Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಪರಿಶ್ರಮ, ಸತತ ಪ್ರಯತ್ನದಿಂದ ಯಶಸ್ಸು...

‘ಪರಿಶ್ರಮ, ಸತತ ಪ್ರಯತ್ನದಿಂದ ಯಶಸ್ಸು ಸಾಧ್ಯ’

‘ಮತ್ತೆ ಮತ್ತೆ ಅಂಬೇಡ್ಕರ್’ ಎಂಬ ಎರಡು ದಿನಗಳ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ13 Aug 2016 10:16 PM IST
share
‘ಪರಿಶ್ರಮ, ಸತತ ಪ್ರಯತ್ನದಿಂದ ಯಶಸ್ಸು ಸಾಧ್ಯ’

ಕಾರವಾರ, ಆ.13: ಸ್ವಾತಂತ್ರ ದೊರಕಿ 7 ದಶಕಗಳು ಕಳೆಯುತ್ತಾ ಬಂದರೂ ಅಸ್ಪಶ್ಯತೆ ನಿವಾರಣೆ ಕುರಿತು ಅರಿವು ಮೂಡಿಸಬೇಕಾದ ಸಂದರ್ಭ ಬಂದಿರುವುದು ವಿಷಾದನೀಯ. ಅಂಬೇಡ್ಕರ್‌ರಂತಹ ಮಹನೀಯರ ದಾರಿದೀಪ ಇದ್ದರೂ ಅಸ್ಪಶ್ಯತೆ ಇಂದಿನ ಸಂಪ್ರದಾಯದ ಹೆಸರಲ್ಲಿ ಉಳಿದು ಬಿಟ್ಟಿದೆ. ಅದನ್ನು ಅರಿವಿನ ಮೂಲಕ ದೂರ ಇಡಬೇಕಾಗಿದೆ ಎಂದು ಉದ್ಯಮಿ, ಚಲನಚಿತ್ರ ನಿರ್ಮಾಪಕ ಸುಬ್ರಾಯ್ ಎಚ್. ವಾಳ್ಕೆ ಅಭಿಪ್ರಾಯಪಟ್ಟರು.

ಕಾರವಾರ ಸರಕಾರಿ ಕಲಾ ಮತ್ತು ವಿಜ್ಞಾನ ಪದವಿ ಕಾಲೇಜಿನಲ್ಲಿ ತಾಲೂಕು ಕಸಾಪ ಮತ್ತು ಜರ್ನಲಿಸ್ಟ್ ಯೂನಿಯನ್ ವತಿಯಿಂದ ಸಂಘಟಿಸಲಾಗಿದ್ದ ‘ಮತ್ತೆ ಮತ್ತೆ ಅಂಬೇಡ್ಕರ್’ ಎಂಬ ಎರಡು ದಿನಗಳ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಅಂಬೇಡ್ಕರ್ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ಸಿಗುವ ಸಂವಿಧಾನ ನೀಡಿದ್ದಾರೆ. ಎಲ್ಲರೂ ಇಂದು ಪರಿಶ್ರಮದಿಂದ ಮುಂದೆ ಬರಲು ಅವಕಾಶಗಳಿವೆ. ಶಿಕ್ಷಣ ಸಂಘಟನೆ ಮತ್ತು ಹೋರಾಟ ಎಂಬ ಮೂರು ಅಂಶಗಳನ್ನು ಸರಿಯಾಗಿ ಅರ್ಥ ಮಾಡಿಕೊಂಡರೆ ಜೀವನದಲ್ಲಿ ಮುಂದೆ ಬರಲು ಸಾಧ್ಯ ಎಂದರು.

