ಉಡುಪಿ ನಗರಸಭೆ ವಿರುದ್ಧ ಬಿಜೆಪಿ ಪ್ರತಿಭಟನೆ
![ಉಡುಪಿ ನಗರಸಭೆ ವಿರುದ್ಧ ಬಿಜೆಪಿ ಪ್ರತಿಭಟನೆ ಉಡುಪಿ ನಗರಸಭೆ ವಿರುದ್ಧ ಬಿಜೆಪಿ ಪ್ರತಿಭಟನೆ](https://www.varthabharati.in/sites/default/files/images/articles/2016/08/13/UD-A12 NAGARASABE.jpg)
ಉಡುಪಿ, ಆ.12: ನಗರಸಭೆಯ ಆಡಳಿತ ವೈಫಲ್ಯ ಹಾಗೂ ಭ್ರಷ್ಟಾಚಾರವನ್ನು ವಿರೋಧಿಸಿ ಉಡುಪಿ ನಗರ ಬಿಜೆಪಿ ವತಿಯಿಂದ ಶುಕ್ರವಾರ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾಜಿ ಶಾಸಕ ರಘುಪತಿ ಭಟ್ ಮಾತನಾಡಿ, ಮೊಬೈಲ್ ಟವರ್ ಅಳವಡಿಸಲು ಅನುಮತಿ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸ್ವೀಕರಿಸಿರುವ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಭಟ್ ಅಧಿಕಾರ ದುರುಪಯೋಗ ಪಡಿಸಿಕೊಂಡು ನಗರಸಭೆ ಗಮನಕ್ಕೆ ತಾರದೆ 5,000 ರೂ. ಪಡೆದು ಅನುಮತಿ ನೀಡಿದ್ದಾರೆ ಎಂದು ಆರೋಪಿಸಿದರು.
ಆದುದರಿಂದ ಅಧ್ಯಕ್ಷರನ್ನು ನಗರಸಭಾ ಸದಸ್ಯತ್ವದಿಂದ ಅನುಮಾನತುಗೊಳಿಸಬೇಕು. ಜಿಲ್ಲಾಧಿಕಾರಿ ಸ್ಥಾಯಿ ಸಮಿತಿಯ ಎಲ್ಲ ಕಡತಗಳನ್ನು ಪಡೆದು ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು. ಈ ಕುರಿತ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಪಂ ಅಧ್ಯಕ್ಷ ದಿನಕರ ಬಾಬು, ಬಿಜೆಪಿ ಮುಖಂಡರಾದ ಉದಯ ಕುಮಾರ್ ಶೆಟ್ಟಿ, ಕಿರಣ್ ಕುಮಾರ್, ನಗರಸಭಾ ಸದಸ್ಯರಾದ ಗೀತಾ ಶೇಟ್, ನವೀನ್ ಭಂಡಾರಿ, ರಶ್ಮಿತಾ ಬಾಲಕೃಷ್ಣ, ಮಹೇಶ್ ಠಾಕೂರ್ ಮತ್ತಿತರರು ಉಪಸ್ಥಿತರಿದ್ದರು