Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೂವತ್ತೇ ನಿಮಿಷದಲ್ಲಿ ಚೆನ್ನೈಯಿಂದ...

ಮೂವತ್ತೇ ನಿಮಿಷದಲ್ಲಿ ಚೆನ್ನೈಯಿಂದ ಬೆಂಗಳೂರಿಗೆ !

ವಾರ್ತಾಭಾರತಿವಾರ್ತಾಭಾರತಿ13 Aug 2016 1:08 PM IST
share
ಮೂವತ್ತೇ ನಿಮಿಷದಲ್ಲಿ ಚೆನ್ನೈಯಿಂದ ಬೆಂಗಳೂರಿಗೆ !

ಅಹ್ಮದಾಬಾದ್, ಆ.13: ಚೆನ್ನೈಯಿಂದ ಬೆಂಗಳೂರಿಗೆ ಮೂವತ್ತು ನಿಮಿಷಗಳಿಗೂ ಕಡಿಮೆ ಅವಧಿಯಲ್ಲಿ, ಅದು ಕೂಡ ವಿಶೇಷ ಹಳಿಯೊಂದರಲ್ಲಿ ಸಂಚರಿಸುವುದು ಸಾಧ್ಯವೇ? ವಿಮಾನಯಾನ ದರಕ್ಕಿಂತ ಕಡಿಮೆ ಖರ್ಚಿನಲ್ಲಿ ಇಂತಹ ಒಂದು ಪ್ರಯಾಣ ಸಾಧ್ಯವೇ ಎಂದು ಕೇಳಿದರೆ ಹಲವರು ನಕಾರಾತ್ಮಕ ಉತ್ತರ ನೀಡಬಹುದು.

ಆದರೆ ಇದು ಸಾಧ್ಯ ಎಂದು ಹೇಳುತ್ತಾರೆ ಹೆಚ್ ಟಿ ಟಿ ಎಂಬ ಲಾಸ್ ಏಂಜಲಿಸ್ ಮೂಲದ ಸ್ಟಾರ್ಟ್ -ಅಪ್ ಕಂಪೆನಿಯ ಮುಖ್ಯಸ್ಥ ಜೋಯೆಲ್ ಮೈಕೆಲ್. ಹೈಪರ್ ಲೂಪ್ ಟ್ರಾನ್ಸ್‌ಪೊರ್ಟೇಶನ್ ಟೆಕ್ನಾಲಜೀಸ್ ಎಂಬ ಹೆಸರಿನ ಈ ಸಂಸ್ಥೆಯು  ಪ್ರಯಾಣ ಕ್ಷೇತ್ರದಲ್ಲಿ ಕ್ರಾಂತಿಯನ್ನೇ ಸೃಷ್ಟಿಸಬಲ್ಲ ಟೆಸ್ಲಾ ಸ್ಥಾಪಕ ಇಲೋನ್ ಮಸ್ಕ್ ಎಂಬವರ ಪರಿಕಲ್ಪನೆಯ ದಿ ಹೈಪರ್ ಲೂಪ್ ನಿರ್ಮಿಸಲು ಸಜ್ಜಾಗಿದೆ.