 ವಿದ್ಯಾರ್ಥಿಗಳು ಎರಡು ದಿನ ಸತತವಾಗಿ ಅಂಬೇಡ್ಕರ್ ಅವರ ವಿಚಾರಧಾರೆಯನ್ನು ತಜ್ಞರ ಭಾಷಣ, ಚಲನಚಿತ್ರ, ಕ್ರಾಂತಿ ಗೀತೆಗಳ ಮೂಲಕ ಹಾಗೂ ಬುದ್ಧನ ಕಲಾಕೃತಿಗಳ ದರ್ಶನದಿಂದ ತಿಳಿದಿದ್ದೀರಿ. ಇಂತಹ ಅವಕಾಶ ವಿದ್ಯಾರ್ಥಿ ಜೀವನದಲ್ಲಿ ಹೊಸ ಬೆಳಕು ಚೆಲ್ಲುತ್ತದೆ. ಪಠ್ಯದ ಹೊರತಾದ ಚಿಂತನೆಗಳನ್ನು ಕಲಿಯಲು ಇದು ಸಹಾಯಕವಾಗುತ್ತದೆ. ಪರಿಶ್ರಮ ಮತ್ತು ಸತತ ಪ್ರಯತ್ನದಿಂದ ಯಶಸ್ಸು ಸಾಧ್ಯ ಎಂದರು. ಬಡತನದಲ್ಲಿ ಹುಟ್ಟಿ ಬೆಳೆದು ಶಿಕ್ಷಣ ಪಡೆದು ಉದ್ಯಮದಲ್ಲಿ ಯಶಸ್ಸಿನ ಹಾದಿ ಹಿಡಿದು ಚಿತ್ರ ಸಾಹಿತ್ಯ ಬರೆಯುವ ತನಕ ಬೆಳೆದು ಬಂದ ಹಾದಿ ಸಹ ಸತತ ಪ್ರಯತ್ನದಿಂದ ಸಾಧ್ಯವಾಯಿತು ಎಂದು ಸುಬ್ರಾಯ ವಾಳ್ಕೆ ವಿವರಿಸಿದರು. ಸಮಾಜ ಸೇವಕಿ ಅನು ಕಳಸ ಮಾತನಾಡಿ, ಅಸ್ಪಶ್ಯತೆಯನ್ನು ನಾವು ತಿಳುವಳಿಕೆಯಿಂದ ತೊಡೆದು ಹಾಕಬೇಕಿದೆ ಎಂದರು. ಕಾಲೇಜು ಶಿಕ್ಷಣದ ಹಂತದಲ್ಲಿ ಅಂಬೇಡ್ಕರ್ ವಿಚಾರಧಾರೆ ವಿವರವಾಗಿ ನಿಮಗೆ ಸಿಕ್ಕಿದೆ. ನೀವು ಅಂಬೇಡ್ಕರ್ ಅವರಂತೆ ಹೆಚ್ಚು ಹೆಚ್ಚು ಓದುವ ಸಾಧಿಸುವ ಮನಸ್ಸು ಬೆಳೆಸಿಕೊಳ್ಳಿ ಎಂದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಭಾರ ಪ್ರಾಚಾರ್ಯ ಜಯಕರ ಭಂಡಾರಿ, ‘ಮತ್ತೆ ಮತ್ತೆ ಅಂಬೇಡ್ಕರ್’ ಎಂಬ ವಿಚಾರ ಸಂಕಿರಣದ ಮೂಲಕ ಕಾಲೇಜಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮ ನಡೆದಿದೆ. ಇದು ವಿದ್ಯಾರ್ಥಿಗಳಿಗೆ ಹೆಚ್ಚು ಪ್ರಯೋಜನವಾಗಿದೆ ಎಂದರು.

ಅಂಬೇಡ್ಕರ್ ಅರಿವು ಪಡೆದವರು ಹಾಗೂ ಕೆಳವರ್ಗದಿಂದ ಬಂದು ಉದ್ಯೋಗವಕಾಶ ಪಡೆದವರು ಮೇಲ್ಮಟ್ಟಕ್ಕೆ ಬಂದ ನಂತರ, ತಳವರ್ಗದಲ್ಲಿ ಇರುವವರನ್ನು ಮರೆಯದೆ ಮೇಲೆತ್ತಬೇಕು. ನಾವು ನಿಂತು ಬಂದ ನೆಲೆಯನ್ನು ಮರೆಯಬಾರದು ಎಂದು ಜಯಕರ ಅಭಿಪ್ರಾಯಪಟ್ಟರು.ವೇದಿಕೆಯಲ್ಲಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಸುಮಯ್ಯೆ ಸೈಯದ್, ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ. ವಿಜಯಾ ಡಿ.ನಾಯ್ಕ, ಟೈಮ್ಸ್ ಆಫ್ ಇಂಡಿಯಾ ವರದಿಗಾರ ದೀಪಕ್ ಕುಮಾರ್ ಶೈಣ್ವಿ ಉಪಸ್ಥಿತರಿದ್ದರು. ಕಾರವಾರ ತಾಲೂಕು ಕಸಾಪ ಅಧ್ಯಕ್ಷ ನಾಗರಾಜ್ ಹರಪನಹಳ್ಳಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X