Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರದಲ್ಲಿ ಮದ್ಯ ಹೊಂದಿದ್ದ ಯೋಧರ ಸೆರೆ:...

ಬಿಹಾರದಲ್ಲಿ ಮದ್ಯ ಹೊಂದಿದ್ದ ಯೋಧರ ಸೆರೆ: ಕೆರಳಿದ ಸೇನೆ

ವಾರ್ತಾಭಾರತಿವಾರ್ತಾಭಾರತಿ13 Aug 2016 6:50 PM IST
share
ಬಿಹಾರದಲ್ಲಿ ಮದ್ಯ ಹೊಂದಿದ್ದ ಯೋಧರ ಸೆರೆ: ಕೆರಳಿದ ಸೇನೆ

ಪಾಟ್ನಾ,ಆ.13: ಮದ್ಯ ಹೊಂದಿದ್ದ ಆರೋಪದಲ್ಲಿ ಬಿಹಾರದಲ್ಲಿ ಹಲವಾರು ಯೋಧರ ಬಂಧನವು ಭಾರೀ ವಿವಾದ ಸೃಷ್ಟಿಸುವ ಸಾಧ್ಯತೆಯಿದೆ. ಈ ಬಂಧನಗಳು ಅಕ್ರಮವೆಂದು ಹಿರಿಯ ಸೇನಾಧಿಕಾರಿಗಳು ಪ್ರತಿಪಾದಿಸಿದ್ದಾರೆ.
ರಾಜ್ಯ ಸರಕಾರದ ಪಾನನಿಷೇಧ ನೀತಿಯಡಿ ಇತ್ತೀಚಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕ್ಯಾಪ್ಟನ್ ಮತ್ತು ಇತರ ಸೇನಾ ಸಿಬ್ಬಂದಿಗಳನ್ನು ಬಂಧಿಸಿರುವುದು ಗಂಭೀರ ವಿಷಯವಾಗಿದೆ. ಕೊಲೆ,ಕೊಲೆಗೆ ಸಮವಲ್ಲದ ನರಹತ್ಯೆ ಮತ್ತು ಅತ್ಯಾಚಾರ ಅಪರಾಧಗಳನ್ನು ಹೊರತುಪಡಿಸಿ ಸಿವಿಲ್ ನ್ಯಾಯಾಲಯಗಳು ಯೋಧರನ್ನು ವಿಚಾರಣೆಗೊಳಪಡಿಸುವಂತಿಲ್ಲ ಎಂದು ಹೇಳಿದ ಹಿರಿಯ ಸೇನಾಧಿಕಾರಿಯೋರ್ವರು, ಇತರ ಅಪರಾಧಗಳ ವಿಚಾರಣೆಗಾಗಿ ಸೇನೆಯ ಅಧಿಕಾರ ವ್ಯಾಪ್ತಿಯನ್ನು ಸರಕಾರವು ತನ್ನ 1978 ಫೆ.9ರ ಆದೇಶದಲ್ಲಿ ನಿಗದಿಗೊಳಿಸಿದೆ. ಹೆಚ್ಚಿನ ಮಿಲಿಟರಿ ಅಧಿಕಾರಿಗಳಿಗೆ ಇದರ ಪೂರ್ಣ ಅರಿವು ಇಲ್ಲ ಎಂದರು.
ಈ ಮೂರು ನಿರ್ದಿಷ್ಟ ಅಪರಾಧಗಳನ್ನು ಹೊರತುಪಡಿಸಿ ಇತರೆಲ್ಲ ಪ್ರಕರಣಗಳಿಗೂ ಕೋರ್ಟ್ ಮಾರ್ಷಲ್ ಸೂಕ್ತ ಮಾರ್ಗವಾಗಿದೆ. ಸಂಬಂಧಿತ ದಂಡಾಧಿಕಾರಿಗಳು ಆರೋಪಿಗಳನ್ನು ವಿಚಾರಣೆಗಾಗಿ ತಕ್ಷಣ ಸೇನೆಗೆ ಹಸ್ತಾಂತರಿಸಬೇಕು ಎಂದು ಅವರು ತಿಳಿಸಿದರು