ಹೈಪರ್ ಲೂಪ್ ರೈಲಿನಂತಹ ಒಂದು ಹೈಸ್ಪೀಡ್ ಪ್ರಯಾಣ ಸಾಧನವಾಗಿದ್ದು, ಇಲ್ಲಿ ಪ್ರಯಾಣಿಕರು ಭಾಗಶಃ ವ್ಯಾಕ್ಯೂಮ್ ಇರುವ ಪಾಡ್ ನೊಳಗೆ ಪ್ರಯಾಣಿಸಬೇಕಾಗುತ್ತದೆ. ಇಂತಹ ಒಂದು ವ್ಯಾಕ್ಯೂಮ್ ಟ್ಯೂಬ್ ಪ್ರತಿ ದಿನ 1.44 ಲಕ್ಷ ಪ್ರಯಾಣಿಕರನ್ನು ಸಾಗಿಸುವ ಸಾಮರ್ಥ್ಯ ಹೊಂದಿದ್ದು, ಪ್ರಯಾಣದ ನಡುವೆ 40 ಸೆಕೆಂಡಿನ ವಿರಾಮಗಳಿರುತ್ತವೆ. ಸುಮಾರು 500 ಕಿ.ಮೀ. ದೂರದ ಪ್ರಯಾಣಕ್ಕೆ 30 ಡಾಲರ್ ಅಥವಾ ಸುಮಾರು 2,000 ರೂ. ಟಿಕೆಟ್ ದರ ಇರುವ ಸಾಧ್ಯತೆಯಿದೆ. ಈ ವಾಹನ ಗಂಟೆಗೆ ಅತ್ಯಧಿಕ 12,00 ಕಿ.ಮೀ. ವೇಗದಲ್ಲಿ ಪ್ರಯಾಣಿಸುವ ಅಂದಾಜಿದೆ.

ಪ್ರಸಕ್ತ ಹೆಚ್ ಟಿ ಟಿ ಕ್ಯಾಲಿಫೋರ್ನಿಯಾದ ಕ್ವೇ ಎಂಬಲ್ಲಿ ಐದು ಮೈಲು ಉದ್ದದ ಪರೀಕ್ಷಾ ಟ್ರ್ಯಾಕ್ ಒಂದನ್ನು ಸಿದ್ಧಪಡಿಸುತ್ತಿದ್ದು, ಇದು 2019 ರ ಸುಮಾರಿಗೆ ಸಿದ್ಧಗೊಳ್ಳುವ ನಿರೀಕ್ಷೆಯಿದೆ. ಮರುಬಳಕೆ ಮಾಡಬಲ್ಲ ಹಾಗೂ ಕೈನಟಿಕ್ ಎನರ್ಜಿ ಮೂಲಕ ಈ ವಾಹನ ಕಾರ್ಯನಿರ್ವಹಿಸಲಿದ್ದು ಇದು ಅದರ ಪ್ರಯಾಣ ವೆಚ್ಚವನ್ನು ಕಡಿಮೆಗೊಳಿಸುವಲ್ಲಿ ಮಹತ್ತರ ಪಾತ್ರ ವಹಿಸಲಿದೆ.

ಈ ವರ್ಷದ ಆರಂಭದಲ್ಲಿ ಕಂಪೆನಿ ವಿಯೆನ್ನಾ, ಬ್ರಾಟಿಸ್ಲಾವ ಹಾಗೂ ಬುಡಾಪೆಸ್ಟ್ ನ ನಡುವೆ ಸಾಗುವ ಹೈಪರ್ ಲೂಪ್ ಲೈನ್ ಹಬ್ ನಿರ್ಮಾಣಕ್ಕೆ ಒಪ್ಪಂದವೊಂದಕ್ಕೆ ಸಹಿ ಹಾಕಿದೆ.

ಮೈಕೆಲ್ ಜೋಯೆಲ್ ಅವರು ಸಂಸ್ಥೆಯ ಸಿಒಒ ಆಗಿರುವ ಬಿಬೊಪ್ ಗ್ರೆಸ್ತಾ ಅವರೊಂದಿಗೆ ಮುಂದಿನ ವಾರ ಭೋಪಾಲ್ ನಗರದಲ್ಲಿ ನಡೆಯಲಿರುವ ಐ5 ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಭಾರತದಲ್ಲಿ ಇಂತಹ ಯೋಜನೆಯನ್ನು ಜಾರಿಗೊಳಿಸಬಹುದೇ ಎಂಬ ಬಗ್ಗೆ ಸರಕಾರದೊಂದಿಗೆ ಮಾತುಕತೆ ನಡೆಸುವ ಬಗ್ಗೆ ಯೋಚಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X