ನೆಲ-ನೀರು ವಿಷಯದಲ್ಲಿ ನಡೆಯಲಿದೆ. ನಾಗೇಶ್ ಬಪ್ಪನಾಡು ಬಳಗದಿಂದ ವಾದ್ಯ ಗೋಷ್ಠಿ ನಡೆಯಲಿದೆ. ಈ ಸಂದರ್ಭ ತುಳು ಸಿನಿಮಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ತೋರಿದ ಹಿರಿಯರನ್ನು ಸನ್ಮಾನಿಸಲಾಗುವುದು, 2015ರಲ್ಲಿ ಬಿಡುಗಡೆಯಾದ ತುಳು ಸಿನಿಮಾದ ವಿವಿಧ ವಿಭಾಗಗಳ ಟೈಮ್ಸ್ ಆಫ್ ಕುಡ್ಲ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಆ ನಂತರ ಸಾಂಸ್ಕೃತಿಕ ಕಾರ್ಯಕ್ರಮವಾಗಿ ತುಳು ರಂಗದ-ರಂಗುಲು ಕಾರ್ಯಕ್ರಮವನ್ನು ಭೋಜರಾಜ್ ವಾಮಂಜೂರು ಹಾಗೂ ಅರವಿಂದ ಬೋಳಾರ್ ನಡೆಸಿಕೊಡಲಿದ್ದಾರೆ. ಹಾಗೂ ಸೋಮೇಶ್ವರದ ಯಕ್ಷಗಾನ ಕೇಂದ್ರ ಕಲಾಗಂಗೋತ್ರಿಯಿಂದ ಕುಡಿಯನ ಕೊಂಬಿರೆಲ್ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.

ಆಗಸ್ಟ್ 14ರಂದು ಬೆಳಗ್ಗೆ ತುಳು ಸಿನಿಮಾ ಪದರಂಗಿತ ಹಾಗೂ ವಿಶೇಷ ಸಭಾ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 40 ಮಹನೀಯರನ್ನು ಸನ್ಮಾನಿಸಿ ಗೌರವಿಸಲಾಗುವುದು. ಮಾನಂಪಾಡಿಯ ಮಹಿಳಾ ಮಂಡಲ ಹಾಗೂ ಮುಲ್ಕಿ ಯುವವಾಹಿನಿ ಕಲಾವಿದರಿಂದ ತುಳುವರ ಆಚರಣೆ-ನಲಿಕೆ, ಟೈಮ್ಸ್ ಆಫ್ ಕುಡ್ಲಾ ಪತ್ರಿಕಾ ಅಂಕಣಗಾರರ ಗೌರವ, ಸಾಂಸ್ಕೃತಿಕ ಕಾರ್ಯಕ್ರಮದ ಬಹುಮುಖ ಪ್ರತಿಭೆ ತುಳು ಸಿರಿ ಪ್ರಶಸ್ತಿಯನ್ನು ಅದ್ವಿತಾ ಶೆಟ್ಟಿಯವರಿಗೆ ನೀಡಿ ಗೌರವಿಸಲಾಗುವುದು.

ಗೋಷ್ಠಿ-3ರಲ್ಲಿ ಶಾಲೆಯಲ್ಲಿ ಮೂರನೆ ಭಾಷೆಯಾಗಿ ತುಳು ಎಂಬ ವಿಷಯದಲ್ಲಿ ಚರ್ಚೆ ನಡೆಯಲಿದೆ. ಡಾ.ಗಣನಾಥ್ ಶೆಟ್ಟಿ ಎಕ್ಕಾರ್‌ರಿಂದ ತುಳುವ ಗೊಬ್ಬುಲು, ಹಾಗೂ ಸುರತ್ಕಲ್ ಬಂಟರ ಸಂಘ ಮತ್ತು ಮುಲ್ಕಿ ಯುವವಾಹಿನಿಯ ಕಲಾವಿದರಿಂದ ತುಳುವರೆ ಆಚರಣೆ ನಡೆಯಲಿದೆ. ಗೋಷ್ಠಿ-4ರಲ್ಲಿ ತುಳು ಆರಾಧನೆ ಮತ್ತು ಆಚರಣೆ, ಸಸಿಹಿತ್ಲು ಯುವಕ ಮಂಡಲದ ಜಾನಪದ ನಲಿಕೆ ಪ್ರದರ್ಶನ ನಡೆಯಲಿದೆ. ಹಿರಿಯ-ಕಿರಿಯ ಸಾಹತ್ಯಾಸಕ್ತರಿಂದ ಚುಟುಕು ಕವಿಗೋಷ್ಠಿ, ಉಡುಪಿಯ ಶ್ರೀ ಕ್ಷೇತ್ರ ಅಂಬಲಪಾಡಿಯ ಕಲಾ ತಂಡದಿಂದ ತುಳುನಾಡಿನ ಡೋಲು ಪ್ರದರ್ಶನ ನಡೆಯಲಿದೆ.

ಸಮಾರೋಪ ಸಮಾರಂಭವನ್ನು ಸಮ್ಮೇಳನಾಧ್ಯಕ್ಷೆ ಡಾ.ಸುನೀತ ಎಂ.ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ. ಆ ನಂತರ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಕಿನ್ನಿಗೋಳಿಯ ವಿಜಯಾ ಕಲಾವಿದರಿಂದ ಬೈರಾಸ್ ಭಾಸ್ಕರೆ ತುಳು ನಾಟಕ ಪ್ರದರ್ಶನಗೊಳ್ಳಲಿದೆ ಎಂದು ತುಳು ಸಮ್ಮೇಳನ ಸಮಿತಿಯ ಗೌರವಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ಅಧ್ಯಕ್ಷ ಡಾ.ವೈ.ಎನ್.ಶೆಟ್ಟಿ, ಕಾರ್ಯಾಧ್ಯಕ್ಷ ಚಂದ್ರಶೇಖರ ಸುವರ್ಣ, ಪ್ರಧಾನ ಸಂಚಾಲಕ ಎಸ್.ಆರ್.ಬಂಡಿಮಾರ್ ಮತ್ತು ಸಂಚಾಲಕ ವಾಮನ ಇಡ್ಯಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X