 ಸಶಸ್ತ್ರ ಪಡೆಗಳು ತಮ್ಮದೇ ಆದ ನಿಯಮಗಳನ್ನು ಹೊಂದಿದ್ದು, ಕೇಂದ್ರ ಸರಕಾರದ ಅನುಮತಿಯಿಲ್ಲದೆ ಸೇನಾ ಸಿಬ್ಬಂದಿಗಳನ್ನು ಪೊಲೀಸರು ಬಂಧಿಸುವಂತಿಲ್ಲ ಎಂದು ಇನ್ನೋರ್ವ ಅಧಿಕಾರಿ ಹೇಳಿದರು.
  ಸೇನಾ ಸಿಬ್ಬಂದಿಗಳು ಸೇನೆಯ ಅಧಿಕೃತ ಪರವಾನಿಗೆ ಸಹಿತ ಮದ್ಯವನ್ನು ಹೊಂದಿರುತ್ತಾರೆ ಮತ್ತು ರೈಲುಗಳಲ್ಲಿ ಮದ್ಯದೊಂದಿಗೆ ಪ್ರಯಾಣಿಸುವುದು ರೈಲ್ವೆ ರಕ್ಷಣಾ ಪಡೆ(ಆರ್‌ಪಿಎಫ್) ಕಾಯ್ದೆಯನ್ವಯ ಅಕ್ರಮವಲ್ಲ. ಅಲ್ಲದೆ ಬಿಹಾರದ ಹಾಲಿ ಅಬಕಾರಿ ಕಾಯ್ದೆಯಂತೆ ಮದ್ಯವನ್ನು ಹೊಂದಿರುವುದು ಅಪರಾಧವಲ್ಲ ಎಂದು ಪಾಟ್ನಾ ಉಚ್ಚ ನ್ಯಾಯಾಲಯವು ಎತ್ತಿ ಹಿಡಿದಿದೆ. ಹೀಗಾಗಿ ಈ ಎಲ್ಲ ಬಂಧನಗಳು ಅಕ್ರಮವಾಗಿವೆ ಮತ್ತು ಹೊಸ ಕಟ್ಟುನಿಟ್ಟಾದ ಕಾನೂನು ಜಾರಿಗೆ ಬರುವವರೆಗೆ ಅಕ್ರಮವಾಗಿರುತ್ತವೆ ಎಂದು ಅವರು ಹೇಳಿದರು.
ದಂಡು ಪ್ರದೇಶಗಳಲ್ಲಿ ಬಿಹಾರ ಅಬಕಾರಿ ಕಾಯ್ದೆಯು ಹಸ್ತಕ್ಷೇಪ ಮಾಡುವುದಿಲ್ಲವಾದರೂ,ಪ್ರದೇಶದ ಹೊರಗೆ ಸೇನಾ ಸಿಬ್ಬಂದಿಗಳು ಮದ್ಯಪಾನ ಮಾಡುತ್ತಿರುವುದು ಅಥವಾ ಮದ್ಯ ಹೊಂದಿರುವುದು ಪತ್ತೆಯಾದರೆ ಕ್ರಮವನ್ನು ಜರುಗಿಸಲಾಗುತ್ತದೆ ಎಂದು ಅಬಕಾರಿ ಅಯುಕ್ತರು ಬಿಹಾರ ಮತ್ತು ಜಾರ್ಖಂಡ್‌ಗಳಲ್ಲಿಯ ಹಿರಿಯ ಸೇನಾಧಿಕಾರಿಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಯಾಣ ಸಂದರ್ಭದಲ್ಲಿ ಹಲವಾರು ಯೋಧರು ಬಂಧನಕ್ಕೊಳಗಾಗುತ್ತಿದ್ದಾರೆ.
 ಬಿಹಾರ ರೆಜಿಮೆಂಟ್‌ನ 20,000ಕ್ಕೂ ಅಧಿಕ ಯೋಧರು ಜಮ್ಮು-ಕಾಶ್ಮೀರ ಸೇರಿದಂತೆ ದೂರದ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೀಗಿರುವಾಗ ದಿಢೀರ್ ಆಗಿ ಬೇರೆ ಕಡೆ ತೆರಳುವ ಅಥವಾ ರಜೆಯಲ್ಲಿ ಹೋಗುವ ಸಂದರ್ಭಗಳಲ್ಲಿ ಅವರು ಮದ್ಯದೊಂದಿಗೆ ಬಿಹಾರವನ್ನು ಪ್ರವೇಶಿಸುತ್ತಾರೆ ಎಂದು ಹಿರಿಯ ಸೇನಾಧಿಕಾರಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X